Saturday, May 31, 2008

ಬಿಜೆಪಿ ರಥ ರೆಡಿ, ರೈತರ ಸಂಕಟ ನಿವಾರಣೆಗೆ ಬರದಿರಲಿ ಅಡ್ಡಿ..!

ಬಿಜೆಪಿ ರಥ ರೆಡಿ, ರೈತರ ಸಂಕಟ

ನಿವಾರಣೆಗೆ ಬರದಿರಲಿ ಅಡ್ಡಿ..!

ಕೃಷಿಕರ, ಅವರ ಒಡನಾಡಿ ಗೋವುಗಳ ಸಂಕಷ್ಟಗಳನ್ನು ನಿವಾರಿಸಲು ಕಾಯಾ-ವಾಚಾ- ಮನಸಾ ಶ್ರಮಿಸುವ ಅಗತ್ಯವಿದೆ. ರೈತರ ಆತ್ಮಹತ್ಯೆ, ಗೋವುಗಳ ಹತ್ಯೆಗೊಂದು ಇತಿಶ್ರೀ ಹಾಡಬೇಕಾದ ತುರ್ತು ಇದೆ. ಬರಿದಾಗುತ್ತಿರುವ ಭೂಮಿಯ ಒಡಲಿಗೆ ಮಳೆ ನೀರುಕೊಯ್ಲಿನಂತಹ ಸರಳ ವಿಧಾನಗಳ ಮೂಲಕ ಜಲತುಂಬುವ ಜರೂರು ಇದೆ.

ನೆತ್ರಕೆರೆ ಉದಯಶಂಕರ

ಕರ್ನಾಟಕದ 25ನೇ ಮುಖ್ಯಮಂತ್ರಿಗಳಾಗಿ 30 ಮೇ 2008ರ ಶುಕ್ರವಾರ ಮಧ್ಯಾಹ್ನ ಅಧಿಕಾರ ವಹಿಸಿಕೊಂಡಿರುವ ಮಂಡ್ಯದ ಬೂಕನಕೆರೆ ಸಿದ್ಧಲಿಂಗಪ್ಪ ಯಡಿಯೂರಪ್ಪನವರೇ ಅಭಿನಂದನೆಗಳು.
29 ಮಂದಿ ಸಚಿವರ ತಂಡದೊಂದಿಗೆ ರಾಜ್ಯಪಾಲ ರಾಮೇಶ್ವರ ಠಾಕೂರ್ ಅವರಿಂದ ಪ್ರಮಾಣ ವಚನ ಸ್ವೀಕರಿಸುವ ಮೂಲಕ ತಾವು ಇತಿಹಾಸ ನಿರ್ಮಿಸಿದ್ದೀರಿ.

ಇದರೊಂದಿಗೆ ದಕ್ಷಿಣ ಭಾರತದಲ್ಲಿ ಇದೇ ಮೊತ್ತ ಮೊದಲ ಬಾರಿಗೆ ಭಾರತೀಯ ಜನತಾ ಪಕ್ಷ (ಬಿಜೆಪಿ) ಆಡಳಿತದ ಯುಗ ಆರಂಭವಾಗಿದೆ.

ವಿಧಾನಸೌಧದ ಮುಂದೆ ಮಟ ಮಟ ಮಧ್ಯಾಹ್ನದ ವೇಳೆಯಲ್ಲಿ ನೆರೆದಿದ್ದ ಸಹಸ್ರಾರು ಮಂದಿ ಅಭಿಮಾನಿಗಳ ಹರ್ಷೋದ್ಘಾರ, ಘೋಷಣೆಗಳ ಮಧ್ಯೆ ನಡೆದ ಪ್ರಮಾಣ ವಚನ ಸಮಾರಂಭಕ್ಕೆ ಬಿಜೆಪಿಯ ರಾಷ್ಟ್ರಮಟ್ಟದ ಧುರೀಣರಾದ ಎಲ್.ಕೆ. ಅಡ್ವಾಣಿ, ರಾಜನಾಥ್ ಸಿಂಗ್, ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿಯಂತಹ ಹಿರಿಯ ಧುರೀಣರು ಸಾಕ್ಷಿಯಾದರು.

ನೂತನ ಸಚಿವರಾಗಿ ತಮ್ಮ ಜೊತೆಗೆ ಕೆ.ಎಸ್.ಈಶ್ವರಪ್ಪ, ಡಾ.ವಿ.ಎಸ್. ಆಚಾರ್ಯ, ಗೋವಿಂದ ಕಾರಜೋಳ, ರಾಮಚಂದ್ರಗೌಡ, ಸಿ.ಎಂ.ಉದಾಸಿ, ಆರ್. ಅಶೋಕ್, ಮುಮ್ತಾಜ್ ಅಲಿಖಾನ್, ಶೋಭಾ ಕರಂದ್ಲಾಜೆ, ಬಿ.ಎನ್. ಬಚ್ಚೇಗೌಡ, ವಿಶ್ವೇಶ್ವರ ಹೆಗಡೆ ಕಾಗೇರಿ, ಬಿ. ಶ್ರೀರಾಮುಲು, ಕರುಣಾಕರ ರೆಡ್ಡಿ, ಜನಾರ್ದನ ರೆಡ್ಡಿ, ಎಸ್.ಎ. ರವೀಂದ್ರ ನಾಥ್, ಬಸವರಾಜ ಬೊಮ್ಮಾಯಿ, ಎಸ್. ಸುರೇಶ ಕುಮಾರ್, ರೇವು ನಾಯ್ಕ್ ಬೆಳಮಗಿ, ಕೃಷ್ಣ ಪಾಲೆಮಾರ್, ಅರವಿಂದ ಲಿಂಬಾವಳಿ, ಎಸ್.ಕೆ. ಬೆಳ್ಳುಬ್ಬಿ, ಶಿವರಾಜ್ ತಂಗಡಗಿ, ಎಸ್. ಎನ್. ಕೃಷ್ಣಯ್ಯ ಶೆಟ್ಟಿ, ಲಕ್ಷ್ಮಣ ಸವದಿ, ಮುರುಗೇಶ್ ನಿರಾಣಿ, ನರೇಂದ್ರಸ್ವಾಮಿ, ಹಾಲಪ್ಪ ವೆಂಕಟರವಣಪ್ಪ, ಡಿ. ಸುಧಾಕರ್ ಮತ್ತು ಗೂಳಿಹಟ್ಟಿ ಶೇಖರ್ ಅವರೂ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಪಕ್ಷದಲ್ಲಿ ಹಿರಿಯರೂ ಅನುಭವಿಗಳೂ ಆಗಿದ್ದ ಡಿ.ಎಚ್. ಶಂಕರಮೂರ್ತಿ, ಜಗದೀಶ ಶೆಟ್ಟರ ಅವರಂತಹ ಇನ್ನೊಂದಷ್ಟು ಸಹೋದ್ಯೋಗಿಗಳೂ ತಮ್ಮ ಜೊತೆಗಿರಬೇಕಾಗಿತ್ತು. ಆದರೆ ಎರಡನೇ ತಂಡದಲ್ಲಿ ಇಂತಹ ಇನ್ನಷ್ಟು ಪರಿಣತರು ತಮ್ಮ ಜೊತೆಗೂಡಬಹುದು ಎಂಬುದು ಜನರ ನಿರೀಕ್ಷೆ.

ಯಡಿಯೂರಪ್ಪನವರೇ ಅಧಿಕಾರ ಸ್ವೀಕರಿಸಿದ ಆರಂಭದಲ್ಲೇ ದ್ವೇಷ ರಾಜಕಾರಣಕ್ಕೆ ಅವಕಾಶವಿಲ್ಲ, ರೈತರ, ಜನ ಸಾಮಾನ್ಯರ ಹಿತಕ್ಕೆ ಬದ್ಧ, ಮಾಜಿ ರಾಷ್ಟ್ರಪತಿ ಅಬ್ದುಲ್ ಕಲಾಂ ಅವರು ಕರ್ನಾಟಕದ ಅಭಿವೃದ್ಧಿಗಾಗಿ ನೀಡಿದ್ದ 'ವಿಷನ್ 2020' ತಮ್ಮ ಸರ್ಕಾರದ ಆದರ್ಶ, ಪಕ್ಷದ ಚುನಾವಣಾ ಪ್ರಣಾಳಿಕೆಯ ಬುನಾದಿಯೇ ಅದು ಎಂಬುದಾಗಿ ಸ್ಪಷ್ಟ ಪಡಿಸಿದ್ದೀರಿ. ಸಂತೋಷ. ತಮ್ಮ ಈ ನುಡಿಗಳು ಮುಂದಿನ ನಡೆಯಲ್ಲಿ ಪ್ರತಿಫಲಿಸಲಿ ಎಂದು ಹಾರೈಸುತ್ತೇವೆ.

ಈ ಸಂದರ್ಭದಲ್ಲಿ ಯಡಿಯೂರಪ್ಪನವರೇ ಒಂದೆರಡು ಹಳೆ ವಿಚಾರಗಳನ್ನು ನೆನಪಿಗೆ ತರಲೇ ಬೇಕು ಅನ್ನಿಸುತ್ತಿದೆಯಾದ್ದರಿಂದ ಅವುಗಳನ್ನು ಇಲ್ಲಿ ನೆನಪಿಸುತ್ತಿದ್ದೇವೆ.

ಮಂಡ್ಯ ಜಿಲ್ಲೆಯ ಬೂಕನಕೆರೆಯಲ್ಲಿ ಹುಟ್ಟಿದ ತಾವು ಮಹಾ ಹಠವಾದಿ. ಹಿಡಿದ ಕೆಲಸವನ್ನು ಪಟ್ಟು ಹಿಡಿದು ಮಾಡಿ ಮುಗಿಸುವ ಛಲಗಾರ ಎಂಬುದು ಎಲ್ಲರಿಗೂ ಗೊತ್ತು.

ಸದಾ ಶ್ವೇತ ವಸ್ತ್ರಧಾರಿಯಾದ ತಾವು ಸಿಟ್ಟಿಗೆ ಹೆಸರಾದ ವ್ಯಕ್ತಿ. ಆದರೆ ಅದು ಸಾತ್ವಿಕ ಸಿಟ್ಟು. ಈ ಸಿಟ್ಟಿನಿಂದಾಗಿ ಹಲವರಿಗೆ ಸಿಡುಕಿನ ವ್ಯಕ್ತಿಯಂತೆ ಕಂಡರೂ, ಆಂತರ್ಯದಲ್ಲಿ ತಮ್ಮದು ಮೃದು ಸ್ವಭಾವ. ಕೃಷಿಕರು, ಬಡವರ ಕಷ್ಟ ಕಂಡರೆ ಬೆಣ್ಣೆಯಂತೆ ಕರಗುವ ಮನಸ್ಸು.

ಹೋರಾಟದ ಜೀವನವನ್ನೇ ನಡೆಸುತ್ತಾ ಬಂದ ತಮಗೆ ಈಗ ಈಗ 64 ವರ್ಷ. (ಹುಟ್ಟಿದ್ದು: 27-2-1943). ಮಂಡ್ಯ ಜಿಲ್ಲೆ ಕೆ.ಆರ್. ಪೇಟೆ ತಾಲ್ಲೂಕಿನ ಬೂಕನಕೆರೆ ಹುಟ್ಟೂರು. ತಂದೆ ಸಿದ್ಧಲಿಂಗಪ್ಪ. ತಾಯಿ ಪುಟ್ಟತಾಯಮ್ಮ. ಆದರೆ ತಾವು ಬೆಳೆದದ್ದು ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ. ಅದೇ ತಮ್ಮ ಕಾರ್ಯಕ್ಷೇತ್ರವೂ ಆಯಿತು.

ಮುಂದೆ ತಾವು ಕೆಲಸಕ್ಕೆ ಸೇರಿದ್ದ ಸಂಸ್ಥೆಯ ಮಾಲೀಕರ ಪುತ್ರಿ ಮೈತ್ರಾದೇವಿ ಅವರನ್ನು ಕೈ ಹಿಡಿದು ಶಿಕಾರಿಪುರದ ಅಳಿಯನೂ ಆದಿರಿ.

ಇಪ್ಪತ್ತೆರಡರ ತರುಣಾವಸ್ಥೆಯಲ್ಲಿ ತಮ್ಮನ್ನು ಸೆಳೆದದ್ದು ರಾಷ್ಟ್ರೀಯ ಸ್ವಯಂ ಸೇವಕ ಸಂಘ. ಅಲ್ಲಿಂದ ಮುಂದೆ ನಿಮ್ಮದು ನಿರಂತರ ಹೋರಾಟ- ಚಳವಳಿಯ ಬದುಕು. ತುರ್ತು ಪರಿಸ್ಥಿತಿ ವಿರುದ್ಧದ ಹೋರಾಟ, ಜೈಲುವಾಸವೂ ಸೇರಿದಂತೆ ಚಳವಳಿ, ಹೋರಾಟಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುತ್ತಾ ಪಕ್ಷದಲ್ಲಿ ಬಹು ಬೇಗನೇ ಮೇಲಕ್ಕೇರಿದ ತಾವು ಸಮಾಜ - ಸಂಘಟನೆಯಲ್ಲಿ ಕ್ಷಿಪ್ರಗತಿಯಲ್ಲೇ ಮಾನ್ಯತೆ ಪಡೆದಿರಿ.

1975ರಲ್ಲಿ ಶಿಕಾರಿಪುರ ಪುರಸಭೆ ಸದಸ್ಯರಾದ ತಮಗೆ ಎರಡೇ ವರ್ಷದಲ್ಲಿ ಅಧ್ಯಕ್ಷರ ಪಟ್ಟವೂ ಸಿಕ್ಕಿತು. ರಾಜಕೀಯವಾಗಿ ಒಂದೊಂದೇ ಮೆಟ್ಟಿಲು ಏರಿದ ತಾವು 1983ರಲ್ಲಿ ಮೊದಲ ಬಾರಿಗೆ ವಿಧಾನಸಭೆ ಪ್ರವೇಶಿಸಿದಿರಿ.

ರೈತರು, ಬಡವರ ನೋವಿಗೆ ಸ್ಪಂದನೆ, 1983ರಲ್ಲಿ ರಾಮಕೃಷ್ಣ ಹೆಗಡೆ ಸರ್ಕಾರಕ್ಕೆ ಬಿಜೆಪಿ ಹೊರಗಿನಿಂದ ಬೆಂಬಲ ನೀಡಿದಾಗ, ರೈತರ ಸಾಲ ಮನ್ನಾ ಮಾಡುವಲ್ಲಿ ನೀವು ವಹಿಸಿದ್ದ ಶ್ರಮ ಮರೆಯಲಾಗದಂತಹವುದು.

ಯಡಿಯೂರಪ್ಪನವರೇ, ಬಿಜೆಪಿ- ಜನತಾದಳ (ಎಸ್) ಮೈತ್ರಿ ಕುದುರಿ, ಅಸ್ತಿತ್ವಕ್ಕೆ ಬಂದ ಎಚ್. ಡಿ. ಕುಮಾರಸ್ವಾಮಿ ಸಚಿವ ಸಂಪುಟದಲ್ಲಿ ಉಪ ಮುಖ್ಯಮಂತ್ರಿಯಾಗಿ ಹಣಕಾಸು ಖಾತೆ ಹೊಣೆ ಹೊತ್ತಾಗ ಕೃಷಿಕರಿಗೆ ಶೇ.4 ಬಡ್ಡಿ ದರದಲ್ಲಿ ಸಾಲ ಯೋಜನೆ ಜಾರಿಗೆ ತಂದ ಹೆಗ್ಗಳಿಕೆ ನಿಮ್ಮದೇ.
ಈ ಯೋಜನೆಗೆ ರಿಸರ್ವ್ ಬ್ಯಾಂಕ್, ನಬಾರ್ಡ್ ಸೇರಿದಂತೆ ಬಹುತೇಕ ಕಡೆಗಳಿಂದ ಪ್ರಬಲ ವಿರೋಧ ವ್ಯಕ್ತವಾದರೂ ಅದ್ಯಾವುದಕ್ಕೂ ಹೆದರದೆ ತರಾತುರಿಯಲ್ಲಿ ಸರ್ಕಾರಿ ಆದೇಶ ಹೊರಡಿಸಿದಿರಿ.

ಜೊತೆಗೇ ರೈತರ ಸಾಲ ಮನ್ನಾ ಮಾಡಬೇಕೆಂಬ ಮಿತ್ರ ಪಕ್ಷ ಜೆಡಿಎಸ್ ಒತ್ತಡಕ್ಕೂ ಮಣಿದು ಸಾಲ ಮನ್ನಾ ಯೋಜನೆಗೆ ಹಸಿರು ನಿಶಾನೆ ತೋರಿದಿರಿ. ರೈತರ ಜೀವ ನಾಡಿಗಳಾದ ಭಾರತೀಯ ಗೋವುಗಳ ಸಂರಕ್ಷಣೆಗೆ ಹೊಸನಗರದ ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ ಜನ ಜಾಗೃತಿ ಚಳವಳಿ ಆರಂಭಿಸಿದಾಗ ಟೀಕೆಗಳಿಗೆ ಜಗ್ಗದೆ ಮುಂಗಡ ಪತ್ರದಲ್ಲೇ ಗೋ ಸಂರಕ್ಷಣೆ ಕಾರ್ಯಕ್ಕೆ, ವಿಶ್ವ ಗೋ ಸಮ್ಮೇಳನಕ್ಕೆ ತಾವು ಹಣಕಾಸು ಒದಗಿಸಿದ್ದು ಸಣ್ಣ ಕೆಲಸವೇನಲ್ಲ.

ಜೀತಮುಕ್ತರ ಪರ ತಿಂಗಳುಗಟ್ಟಲೆ ಹೋರಾಟ, ಶಿಕಾರಿಪುರದಿಂದ ಶಿವಮೊಗ್ಗದವರೆಗೆ ಪಾದಯಾತ್ರೆ ಮಾಡಿ ಪರಿಹಾರ ಕೊಡಿಸಿದ್ದು, ಸಿ ಮತ್ತು ಡಿ ವರ್ಗದ ಜಮೀನನ್ನು ರೈತರಿಂದ ಕಸಿದು ಅರಣ್ಯ ಇಲಾಖೆಗೆ ಕೊಡುವ ಸರ್ಕಾರದ ತೀರ್ಮಾನ ವಿರೋಧಿಸಿ ವಿಧಾನಸಭೆ ಒಳಗೆ, ಹೊರಗೆ ಪ್ರತಿಭಟನೆ ನಡೆಸಿದ್ದು, ಈ ಸಂಬಂಧದ ಮಸೂದೆ ಅಂಗೀಕಾರವಾದಾಗ ಸದನದಲ್ಲಿ ಅತ್ತದ್ದು ಇವೆಲ್ಲ ಇತಿಹಾಸ. ತಮ್ಮ ಕಣ್ಣೀರಿಗೆ ಕರಗಿ ಸರ್ಕಾರ ಮಸೂದೆಯನ್ನೇ ಹಿಂದಕ್ಕೆ ಪಡೆದಿತ್ತು ಎಂಬುದು ಮರೆತು ಹೋಗುವ ವಿಚಾರವಲ್ಲ.

ತಮ್ಮ ಹೋರಾಟಗಳನ್ನು ಪಟ್ಟಿ ಮಾಡಿದರೆ ಅದು ಹನುಮಂತನ ಬಾಲದಂತೆ ಬೆಳೆಯುತ್ತದೆ. ಒಂದಲ್ಲ, ಎರಡಲ್ಲ, ನೂರಾರು. ಐದು ವರ್ಷಗಳ ಹಿಂದೆ ಬಗರ್ ಹುಕುಂ ಸಾಗುವಳಿದಾರರ ಪರ ಒಂದು ವಾರ ಅಹೋರಾತ್ರಿ ಧರಣಿ ಮಾಡಿದ್ದು, ಕಾವೇರಿಯೇ ಆಗಲಿ ಅಥವಾ ಕೃಷ್ಣೆಯೇ ಇರಲಿ ನದಿ ನೀರಿನ ಹಂಚಿಕೆ ವಿವಾದ ಎದುರಾದಾಗ ದನಿ ಎತ್ತಿದ್ದು, ದೇಶದ ಅರ್ಥ ವ್ಯವಸ್ಥೆಯನ್ನೇ ಬುಡಮೇಲು ಮಾಡಿದ ಕರೀಂಲಾಲ್ ತೆಲಗಿಯ ಛಾಪಾ ಕಾಗದ ಹಗರಣದ ವಿವರಗಳನ್ನು ಜೀವದ ಹಂಗು ತೊರೆದು ಬಯಲು ಮಾಡಿದ್ದು ನಿಮ್ಮ ಛಲ ಬಿಡದ ಹೋರಾಟಕ್ಕೆ ಸಾಕ್ಷಿ.

ಆರು ಸಲ ವಿಧಾನಸಭೆ, ಒಂದು ಬಾರಿ ವಿಧಾನಪರಿಷತ್ತಿಗೆ ಆಯ್ಕೆಯಾಗಿರುವ ತಾವು, ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ಪಕ್ಷಕ್ಕೆ ಭದ್ರ ನೆಲೆ ಒದಗಿಸಿದವರು. ವಿರೋಧ ಪಕ್ಷದ ನಾಯಕರಾಗಿ ಲೆಕವಿಲ್ಲದಷ್ಟು ಬಾರಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡವರು.

ಶಿವಮೊಗ್ಗ ಜಿಲ್ಲೆಯ ಸೋಗಾನೆ ಬಳಿ ವಿಮಾನ ನಿಲ್ದಾಣಕ್ಕೆ ಸ್ವಾಧೀನ ಮಾಡಿಕೊಂಡ ಜಮೀನಿಗೆ ಕೆಲವೇ ವಾರಗಳಲ್ಲಿ ಪರಿಹಾರ ವಿತರಿಸಿ ಎಲ್ಲರೂ ಮೂಗಿನ ಮೇಲೆ ಬೆರಳು ಇಟ್ಟುಕೊಳ್ಳುವಂತೆ ಮಾಡಿದವರು ತಾವೇ ಅಲ್ಲವೇ?

ಇದೇ ವಿಮಾನ ನಿಲ್ದಾಣ ಯೋಜನೆಯಿಂದ ನೆಲೆ ಕಳೆದುಕೊಂಡ ಬಗರ್ ಹುಕುಂ ರೈತರಿಗೂ ನಿರೀಕ್ಷೆ ಮೀರಿ ಪರಿಹಾರ ಕೊಟ್ಟು ಹೊಸ ಪರಂಪರೆಯನ್ನೇ ಹುಟ್ಟು ಹಾಕಿದ ಹೆಗ್ಗಳಿಕೆ ತಮ್ಮದೇ.
ಜನತಾದಳದ ಜೊತೆಗಿನ ಮೈತ್ರಿ ಮುರಿದುಹೋಗಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರೂ ಮುಂದುವರೆಯಲಾಗದೇ ಹೋದಾಗ ಛಲ ಬಿಡದ ತ್ರಿವಿಕ್ರಮನಂತೆ ರಾಜ್ಯವ್ಯಾಪಿ ಸಂಚಾರ, ಪ್ರಚಾರ ಮಾಡಿ ಪಕ್ಷವು ಮತ್ತೆ ಬಹುತೇಕ ಸ್ವಂತ ಬಲದ ಮೇಲೆ ಸರ್ಕಾರ ಸ್ಥಾಪಿಸುವಂತೆ ಮಾಡಿದ್ದೂ ನಿಮ್ಮ ಸಾಧನೆಗಳ ಪಟ್ಟಿಗೆ ಸೇರುವ ವಿಚಾರವೇ.

ಇಂತಹ ಹೊತ್ತಿನಲ್ಲಿ ನಿಮ್ಮ ಜೊತೆಗೆ ಸಹಕರಿಸಿದ ಇತರ ಎಲ್ಲ ನಾಯಕರು, ಬೆನ್ನುಲುಬಾಗಿ ದುಡಿದ ಕಾರ್ಯಕರ್ತರ ಶ್ರಮವೂ ಸಣ್ಣದೇನಲ್ಲ. ಅವರೆಲ್ಲರ ಸಂಘಟಿತ ಯತ್ನದ ಫಲವಾಗಿಯೇ ಪಕ್ಷಕ್ಕೆ ಇಂದು ದಕ್ಷಿಣ ಭಾರತದಲ್ಲಿ ಅಧಿಕಾರದ ಹೆಬ್ಬಾಗಿಲು ತೆರೆಯಲು ಸಾಧ್ಯವಾಗಿದೆ ಎಂಬುದು ಮರೆಯಲಾಗದ, ಮರೆಯಬಾರದ ಸತ್ಯ.

ರಾಜ್ಯದಲ್ಲಿ ಹೊಸ ಶಕೆ ಆರಂಭಿಸಿರುವ ತಮ್ಮ ನೇತೃತ್ವದ ಬಿಜೆಪಿ ಸರ್ಕಾರ ಓಟು ಕೊಟ್ಟ ಮತದಾರರನ್ನು, ವಿಶೇಷವಾಗಿ ಪಕ್ಷವನ್ನು ಮೇಲಕ್ಕೆ ಎತ್ತಿರುವ ರೈತ ಸಮುದಾಯವನ್ನು ಮರೆಯದೆ ಅವರ ಏಳಿಗೆಗಾಗಿ ದುಡಿಯುವ ಅಗತ್ಯವಿದೆ. ಕೃಷಿಕರ, ಅವರ ಒಡನಾಡಿ ಗೋವುಗಳ ಸಂಕಷ್ಟಗಳನ್ನು ನಿವಾರಿಸಲು ಕಾಯಾ-ವಾಚಾ- ಮನಸಾ ಶ್ರಮಿಸುವ ಅಗತ್ಯವಿದೆ. ರೈತರ ಆತ್ಮಹತ್ಯೆ, ಗೋವುಗಳ ಹತ್ಯೆಗೊಂದು ಇತಿಶ್ರೀ ಹಾಡಬೇಕಾದ ತುರ್ತು ಇದೆ. ಬರಿದಾಗುತ್ತಿರುವ ಭೂಮಿಯ ಒಡಲಿಗೆ ಮಳೆ ನೀರುಕೊಯ್ಲಿನಂತಹ ಸರಳ ವಿಧಾನಗಳ ಮೂಲಕ ಜಲತುಂಬುವ ಜರೂರು ಇದೆ.

ನೆಲ- ಜಲ ಸಮೃದ್ಧಿಯ ಈ ತುರ್ತು ಕರ್ತವ್ಯವನ್ನು ನೆನಪಿಸುತ್ತಾ 'ಪರ್ಯಾಯ' ತಮ್ಮ ನೇತೃತ್ವದ ಹೊಸ ಸರ್ಕಾರವನ್ನು ಅಭಿನಂದಿಸುತ್ತದೆ. ಪೂರ್ಣಾವಧಿ ಬಾಳಲಿ ಎಂದು ಹಾರೈಸುತ್ತದೆ.

ಇಂದಿನ ಇತಿಹಾಸ History Today ಮೇ 31

ಇಂದಿನ ಇತಿಹಾಸ

ಮೇ 31

ನಾತ್ಸಿ ಕ್ರಿಮಿನಲ್ ಅಡಾಲ್ಫ್ ಇಚ್ಮನ್ ಗೆ ಇಸ್ರೇಲಿನಲ್ಲಿ ಗಲ್ಲು ವಿಧಿಸಲಾಯಿತು. ಇದು ಇಸ್ರೇಲಿನ ಪ್ರಪ್ರಥಮ ಗಲ್ಲು ಶಿಕ್ಷೆ.

2007: ಭಾಷಾ ಮಾಧ್ಯಮದ ಉಲ್ಲಂಘನೆಯ ಆರೋಪದಿಂದ ಮಾನ್ಯತೆ ಕಳೆದುಕೊಂಡ ಖಾಸಗಿ ಶಾಲೆಗಳ ಮಾನ್ಯತೆ ರದ್ದತಿಗೆ ತಾನು ಈ ಹಿಂದೆ ನೀಡಿದ ತಡೆಯಾಜ್ಞೆಯನ್ನು ಹೈಕೋರ್ಟ್ ಜೂನ್ 14ರವರೆಗೆ ವಿಸ್ತರಿಸಿತು.

2007: ಶಸ್ತ್ರಾಸ್ತ್ರ ಮದ್ದುಗುಂಡು, ಮದ್ದುಗುಂಡು ಸಾಗಣೆ, ಅಕ್ರಮವಾಗಿ ಶಸ್ತ್ರಾಸ್ತ್ರ ಹೊಂದಿರುವುದು ಮತ್ತು 1993ರ ಮುಂಬೈ ಸರಣಿ ಬಾಂಬ್ ಸ್ಫೋಟದ ಸಂಚಿನಲ್ಲಿ ವಹಿಸಿದ ಪಾತ್ರಕ್ಕಾಗಿ ಏಳು ಮಂದಿಗೆ ವಿಶೇಷ ಟಾಡಾ ನ್ಯಾಯಾಲಯವು ಐದು ವರ್ಷಗಳ ಕಠಿಣ ಸಜೆಯಿಂದ ಜೀವಾವಧಿ ಸಜೆವರೆಗಿನ ಶಿಕ್ಷೆಗಳನ್ನು ವಿಧಿಸಿತು.

2007: ಅಗ್ಗದ ದರದ ವಿಮಾನಯಾನ ಸಂಸ್ಥೆ ಏರ್ ಡೆಕ್ಕನ್ ತನ್ನ ಶೇಕಡಾ 26ರಷ್ಟು ಪಾಲನ್ನು ವಿಜಯ ಮಲ್ಯ ನೇತೃತ್ವದ ಯುಬಿ ಹೋಲ್ಡಿಂಗ್ಸ್ ಕಂಪೆನಿಗೆ ಮಾರಾಟ ಮಾಡಿರುವುದಾಗಿ ಘೋಷಿಸಿತು.

2007: ಜೈಬಾಸಾ ಬೊಕ್ಕಸದಿಂದ 1990ರ ದಶಕದಲ್ಲಿ 48 ಕೋಟಿ ರೂಪಾಯಿಗಳನ್ನು ಅಕ್ರಮವಾಗಿ ಪಡೆದುಕೊಂಡದ್ದಕ್ಕಾಗಿ ರೈಲ್ವೆ ಸಚಿವ ಲಾಲು ಪ್ರಸಾದ್ ಅವರ ಇಬ್ಬರು ಸೋದರಳಿಯಂದಿರು ಸೇರಿದಂತೆ ಒಟ್ಟು 58 ಮಂದಿಗೆ ಎರಡೂವರೆ ವರ್ಷಗಳಿಂದ 6 ವರ್ಷಗಳವರೆಗಿನ ಸೆರೆವಾಸದ ಶಿಕ್ಷೆಯನ್ನು ಮೇವು ಹಗರಣದ ವಿಚಾರಣೆ ನಡೆಸಿದ ವಿಶೇಷ ಸಿಬಿಐ ನ್ಯಾಯಾಲಯವು ವಿಧಿಸಿತು.

2007: ನೇತಾಜಿ ಸುಭಾಶ್ ಚಂದ್ರ ಬೋಸ್ ಅವರ ನಿಗೂಢ ಕಣ್ಮರೆ/ಸಾವಿಗೆ ಸಂಬಂಧಿಸಿದ ಕಡತವನ್ನು 30 ವರ್ಷಗಳ ಹಿಂದೆ ನಾಶ ಪಡಿಸಿದ್ದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಕೇಳಿ ಕೇಂದ್ರೀಯ ಮಾಹಿತಿ ಆಯೋಗದ ಮುಂದೆ ಸಲ್ಲಿಸಲಾದ ಅರ್ಜಿಯನ್ನು ಪ್ರಧಾನ ಮಂತ್ರಿಗಳ ಕಚೇರಿ ಬಲವಾಗಿ ವಿರೋಧಿಸಿತು. ದೆಹಲಿ ಮೂಲಕ ಮಿಷನ್ ನೇತಾಜಿ ಸಂಸ್ಥೆ ಈ ಅರ್ಜಿ ಸಲ್ಲಿಸಿತ್ತು.

2006: ತತ್ ಕ್ಷಣ ಕರ್ತವ್ಯಕ್ಕೆ ಹಾಜರಾಗುವಂತೆ ಸುಪ್ರೀಂಕೋರ್ಟ್ ಆದೇಶಿಸಿದ್ದನ್ನು ಅನುಸರಿಸಿ ನವದೆಹಲಿಯ ಎಲ್ಲ ಪ್ರಮುಖ ವೈದ್ಯಕೀಯ ಕಾಲೇಜು ಆಸ್ಪತ್ರೆಗಳ ಸ್ಥಾನೀಯ ವೈದ್ಯರು ಮುಷ್ಕರಕ್ಕೆ ಅಂತ್ಯ ಘೋಷಿಸಿದರು. ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಮೀಸಲಾತಿ ವಿವಾದದ ಹಿನ್ನೆಲೆಯಲ್ಲಿ 20 ದಿನಗಳಿಂದ ವೈದ್ಯರು ಅಸಹಕಾರ ಚಳವಳಿ ನಡೆಸಿದ್ದರು.

2006: ಬ್ರಹ್ಮೋಸ್ ಸೂಪರ್ ಸಾನಿಕ್ ಕ್ರೂಸ್ ಕ್ಷಿಪಣಿಯ 12ನೇ ಹಾರಾಟ ಪರೀಕ್ಷೆಯನ್ನು ರಾಜಸ್ಥಾನ ಮರುಭೂಮಿಯಲ್ಲಿ ಯಶಸ್ವಿಯಾಗಿ ನಡೆಸಲಾಯಿತು.

2006: ಒರಿಸ್ಸಾದ ಕರಾವಳಿಯ ಆತಾಲ ಗ್ರಾಮದ ನಿವಾಸಿ ಬಸುದೇವ್ ಭೋಯಿ ಅವರ ಪುತ್ರಿ 30 ವರ್ಷದ ಬಿಂಬಾಲಿ ಭೋಯಿ ಎಂಬ ತರುಣಿ ಈ ದಿನ ನಾಗದೇವತೆಯನ್ನು ಶಾಸ್ತ್ರೋಕ್ತವಾಗಿ ಮದುವೆಯಾದಳು. ತನ್ನನ್ನು ವರಿಸಲು ಬಂದ ಯಾವುದೇ ವರ ಒಪ್ಪದೇ ಹೋದುದರಿಂದ ಬೇಸತ್ತ ಆಕೆ ಕೊನೆಗೆ ನಾಗದೇವತೆಯನ್ನು ಮದುವೆಯಾಗಲು ನಿರ್ಧರಿಸಿದಳು. ಕೆಲವು ದಿನಗಳ ಹಿಂದೆ 30ರ ಹರೆಯದ ಯುವಕನೊಬ್ಬ ಆಕೆಯ ತಾಯಿಯ ಬಳಿ ನಿಮ್ಮ ಮಗಳು 14 ವರ್ಷದಿಂದ ಪೂಜಿಸುತ್ತಾ ಬಂದ ನಾಗರ ಹಾವನ್ನು ಮದುವೆಯಾಗಲಿ ಎಂದು ಹೇಳಿದ್ದು ಹಾಗೂ ಇದಕ್ಕೂ ಮೊದಲು ಒಂದು ದಿನ ಮನೆಯ ಹಿಂಬದಿಯ ಹುತ್ತದಲ್ಲಿ ಹಾವು ಬಿಂಬಾಲಿಗೆ ದರ್ಶನ ನೀಡಿದ ಘಟನೆ ನಡೆದು, ಆ ಬಳಿಕ ಆಕೆ ಆ ಹಾವಿನೊಂದಿಗೆ ಪ್ರೀತಿ ಹೊಂದಿದ್ದಳು. ಕುಟುಂಬ ಸದಸ್ಯರು ಮೊದಲು ಈ ಮದುವೆಗೆ ಒಪ್ಪದಿದ್ದರೂ ನಂತರ ಗ್ರಾಮದ ಹಿರಿಯರ ಸಲಹೆ ಮೇರೆಗೆ ಆಕೆಗೂ ಕಂಚಿನಿಂದ ಮಾಡಿದ ಹಾವಿನ ಪ್ರತಿರೂಪಕ್ಕೂ ಶಾಸ್ತ್ರೋಕ್ತವಾಗಿ ಮದುವೆ ನೆರವೇರಿಸಲಾಯಿತು.

1996: ಹಿರಿಯ ಸಮಾಜವಾದಿ ಚಿಂತಕ ಜೆ.ಎಚ್. ಪಟೇಲ್ ಅವರು ಈದಿನ ಕರ್ನಾಟಕದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದರು.

1988: ಈ ದಿನವನ್ನು `ತಂಬಾಕುರಹಿತ ದಿನ' ಎಂದು ಆಚರಿಸಬೇಕು ಎಂದು ವಿಶ್ವ ಸ್ವಾಸ್ಥ್ಯ ಸಂಸ್ಥೆ ಘೋಷಿಸಿತು.

1962: ನಾತ್ಸಿ ಕ್ರಿಮಿನಲ್ ಅಡಾಲ್ಫ್ ಇಚ್ಮನ್ ಗೆ ಇಸ್ರೇಲಿನಲ್ಲಿ ಗಲ್ಲು ವಿಧಿಸಲಾಯಿತು. ಇದು ಇಸ್ರೇಲಿನ ಪ್ರಪ್ರಥಮ ಗಲ್ಲು ಶಿಕ್ಷೆ.

1939: ಜೈನ ಸಾಹಿತ್ಯ, ಸಿದ್ಧಾಂತಗಳಿಗೆ ಮಹತ್ವದ ಕಾಣಿಕೆಗಳನ್ನು ನೀಡಿದ ಸಾಹಿತಿ ಡಾ. ಎಸ್.ಪಿ. ಪಾಟೀಲ ಅವರು ಪೀರಗೌಡ ಧರ್ಮ ಗೌಡ ಪಾಟೀಲ- ಪದ್ಮಾವತಿ ದಂಪತಿಯ ಪುತ್ರನಾಗಿ ಮಹಾರಾಷ್ಟ್ರದ ಸಾಂಗಲಿಯಲ್ಲಿ ಈದಿನ ಜನಿಸಿದರು.

1928: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಕ್ರಿಕೆಟಿಗ ಪಂಕಜ್ ಖಿರೋಡ್ ಜನನ.

1911: ಜಗತ್ತಿನ ಅತ್ಯಾಧುನಿಕ ನೌಕೆ `ಟೈಟಾನಿಕ್' ಬೆಲ್ ಫಾಸ್ಟ್ ನಿಂದ ತನ್ನ ಮೊದಲ ಪಯಣ ಆರಂಭಿಸಿತು.

1845; ರೂಕ್ಸ್ ಇವೆಲಿನ್ ಬೆಲ್ ಕ್ರಾಂಪ್ಟನ್ (1845-1940) ಜನ್ಮದಿನ. ಬ್ರಿಟಿಷ್ ಸಂಶೋಧಕನಾದ ಈತ ವಿದ್ಯುತ್ ದೀಪಗಳ ಅಭಿವೃದ್ಧಿಯಲ್ಲಿ ಮಹತ್ವದ ಪಾತ್ರ ವಹಿಸಿದ.

1818: ವಿಲಿಯಂ ಕ್ಯಾರೀ ಮತ್ತು ಸೆರಾಂಪೋರಿನ ಜೊಶುವಾ ಮಾರ್ಶ್ ಮ್ಯಾನ್ ನೇತೃತ್ವದಲ್ಲಿ ಬಂಗಾಳಿಯಲ್ಲಿ ಪ್ರಪ್ರಥಮ ಪ್ರಾದೇಶಿಕ ಭಾಷಾ ಪತ್ರಿಕೆ `ಸಮಾಚಾರ್ ದರ್ಪಣ್' ಪ್ರಕಟಣೆ ಆರಂಭವಾಯಿತು.

1578: ರೋಮ್ ನ ಸಮಾಧಿ ಗುಹೆಗಳು ಅನಿರೀಕ್ಷಿತವಾಗಿ ಪತ್ತೆಯಾದವು. ಉತ್ತರ ರೋಮ್ ನ ಪ್ರವೇಶದ್ವಾರದಲ್ಲಿ ಕೆಲವು ಕಾರ್ಮಿಕರ ಭೂಮಿ ಅಗೆಯುತ್ತಿದ್ದಾಗ ಸಮಾಧಿಗುಹೆಯೊಂದರ ಸುರಂಗ ಕಾಣಿಸಿ, ಸಮಾಧಿ ಗುಹೆ ಬೆಳಕಿಗೆ ಬಂತು. ಹದಿನೈದು ವರ್ಷಗಳ ನಂತರ ನಂತರ 1593ರಲ್ಲಿ 18ರ ತರುಣ ಆಂಟಾನಿಯೋ ಬೋಸಿಯೋ ಈ ಗುಹಾ ಸಮಾಧಿಗಳ ಪತ್ತೆ ಕಾರ್ಯ ಆರಂಭಿಸಿದ. ತಮ್ಮ ಜೀವಮಾನಪೂರ್ತಿ ಇದೇ ಕಾರ್ಯ ಮಾಡಿದ ಈತ ಈ ಸಮಾಧಿ ಗುಹೆಗಳ ಮಧ್ಯೆ ಸಂಪರ್ಕ ಇದ್ದುದನ್ನು ಪತ್ತೆ ಹಚ್ಚಿದ. ಅವುಗಳಿಗೆ 30 ಹೆಚ್ಚುವರಿ ಪ್ರವೇಶದ್ವಾರಗಳು ಇದ್ದುದನ್ನೂ ಪತ್ತೆ ಮಾಡಿದ. ಈ ಸಮಾಧಿ ಗುಹೆಗಳು ಮೂರನೇ ಶತಮಾನದಷ್ಟು ಪ್ರಾಚೀನ ಕಾಲದವು. ಸ್ಮಶಾನಗಳಲ್ಲಿ ಶವ ಹೂಳದಂತೆ ಬಹಿಷ್ಕೃತರಾಗಿದ್ದ ಕ್ರೈಸ್ತರು ಈ ಗುಹೆಗಳಲ್ಲಿ ಶವಗಳನ್ನು ಹೂಳುತ್ತಿದ್ದರು.

(ಸಂಗ್ರಹ: ನೆತ್ರಕೆರೆ ಉದಯಶಂಕರ)

Friday, May 30, 2008

ಬತ್ತದ ಚಿಂತನೆಗಾಗಿ 'ಭತ್ತ ಉತ್ಸವ..!' / Bhatta Utsava (Rice Utsav)!

Bhatta Utsava

(Rice Utsav)!


Prices of Rice are touching sky. Reason to this is attraction towards commercial crops, IT, BT and conversion of agricultural land for non agricultural purposes. As result of all these, traditional Rice seeds and their varities are in the verge of vanishing. Sahaja Samrudda with co operation of several organisations has organised two days Rice Utsav at Banavasi, Sirsi Taluk to think on these aspects.

Rice is Asia's most deeply revered treasure. It is central to the Asian way of life; its culture, spirituality, traditions and norms. The staple food of three billion Asians, half the world's population, Rice is Life to the people of Asia.

In the last five decades the rice heritage has been eroded and is under grave danger of being lost completely. The introduction of hybrid rice serves as a springboard to genetically engineered (GE) rice. Rice seed varieties are moving from the hands of farmers, particularly women, and indigenous communities to those of seed companies and privatized agencies.

Pesticide Action Network Asia and the Pacific (PAN AP) launched Save our Rice Campaign. Peoples' movements and NGO's across Asia have joined in this Campaign to protect our rice culture and wisdom.

Sahaja Samrudha in collaboration with Thanal, Kerala has initiated Save Our Rice Campaign in Karnataka and in this context is conducting a 'Rice Utsav ' on 7th and 8 th June 2008 at Banavasi, Sirsi Taluk, Karnatka.

Interested can contact: Krishna Prasad Director, Sahaja Samrudha http://www.sahajasamrudha.org/
Mobile: 9880862058

ಬತ್ತದ ಚಿಂತನೆಗಾಗಿ

'ಭತ್ತ ಉತ್ಸವ..!'


ಸಮಸ್ತರ ಅನ್ನದ ಬಟ್ಟಲು ತುಂಬುವ ಭತ್ತ ಅವಸಾನದತ್ತ ಸಾಗುತ್ತಿದೆ. ಭತ್ತದ ತೆನೆಗಳು ತುಂಬಿ ತುಳುಕಾಡಬೇಕಾಗಿದ್ದ ಹೊಲ ಗದ್ದೆಗಳು, ವಾಣಿಜ್ಯ ಬೆಳೆಗಳ ತೋಟಗಳಾಗಿಯೋ, ಐಟಿ - ಬಿಟಿ ಉದ್ಯಮಗಳ ಆಡುಂಬೊಲವಾಗಿಯೋ, ವಸತಿ, ವಾಣಿಜ್ಯ ಕಟ್ಟಡಗಳ ಸಂತೆಗಳಾಗಿಯೋ ಮಾರ್ಪಡುತ್ತಿವೆ. ಪರಿಣಾಮ: ಅಕ್ಕಿಯ ಬೆಲೆ ಗಗನಕ್ಕೆ ಏರುತ್ತಿದೆ. ಹಸಿವು ಇಂಗಿಸುವ ಅಕ್ಕಿ ಬೇಕೆಂದರೆ ಭತ್ತದ ಸಂತಾನ ಉಳಿಸಬೇಕು. ಈ ನಿಟ್ಟಿನ ಚಿಂತನೆಗಾಗಿ ಬನವಾಸಿಯಲ್ಲಿ ನಡೆಯಲಿದೆ 'ಭತ್ತ ಉತ್ಸವ...!'

ನೆತ್ರಕೆರೆ ಉದಯಶಂಕರ

ಎಲ್ಲಾದರೂ ಸರಿ, ದಿನಸಿ ಅಂಗಡಿಗೆ ಹೋಗಿ ಅಕ್ಕಿಯ ಬೆಲೆ ಕೇಳಿ. ತಲೆ ತಿರುಗುತ್ತದೆ. ಏಕೆಂದರೆ ಅಕ್ಕಿಯ ಬೆಲೆ ದಿನದಿಂದ ದಿನಕ್ಕೆ ಗಗನಕ್ಕೆ ಏರುತ್ತಿದೆ. ಹೀಗೇಕೆ ಎಂದು ಒಂದು ದಿನವಾದರೂ ಕೂತು ಚಿಂತಿಸಿದ್ದೀರಾ?

ಪ್ರಶ್ನೆಗೆ ಬರಬಹುದಾದ ಉತ್ತರ ಇಲ್ಲ ಎಂದೇ. ಇಂದಿನ ಯಾಂತ್ರಿಕ ಜಗತ್ತಿನಲ್ಲಿ ನಮ್ಮ ಗಮನವೆಲ್ಲ ಹಣ ಮಾಡುವ ಕಡೆಗೆ, ಐಟಿ, ಬಿಟಿಯ ಕಡೆಗೆ, ಸುಲಭವಾಗಿ ಗಳಿಸುವ ದಾರಿಯ ಕಡೆಗೆ. ಬೆಳೆದ ಬೆಲೆಗೆ ಸೂಕ್ತ ಬೆಲೆ ಸಿಗುತ್ತಿಲ್ಲವೆಂದು ರೈತರೂ ಭತ್ತದ ಕೃಷಿಯಿಂದ ದೂರವಾಗುತ್ತಿದ್ದಾರೆ. ಸಾಂಪ್ರದಾಯಿಕ ಭತ್ತದ ತಳಿಗಳು ಅವಸಾನದ ಅಂಚಿನತ್ತ ಸಾಗುತ್ತಿವೆ. ವಾಣಿಜ್ಯ ಉತ್ಪನ್ನಗಳೇ ಎಲ್ಲರ ಮಂತ್ರವಾಗುತ್ತಿವೆ.

ಇದರ ಪರಿಣಾಮ: ಅಕ್ಕಿಯ ಬೆಲೆ ಗಗನಮುಖಿ ಆಗುತ್ತಿದೆ. ಅಕ್ಕಿಯಷ್ಟೇ ಅಲ್ಲ, ಇತರ ಕೃಷಿ ಉತ್ಪನ್ನಗಳ ಬೆಲೆಗಳೂ ಇದೇ ದಾರಿ ಹಿಡಿದಿವೆ ಎನ್ನಿ. ಹಾಗಂತ ಈ ಏರಿದ ಬೆಲೆಗಳು ರೈತರಿಗೆ ವರದಾನವೇನೂ ಆಗಿಲ್ಲ ಎಂಬುದು ಬೇರೆಯೇ ವಿಚಾರ.

ಎಲ್ಲಕ್ಕಿಂತ ಮುಖ್ಯ ವಿಚಾರ ಮಾತ್ರ ಎಲ್ಲರ ಹೊಟ್ಟೆ ತುಂಬಿಸುವ ಅಕ್ಕಿಯ ಗತಿ ಹೀಗಾದರೆ ಹೇಗೆ ಎಂಬುದು.

ಕೋಟ್ಯಂತರ ಜನರ ಅನ್ನದ ಬಟ್ಟಲು ತುಂಬುವ ಭತ್ತ ಏಷ್ಯಾದ ಪ್ರಮುಖ ಬೆಳೆ. ಭಾರತದ ರೈತರು ಏಳು ಸಾವಿರ ವರ್ಷಗಳಿಂದ ಭತ್ತದ ಕೃಷಿ ಮತ್ತು ಸಂಸ್ಕೃತಿಯನ್ನು ಪೋಷಿಸುತ್ತಾ ಬಂದಿದ್ದಾರೆ.

ಆಯಾ ಪ್ರದೇಶ, ವಾತಾವರಣ, ಆಹಾರ ಪದ್ಧತಿಗೆ ಸೂಕ್ತವಾಗಬಲ್ಲ ವಿವಿಧ ಬಗೆಯ ಭತ್ತದ ತಳಿಗಳನ್ನು ಅಭಿವೃದ್ಧಿ ಪಡಿಸಿದ್ದಾರೆ. ಪೀಳಿಗೆಯಿಂದ ಪೀಳಿಗೆಗೆ ಅವುಗಳನ್ನು ಸಾಗಿಸಿ ತಂದಿದ್ದಾರೆ.

ಆದರೆ ಹಸಿರುಕ್ರಾಂತಿಯ ಹೆಸರಿನಲ್ಲಿ ಭತ್ತಕ್ಕೆ ಕುತ್ತಿನ ಆಗಮನವಾಯಿತು. ರಾಸಾಯನಿಕ ಕೃಷಿ ಭತ್ತದ ಗದ್ದೆಗಳಿಗೆ ಕಾಲಿಟ್ಟಿತು.

ಆಹಾರದ ರುಚಿ, ಮೇವಿನ ಗುಣಮಟ್ಟದಂತಹ ಆದ್ಯತೆಯ ಗುಣಗಳು ಮೂಲೆಗುಂಪಾಗಿ ಅಧಿಕ ಇಳುವರಿ ಮಂತ್ರವಾಯಿತು. ಇದ್ದಬದ್ದ ನಾಡುತಳಿಗಳು ನಾಶವಾದವು.

ಇದು ಸಾಲದೆಂಬಂತೆ ಭತ್ತದ ಕೃಷಿಗೆ ಈಗ ಹೊಸ ಗಂಡಾಂತರ ಎದುರಾಗಿದೆ. ಜೀನ್ ಕ್ರಾಂತಿಯ ಹೆಸರಲ್ಲಿ ಜೈವಿಕವಾಗಿ ಮಾರ್ಪಡಿಸಿದ ಭತ್ತದ ತಳಿಗಳು ಬರುತ್ತಿವೆ.

ಮಾನ್ಸಂಟೋ, ಸಿಂಜಂಟಾದಂತ ಬಹುರಾಷ್ರೀಯ ಬೀಜ ಕಂಪೆನಿಗಳ ಕೈಯಲ್ಲಿ ಭತ್ತ ಬಂಧಿಯಾಗುತ್ತಿದೆ.

ಭತ್ತದ ಕೃಷಿ ಮತ್ತು ಸಂಸ್ಕೃತಿಯನ್ನು ಜೀವಂತವಾಗಿಡುವ ಉದ್ದೇಶದಿಂದ 'ಸಹಜ ಸಮೃದ್ಧ' ವಿವಿಧ ಸಂಸ್ಥೆಗಳ ಜೊತೆಗೂಡಿ ಜೂನ್ 7 ಮತ್ತು 8 ರಂದು ಭತ್ತ ಉತ್ಸವವನ್ನು ಏರ್ಪಡಿಸಿದೆ. ಶಿರಸಿಯಿಂದ 22 ಕಿ.ಮೀ. ದೂರದ ಬನವಾಸಿಯ ರಮ್ಯ ತಾಣದಲ್ಲಿ ಈ ಭತ್ತ ಉತ್ಸವ ನಡೆಯಲಿದೆ.

ಭತ್ತದ ತಳಿ ಸಂರಕ್ಷಕರು, ವಿಜ್ಞಾನಿಗಳು, ಅಕ್ಕಿ ಗಿರಣಿಯ ಮಾಲೀಕರು, ಸಾವಯವ ಭತ್ತ ಖರೀದಿದಾರರು, ಸಾವಯವ ಕೃಷಿಕರು, ಸಂಘ ಸಂಸ್ಥೆಗಳ ಪ್ರತಿನಿಧಿಗಳು ಮತ್ತು ಮಾಧ್ಯಮ ಗೆಳೆಯರು ಭತ್ತ ಉತ್ಸವದಲ್ಲಿ ಭಾಗವಹಿಸಲಿದ್ದಾರೆ.

ಭತ್ತದ ತಳಿಗಳ ಪ್ರದರ್ಶನ, ಅಕ್ಕಿಯ ವಿವಿಧ ಬಗೆಯ ಅಡುಗೆಗಳು, ಭತ್ತದ ತಳಿ ಅಭಿವೃದ್ಧಿ, ಭತ್ತದ ಸಾವಯವ ಮಾರುಕಟ್ಟೆ, ಭತ್ತದ ಸಂಸ್ಕೃತಿಯ ಪರಿಚಯದ ಮೂಲಕ ಭತ್ತ ಸಂರಕ್ಷಣೆಯ ಬೇರುಗಳನ್ನ ಗಟ್ಟಿಗೊಳಿಸಲಿದ್ದಾರೆ.

ಆಸಕ್ತರು, ಕೃಷಿಕರು, ರೈತ ಹಿತಾಕಾಂಕ್ಷಿಗಳು ಭತ್ತದ ಬೀಜ, ತೋರಣ, ತೆನೆ ಹಿಡಿದು ಈ ಉತ್ಸವಕ್ಕೆ ಬರಬೇಕು ಎಂದು 'ಸಹಜ ಸಮೃದ್ಧ' ಆಶಿಸಿದೆ.

ಈ ಭತ್ತ ಉತ್ಸವ ಸಂಘಟಿಸುವಲ್ಲಿ ಸಹಜ ಸಮೃದ್ಧದ ಜೊತೆಗೆ ಶ್ರೀ ಮಾತೋಬರ ಮಧುಕೇಶ್ವರ ದೇವಸ್ಥಾನ ಸಮಿತಿ, ಗ್ರಾಮ ಪಂಚಾಯಿತಿ, ಬನವಾಸಿ, ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್, ವಿಶ್ವೋದಯ ಗ್ರಾಮೀಣ ಪ್ರವಾಸೋದ್ಯಮ ಅಭಿವೃದ್ಧಿ ಸಂಸ್ಥೆ ವಲಯ ಅಭ್ಯುದಯ ಸಮಿತಿ, ಬೈಫ್ ಗ್ರಾಮೀಣಾಭಿವೃದ್ಧಿ ಸಂಸ್ಥೆ, ಶ್ರೀ ಜಯಂತಿ ವಿದ್ಯಾವರ್ಧಕ ಸಂಘ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ರೋಟರಿ ಸಮುದಾಯ ದಳ, ನಾಮದೇವ ಕಲ್ಯಾಣ ಮಂಟಪ ಸಮಿತಿ, ಗ್ರಾಮವಿಕಾಸ್, ಮುಳಬಾಗಿಲು, ಕೃಷಿ ಸಂಶೋಧನ ಕೇಂದ್ರ (ಭತ್ತ), ಶಿರಸಿ, ಪರಿಸರ ಸಂರಕ್ಷಣಾ ಕೇಂದ್ರ, ಶಿರಸಿ ಇತ್ಯಾದಿ ಸಂಘಟನೆಗಳೂ ಜೊತೆಯಾಗಿವೆ.

ಬನವಾಸಿಯ ಜಯಂತಿ ಪ್ರೌಢಶಾಲೆ ಆವರಣದಲ್ಲಿ ನಡೆಯುವ ಉತ್ಸವವನ್ನು ಕರ್ನಾಟಕ ಸರ್ಕಾರದ ಕೃಷಿ ಇಲಾಖೆ ನಿರ್ದೇಶಕ ಡಾ. ಎ. ರಾಜಣ್ಣ ಉದ್ಘಾಟಿಸುತ್ತಾರೆ. ಶಿರಸಿ ತೋಟಗಾರ್ ಸೊಸೈಟಿ ಅಧ್ಯಕ್ಷ ಶಾಂತಾರಾಮ್ ಹೆಗಡೆ ಶೀಗೇ ಹಳ್ಳಿ ಅಧ್ಯಕ್ಷತೆ ವಹಿಸುತ್ತಾರೆ. ಕೇರಳದ ಭತ್ತ ಉಳಿಸಿ ಆಂದೋಲನದ ಶ್ರೀಮತಿ ಉಷಾ ಪುಸ್ತಕ ಬಿಡುಗಡೆ ಮಾಡುತ್ತಾರೆ.

ಸಿರಿವಂತೆ ಚಂದ್ರಶೇಖರ್ ಅವರ 1000 ಅಡಿ ಉದ್ದದ ದಾಖಲೆಯ ಭತ್ತದ ತೋರಣದ ಉದ್ಘಾಟನೆ ಈ ಸಮಾರಂಭದ ವಿಶೇಷ.
ಶಿರಸಿ ಎಪಿಎಂಸಿ ಅಧ್ಯಕ್ಷ ಎನ್.ಎಸ್. ಹೆಗಡೆ ಕೋಟೆಕೊಪ್ಪ, ಜಂಟಿ ಕೃಷಿ ನಿರ್ದೇಶಕ ಡಾ. ಅಮಾನ್ ಶೇಕಬ್, ಸ್ವದೇಶೀ ಜಾಗರಣ ಮಂಚ್ನ ಪ್ರೊ. ಬಿ.ಎಂ. ಕುಮಾರಸ್ವಾಮಿ, ರಾಷ್ಟ್ರಪ್ರಶಸ್ತಿ ವಿಜೇತ ರೈತ ವಿಜ್ಞಾನಿ ಲಿಂಗಮಾದಯ್ಯ ಮತ್ತಿತರರು ಉದ್ಘಾಟನಾ ಸಮಾರಂಭದ ಮುಖ್ಯ ಅತಿಥಿಗಳು.

ಎರಡು ದಿನಗಳ ಉತ್ಸವದಲ್ಲಿ ಭತ್ತದ ವೈವಿಧ್ಯಮಯ ತಿಂಡಿ ತಿನಸು- ಸವಿ ಭೋಜನದ ಜೊತೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳ ಹಬ್ಬ ನಡೆಯಲಿದೆ. ಇವೆಲ್ಲಕ್ಕೂ ಮಿಗಿಲಾಗಿ ಭತ್ತಕ್ಕೆ ಸಂಬಂಧಿಸಿದಂತೆ ನಾಡಿನ ವಿವಿಧ ಕ್ಷೇತ್ರಗಳ ಚಿಂತಕರು, ಪತ್ರಕರ್ತರು, ಭತ್ತದ ಮೂಲ ತಳಿ ಉಳಿಸಿದ, ಹೊಸ ಹೊಸ ಪ್ರಯೋಗ ನಡೆಸಿದ, ಸಾವಯವ ಕೃಷಿ ಮಾಡಿ ಗೆದ್ದ ರೈತ ಸಾಹಸಿಗಳು ತಮ್ಮ ಅನುಭವ ಚಿಂತನೆಗಳ ಮಹಾಪೂರ ಹರಿಸಲಿದ್ದಾರೆ. ಭತ್ತ ತಳಿ ಅಭಿವೃದ್ಧಿಯ ತಂತ್ರಗಳು, ಭತ್ತ ಕೃಷಿಯ ಹೊಸ ಸಾಧ್ಯತೆಗಳು, ಭತ್ತದ ಕೃಷಿಗೆ ಎದುರಾಗಿರುವ ಹೊಸ ಸವಾಲುಗಳು, ಭತ್ತದ ಮಾರುಕಟ್ಟೆ - ಮೌಲ್ಯ ವರ್ಧನೆ ಇತ್ಯಾದಿಗಳ ಬಗ್ಗೆ ಕೂಲಂಕಷ ಚರ್ಚೆ- ಗುಂಪು ಸಮಾಲೋಚನೆ ನಡೆಸಲಿದ್ದಾರೆ.

ಭತ್ತದ ಬಗ್ಗೆ ತಿಳಿಯಬೇಕಾದ ವಿಚಾರಗಳು ಇಷ್ಟೊಂದು ಉಂಟಾ ಎಂಬ ಪ್ರಶ್ನೆ ತಲೆಕೊರೆಯುವಂತೆ ಮಾಡಬಲ್ಲ ಈ 'ಭತ್ತ ಉತ್ಸವ' ಎಂದೂ ಬತ್ತದ ವಿಚಾರಗಳನ್ನು ನಿಮ್ಮ ಮೆದುಳಿನಲ್ಲಿ ಬಿತ್ತುವುದು ಖಂಡಿತ.

ಭತ್ತ ಬೆಳೆಯುವವರಿಗಷ್ಟೇ ಅಲ್ಲ, ನಿತ್ಯ ಅದನ್ನು ಉಣ್ಣುವವರೂ ತಿಳಿದುಕೊಳ್ಳಬೇಕಾದ ವಿಚಾರಗಳನ್ನು ಈ ಉತ್ಸವ ಉಣ ಬಡಿಸಲಿದೆ.

ಆಸಕ್ತರು ಖುದ್ದಾಗಿ ಈ ಮೇಳದಲ್ಲಿ ಹಾಜರಾಗಬಹುದು. ಸಂಪರ್ಕಿಸಬಯಸುವವರು ಶಾಂತಕುಮಾರ್- 9731275656, ಅಣೆಕಟ್ಟೆ ವಿಶ್ವನಾಥ- 9449769743, ಹಾಲಪ್ಪ ಎಸ್.ಕೆರೂಡಿ- 9448694226 ಇವರನ್ನು ಸಂಪರ್ಕಿಸಬಹುದು ಎಂದು 'ಸಹಜ ಸಮೃದ್ಧ'ದ ನಿರ್ದೇಶಕ ಜಿ. ಕೃಷ್ಣ ಪ್ರಸಾದ್ ತಿಳಿಸಿದ್ದಾರೆ.

ಬನವಾಸಿಗೆ ಬರುವವರಿಗೆ: ರಾಜ್ಯದ ಎಲ್ಲ ಮುಖ್ಯ ಸ್ಥಳಗಳಿಂದ ಶಿರಸಿಗೆ ಬಸ್ ಸೌಕರ್ಯವಿದೆ. ಶಿರಸಿಯಿಂದ ಬನವಾಸಿ 22 ಕಿ.ಮಿ. ದೂರದಲ್ಲಿದೆ. ಪ್ರತಿ ಅರ್ಧ ಘಂಟೆಗೊಂದು ಬಸ್ ಇದೆ ಟೆಂಪೋ ಕೂಡ ಸಿಗುತ್ತವೆ.

ಇಂದಿನ ಇತಿಹಾಸ History Today ಮೇ 30

ಇಂದಿನ ಇತಿಹಾಸ

ಮೇ 30

ಚಲನಚಿತ್ರೋದ್ಯಮ ರಂಗದಲ್ಲಿ `ಸ್ನೇಹಲ್ ಭಾಟ್ಕರ್' ಎಂದೇ ಖ್ಯಾತರಾಗಿದ್ದ ಗಾಯಕ ವಾಸುದೇವ ಗೋವಿಂದ ಭಾಟ್ಕರ್ (88) ಹೃದಯಾಘಾತದಿಂದ ನಿಧನರಾದರು. ಭಾಟ್ಕರ್ ಅವರು ಹಿಂದಿ ಮತ್ತು ಮರಾಠಿ ಚಿತ್ರಗಳಿಗೆ ಹಲವಾರು ಜನಪ್ರಿಯ ಹಾಡುಗಳನ್ನು ರಚಿಸಿದ್ದರು.

2007: ಭಾಷಾ ಮಾಧ್ಯಮದ ಉಲ್ಲಂಘನೆಯ ಆರೋಪದಿಂದ ಮಾನ್ಯತೆ ಕಳೆದುಕೊಂಡ 2215 ಖಾಸಗಿ ಶಾಲೆಗಳು ಇನ್ನು ಮುಂದೆ ತಾವು ಅನುಮತಿ ಪಡೆದಿರುವ ಮಾಧ್ಯಮದಲ್ಲಿಯೇ ಬೋಧಿಸುವಂತೆ ವಾರದ ಹಿಂದೆ ನೀಡಿದ ಆದೇಶದಲ್ಲಿ ಮಾರ್ಪಾಡು ಮಾಡಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿತು.

2007: ಅಡುಗೆ ಅರಿಶಿಣದಿಂದ ಕ್ಯಾನ್ಸರ್ ಗುಣಪಡಿಸಬಹುದು ಎಂಬುದನ್ನು ತಾನು ಪತ್ತೆ ಹಚ್ಚಿರುವುದಾಗಿ ಆದಿ ಚುಂಚನಗಿರಿ ಮಹಾಸಂಸ್ಥಾನದ ಕ್ಯಾನ್ಸರ್ ಸಂಶೋಧನಾ ಸಂಸ್ಥೆ ಪ್ರಕಟಿಸಿತು. ಕ್ಯಾನ್ಸ ರಿಗಷ್ಟೇ ಅಲ್ಲ ಹಾವು ಕಡಿತಕ್ಕೂ ಅಡುಗೆ ಅರಿಶಿಣ ಮದ್ದು ಎಂಬುದು ಸಂಶೋಧನೆಯಿಂದ ದೃಢಪಟ್ಟಿದೆ ಎಂದು ಸಂಶೋಧಕಿ ಡಾ. ಲೀಲಾ ಶ್ರೀನಿವಾಸನ್ ಅವರು ಬೆಂಗಳೂರಿನಲ್ಲಿ ಆದಿ ಚುಂಚನಗಿರಿ ಮಠದಲ್ಲಿ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಸಮ್ಮುಖದಲ್ಲಿ ಪ್ರಕಟಿಸಿದರು.

2007: ಮಹಿಳೆಯರು ಹಾನಿಕಾರಕ ಪ್ಲಾಸ್ಟಿಕ್ ಸ್ಟಿಕರ್ಸ್ ಗಳಿಗೆ (ಟಿಕಲಿ) ಬದಲಾಗಿ ಬಳಸಹುದಾದ ನಂಜುಮುಕ್ತ, ಪರಿಸರ ಸ್ನೇಹಿ ನೈಸರ್ಗಿಕ ಸಿಂಧೂರವನ್ನು ಅವಿಷ್ಕರಿಸಿರುವುದಾಗಿ ಲಖನೌ ಮೂಲದ ರಾಷ್ಟ್ರೀಯ ಸಸ್ಯ ಸಂಶೋಧನಾ ಸಂಸ್ಥೆ (ಎನ್ಬಿಆರ್ಐ) ಪ್ರಕಟಿಸಿತು.

2007: ಗುರ್ಜರ ಜನಾಂಗವನ್ನು ಪರಿಶಿಷ್ಟರ ಪಟ್ಟಿಗೆ ಸೇರಿಸಬೇಕು ಎಂದು ಸರ್ಕಾರವನ್ನು ಆಗ್ರಹಿಸಿ ಪ್ರತಿಭಟನೆ ಮಾಡಿದವರ ಮೇಲೆ ಪೊಲೀಸರು ಗೋಲಿಬಾರ್ ಮಾಡ್ದಿದನ್ನು ಖಂಡಿಸಿ ಗುರ್ಜರ ಮೀಸಲಾತಿ ಕ್ರಿಯಾ ಸಮಿತಿ ಕರೆಯ ಮೇರೆಗೆ ರಾಜಸ್ಥಾನದ ವಿವಿಧ ಪ್ರದೇಶಗಳಲ್ಲಿ ಸಂಪೂರ್ಣ ಬಂದ್ ಆಚರಿಸಲಾಯಿತು. ದೌಸಾ ಜಿಲ್ಲೆಯ ದುಬಿ ಮತ್ತು ಸಿಕಂದ್ರಾದಲ್ಲಿ ಎರಡು ಪೊಲೀಸ್ ಠಾಣೆಗಳಿಗೆ ಉದ್ರಿಕ್ತರು ಕಿಚ್ಚಿಟ್ಟರು.

2007: ಚಲನಚಿತ್ರೋದ್ಯಮ ರಂಗದಲ್ಲಿ `ಸ್ನೇಹಲ್ ಭಾಟ್ಕರ್' ಎಂದೇ ಖ್ಯಾತರಾಗಿದ್ದ ಗಾಯಕ ವಾಸುದೇವ ಗೋವಿಂದ ಭಾಟ್ಕರ್ (88) ಹೃದಯಾಘಾತದಿಂದ ನಿಧನರಾದರು. ಭಾಟ್ಕರ್ ಅವರು ಹಿಂದಿ ಮತ್ತು ಮರಾಠಿ ಚಿತ್ರಗಳಿಗೆ ಹಲವಾರು ಜನಪ್ರಿಯ ಹಾಡುಗಳನ್ನು ರಚಿಸಿದ್ದರು.

2006: ರಾಷ್ಟ್ರೀಯ ಸಲಹಾ ಮಂಡಳಿ ಅಧ್ಯಕ್ಷ ಹುದ್ದೆ ಸೇರಿದಂತೆ 56 ಹುದ್ದೆಗಳನ್ನು `ಲಾಭದಾಯಕ' ವ್ಯಾಪ್ತಿಯಿಂದ ಹೊರಗಿಡುವ ಮಸೂದೆಯನ್ನು ರಾಷ್ಟ್ರಪತಿ ಅಬ್ದುಲ್ ಕಲಾಂ ವಾಪಸ್ ಕಳುಹಿಸಿದರು. ಸಂಸದರು ಮತ್ತು ಶಾಸಕರನ್ನು `ಲಾಭದ ಹುದ್ದೆ' ವಿವಾದದಿಂದ ಪಾರುಮಾಡಲು ಯತ್ನಿಸಿದ್ದ ಕೇಂದ್ರ ಸರ್ಕಾರಕ್ಕೆ ರಾಷ್ಟ್ರಪತಿ ಕ್ರಮದಿಂದ ಹಿನ್ನಡೆಯಾಯಿತು.

2006: ಭಾರತದ ಗೌರಿ ಶಂಕರ್ ಅವರು ಚಿಕಾಗೊ ಅಂತಾರಾಷ್ಟ್ರೀಯ ಓಪನ್ ಚೆಸ್ ಚಾಂಪಿಯನ್ ಶಿಪ್ ನಲ್ಲಿ ಮೊದಲ ಸ್ಥಾನ ಪಡೆದುಕೊಂಡರು.

2006: ಕ್ಯಾನ್ನೆಸ್ಸಿನಲ್ಲಿ ಎರಡು ಬಾರಿ ಪ್ರತಿಷ್ಠಿತ ಪಾಲ್ಮೆ ಡಿ'ಓರ್ ಪ್ರಶಸ್ತಿಯನ್ನು ಗೆದ್ದ ಜಪಾನಿನ ಪ್ರಥಮ ಚಿತ್ರ ನಿರ್ದೇಶಕ ಶೋಹೆಲ್ ಇಮಾಮುರಾ ಈ ದಿನ 79ನೇ ವಯಸ್ಸಿನಲ್ಲಿ ನಿಧನರಾದರು. 1983ರಲ್ಲಿ ಪಾಲ್ಮೆ ಡಿ'ಓರ್ ಪ್ರಶಸ್ತಿಯನ್ನು `ದಿ ಬ್ಯಾಲ್ಲಡ್ ಆಫ್ ನರಯಾಮ'ಕ್ಕೆ ಪಡೆದಿದ್ದ ಇಮಾಮುರಾ, 1997ರಲ್ಲಿ `ದಿ ಎಲ್' ಗೆ ಈ ಪ್ರಶಸ್ತಿಯನ್ನು ಎರಡನೇ ಬಾರಿಗೆ ಪಡೆದರು.

1991: ಉಮಾಶಂಕರ ದೀಕ್ಷಿತ್ ನಿಧನರಾದರು.

1987: ಗೋವಾ ಭಾರತದ 25ನೇ ರಾಜ್ಯವಾಯಿತು. ಇಲ್ಲಿಯವರೆಗೆ ಅದು ಕೇಂದ್ರಾಡಳಿತ ಪ್ರದೇಶವಾಗಿತ್ತು.

1959: ಸರ್ ಕ್ರಿಸ್ಟೋಫರ್ ಕೋಕರೆಲ್ ಅವರು ವಿನ್ಯಾಸಗೊಳಿಸಿದ ಮೊತ್ತ ಮೊದಲ ಪ್ರಾಯೋಗಿಕ ಹೋವರ್ ಕ್ರಾಫ್ಟಿಗೆ ಐಲ್ ಆಫ್ ವೈಟ್ ನಲ್ಲಿ ಚಾಲನೆ ಸಿಕ್ಕಿತು. ಪ್ರಾರಂಭದಲ್ಲಿ ಇದನ್ನು ಸೇನಾ ಸೇವೆಗಾಗಿ ಮಾತ್ರ ಎಂಬುದಾಗಿ ರೂಪಿಸಲಾಗಿತ್ತಾದರೂ ನಂತರ ನಾಗರಿಕ ಬಳಕೆಗೆ ಇದನ್ನು ಬಿಡುಗಡೆ ಮಾಡಲಾಯಿತು.

1950: ಕಲಾವಿದೆ ಶೋಭಾ ಹುಣಸಗಿ ಜನನ.

1948: ಸುಗಮ ಸಂಗೀತರ ಗಾನ ಕೋಗಿಲೆ ಎಂದೇ ಖ್ಯಾತರಾಗಿದ್ದ ಪಂಕಜ ಸಿಂಹ (30-5-1948ರಿಂದ 20-12-2000) ಅವರು ಅಡ್ವೋಕೇಟ್ ಗೋವಿಂದರಾವ್- ಖ್ಯಾತ ಪಿಟೀಲು ವಾದಕಿ ಶಾರದಮ್ಮ ದಂಪತಿಯ ಮಗಳಾಗಿ ಹಾಸನದಲ್ಲಿ ಜನಿಸಿದರು.

1919: ಅಮೃತಸರದಲ್ಲಿ ನಡೆದ ಜಲಿಯನ್ ವಾಲಾ ಬಾಗ್ ಹತ್ಯಾಕಾಂಡವನ್ನು ಪ್ರತಿಭಟಿಸಿ ರಬೀಂದ್ರನಾಥ ಟ್ಯಾಗೋರ್ ಅವರು ತಮಗೆ ನೀಡಲಾಗಿದ್ದ `ನೈಟ್ ಹುಡ್' ಪದವಿಯನ್ನು ನಿರಾಕರಿಸಿ ಲಾರ್ಡ್ ಚೆಮ್ಸ್ ಫೋರ್ಡ್ ಅವರಿಗೆ ಪತ್ರ ಬರೆದರು.

1907: ನರೇಗಲ್ಲ ಮಾಸ್ತರ ಎಂದೇ ಖ್ಯಾತರಾಗಿದ್ದ ನರೇಗಲ್ಲ ಪ್ರಹ್ಲಾದರಾಯರು (30-5-1907ರಿಂದ 1977) ನವಲಗುಂದ ತಾಲ್ಲೂಕಿನ ಜಾವೂರಿನಲ್ಲಿ ಅನಂತರಾವ್ ನರೇಗಲ್ಲ- ಅಂಬಾಬಾಯಿ ಪುತ್ರನಾಗಿ ಜನಿಸಿದರು.

1895: ಖ್ಯಾತ ಇತಿಹಾಸಕಾರ ಪಾಂಡುರಂಗ ಶಂಕರಂ ಜನನ.

1606: ಸಿಖ್ ಧರ್ಮದ ಐದನೆಯ ಗುರುಗಳಾಗಿದ್ದ ಗುರು ಅರ್ಜುನ್ ದೇವ್ ಅವರನ್ನು ಬಂಡುಕೋರ ರಾಜಕುಮಾರ ಖುಸ್ರು ಬಗ್ಗೆ ಅನುಕಂಪ ವ್ಯಕ್ತಪಡಿಸಿದ ಕಾರಣಕ್ಕಾಗಿ ಮೊಘಲ್ ದೊರೆ ಜಹಾಂಗೀರ್ ಚಿತ್ರಹಿಂಸೆಗೆ ಗುರಿಪಡಿಸಿ ಕೊಲ್ಲಿಸಿದ. ಸಿಖ್ ಧರ್ಮದ ಮೊದಲನೆಯ ಹುತಾತ್ಮರಾದ ಅರ್ಜುನ್ ದೇವ್ `ಗುರು ಗ್ರಂಥ ಸಾಹಿಬ್'ನ್ನು ಸಂಕಲನಗೊಳಿಸಿದವರು.

(ಸಂಗ್ರಹ: ನೆತ್ರಕೆರೆ ಉದಯಶಂಕರ)

Thursday, May 29, 2008

ಇಂದಿನ ಇತಿಹಾಸ History Today ಮೇ 29

ಇಂದಿನ ಇತಿಹಾಸ

ಮೇ 29

ಮೆಕ್ಸಿಕೊದಲ್ಲಿ ನಡೆದ ಸೌಂದರ್ಯ ಸ್ಪರ್ಧೆಯಲ್ಲಿ ಜಪಾನಿನ ನೃತ್ಯ ಕಲಾವಿದೆ ರಿಯೋ ಮೋರಿ 2007ನೇ ಸಾಲಿನ ಭುವನಸುಂದರಿಯಾಗಿ ಆಯ್ಕೆಯಾದರು. `ಭಾರತ ಸುಂದರಿ' ಪೂಜಾ ಗುಪ್ತ ಕೊನೆಯ ಐವರು ಸ್ಪರ್ಧಿಗಳಲ್ಲಿ ಸೇರ್ಪಡೆ ಆಗುವ ಅವಕಾಶದಿಂದಲೂ ವಂಚಿತರಾದರು.

2007: ಹೊಟ್ಟೆಯ ಭಾಗದಲ್ಲಿ ಅಂಟಿಕೊಂಡಿದ್ದ 10 ತಿಂಗಳ ಗಂಡು ಸಯಾಮಿ ಅವಳಿ ಮಕ್ಕಳನ್ನು ಬೇರ್ಪಡಿಸುವ ಶಸ್ತ್ರಕ್ರಿಯೆಯನ್ನು ರಾಯಪುರ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ವೈದ್ಯರು ಯಶಸ್ವಿಯಾಗಿ ನೆರವೇರಿಸಿದರು. ದೇಶದಲ್ಲಿ ನಡೆದ ಸಯಾಮಿ ಅವಳಿ ಮಕ್ಕಳನ್ನು ಬೇರ್ಪಡಿಸುವ ನಾಲ್ಕನೇ ಶಸ್ತ್ರ ಚಿಕಿತ್ಸೆ ಇದು. ಅವಳಿ ಮಕ್ಕಳಾದ ರಾಮ ಮತ್ತು ಲಕ್ಷ್ಮಣನನ್ನು ಐದು ಗಂಟೆಗಳ ಶಸ್ತ್ರಚಿಕಿತ್ಸೆಯ ಬಳಿಕ ಯಶಸ್ವಿಯಾಗಿ ಬೇರ್ಪಡಿಸಲಾಯಿತು.

2007: ಪರಿಶಿಷ್ಟ ವರ್ಗದ ಸ್ಥಾನಮಾನ ನೀಡಬೇಕು ಎಂದು ಆಗ್ರಹಿಸಿ ಗುರ್ಜರ ಸಮುದಾಯದವರು ರಾಜಸ್ಥಾನದ ದೌಸಾ ಹಾಗೂ ಬಂಡಿ ಜಿಲ್ಲೆಯಲ್ಲಿ ನಡೆಸಿದ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿ, ಪೊಲೀಸರು ಗೋಲಿಬಾರ್ ಮಾಡಿದ ಪರಿಣಾಮವಾಗಿ 14 ಜನ ಗುಂಡಿಗೆ ಬಲಿಯಾದರು.

2007: ಸೌರ ಮಂಡಲ ಮತ್ತು ಭೂಮಿಯ ಅಸ್ತಿತ್ವವು ಊಹೆಗೂ ನಿಲುಕದ ಬ್ರಹ್ಮಾಂಡದಲ್ಲಿ ಅಪರೂಪದ ಸಂಗತಿಯೇನೂ ಅಲ್ಲ, ಅನಂತ ಆಕಾಶದಲ್ಲಿ ವಾಸಕ್ಕೆ ಯೋಗ್ಯವಾದ ಇಂತಹ ಕೋಟ್ಯಂತರ ಗ್ರಹಗಳು ಇರುವ ಸಾಧ್ಯತೆಗಳು ಹೆಚ್ಚು ಇವೆಎಂದು ವಿಜ್ಞಾನಿಗಳು ಅಭಿಪ್ರಾಯಪಟ್ಟರು. ಹೊನೊಲುವಿನಲ್ಲಿ ನಡೆದ ಅಮೆರಿಕದ ಖಗೋಲ ವಿಜ್ಞಾನಿಗಳ ಸಮಾವೇಶದಲ್ಲಿ ಸಂಶೋಧಕರು ಈ ಅಭಿಪ್ರಾಯ ವ್ಯಕ್ತಪಡಿಸಿದರು. ಖಗೋಲ ವಿಜ್ಞಾನಿಗಳು ಕಳೆದ ವರ್ಷ ಒಟ್ಟು 28 ಹೊಸ ಗ್ರಹಗಳನ್ನು ಪತ್ತೆ ಹಚ್ಚಿದ್ದಾರೆ. ನಮ್ಮ ಸೌರವ್ಯೂಹದ ಆಚೆಗೆ ಈವರೆಗೆ 236 ಗ್ರಹಗಳನ್ನು ಗುರುತಿಸಲಾಗಿದೆ ಎಂಬುದು ಅವರ ಅಭಿಪ್ರಾಯ.

2007: ಮೆಕ್ಸಿಕೊದಲ್ಲಿ ನಡೆದ ಸೌಂದರ್ಯ ಸ್ಪರ್ಧೆಯಲ್ಲಿ ಜಪಾನಿನ ನೃತ್ಯ ಕಲಾವಿದೆ ರಿಯೋ ಮೋರಿ 2007ನೇ ಸಾಲಿನ ಭುವನಸುಂದರಿಯಾಗಿ ಆಯ್ಕೆಯಾದರು. `ಭಾರತ ಸುಂದರಿ' ಪೂಜಾ ಗುಪ್ತ ಕೊನೆಯ ಐವರು ಸ್ಪರ್ಧಿಗಳಲ್ಲಿ ಸೇರ್ಪಡೆ ಆಗುವ ಅವಕಾಶದಿಂದಲೂ ವಂಚಿತರಾದರು.

2007: ಮುಂಬೈಯಲ್ಲಿ 1993ರಲ್ಲಿ ಸಂಭವಿಸಿದ ಸರಣಿ ಬಾಂಬ್ ಸ್ಫೋಟಕ್ಕಿಂತ ಸ್ವಲ್ಪ ಮುಂಚೆ ತಲೆ ತಪ್ಪಿಸಿಕೊಂಡ ಪ್ರಮುಖ ಆರೋಪಿ ಟೈಗರ್ ಮೆಮನ್ ಗೆ ಶಸ್ತ್ರಾಸ್ತ್ರಗಳು, ಸ್ಫೋಟಕಗಳು ಮತ್ತು ಆರ್ ಡಿ ಎಕ್ಸ್ ಸಾಗಣೆಯಲ್ಲಿ ನೆರವಾದ ಅಪರಾಧಕ್ಕಾಗಿ ಕಸ್ಟಮ್ಸ್ ಇಲಾಖೆಯ ನಾಲ್ಕು ಮಂದಿ ಮಾಜಿ ಅಧಿಕಾರಿಗಳಿಗೆ ನಿಯೋಜಿತ ಟಾಡಾ ನ್ಯಾಯಾಲಯವು 7ರಿಂದ 9 ವರ್ಷಗಳವರೆಗಿನ ಕಠಿಣ ಸೆರೆವಾಸದ ಶಿಕ್ಷೆ ವಿಧಿಸಿತು.

2007: ಬಡಗುತಿಟ್ಟು ಯಕ್ಷಗಾನದ ಖ್ಯಾತ ಮದ್ದಳೆ ವಾದಕ, ಮಾಂತ್ರಿಕ ದುರ್ಗಪ್ಪ ಗುಡಿಗಾರ (65) ಮಣಿಪಾಲ ಆಸ್ಪತ್ರೆಯ್ಲಲಿ ನಿಧನರಾದರು. ಭಟ್ಕಳದ ಚೌತನಿಯವರಾದ ದುರ್ಗಪ್ಪ ಗುಡಿಗಾರ ತಮ್ಮ ಕಲಾ ಸೇವೆಗಾಗಿ ಕರ್ನಾಟಕ ಜಾನಪದ ಮತ್ತು ಯಕ್ಷಗಾನ ಅಕಾಡೆಮಿ ಪ್ರಶಸ್ತಿ, ಕನ್ನಡ ಸಾಹಿತ್ಯ ಪರಿಷತ್ತಿನ ಕರ್ನಾಟಕ ಶ್ರೀ, ಮುದೂರು ದೇವರು ಹೆಗ್ಗಡೆ ಪ್ರತಿಷ್ಠಾನ, ಮಸ್ಕತ್ ರಂಗಭೂಮಿ ಪ್ರಶಸ್ತಿ, ಜನಪದ ಪ್ರಶಸ್ತಿ ಸೇರಿದಂತೆ ಹತ್ತಾರು ಪ್ರಶಸ್ತಿ, ಸನ್ಮಾನಕ್ಕೆ ಪಾತ್ರರಾಗಿದ್ದರು.

2006: ಕಾವೇರಿ ನ್ಯಾಯಮಂಡಳಿಯ ನ್ಯಾಯದರ್ಶಿಗಳ ವರದಿಯನ್ನು ತಿರಸ್ಕರಿಸಿ 408 ಟಿಎಂಸಿ ನೀರಿಗೆ ಬೇಡಿಕೆ ಸಲ್ಲಿಸಲು ಕರ್ನಾಟಕ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅಧ್ಯಕ್ಷತೆಯಲ್ಲಿ ನಡೆದ ಸರ್ವಪಕ್ಷಗಳ ಸಭೆಯಲ್ಲಿ ಒಮ್ಮತದ ನಿರ್ಧಾರ ಕೈಗೊಳ್ಳಲಾಯಿತು. ಕರ್ನಾಟಕಕ್ಕೆ 251 ಟಿಂಎಸಿ ನೀರು ನಿಗದಿ ಪಡಿಸಿ ನ್ಯಾಯದರ್ಶಿಗಳು ತಯಾರಿಸಿದ ವರದಿ ನ್ಯಾಯೋಚಿತವಲ್ಲ, ಅದನ್ನು ಒಪ್ಪಲಾಗದು ಎಂದು ಸಭೆ ಸ್ಪಷ್ಟ ಪಡಿಸಿತು.

2006: ಸೇನಾ ತರಬೇತಿಯನ್ನು ಸಾಂಸ್ಥೀಕರಣಗೊಳಿಸುವ ಪ್ರಪ್ರಥಮ ಚಾರಿತ್ರಿಕ ಒಪ್ಪಂದಕ್ಕೆ ಭಾರತ ಮತ್ತು ಚೀನಾ ಸೋಮವಾರ ಬೀಜಿಂಗಿನಲ್ಲಿ ಸಹಿ ಹಾಕಿದವು. ಈ ಒಪ್ಪಂದವು ಜಂಟಿ ಸೇನಾ ಕವಾಯತು ಹಾಗೂ ವಿಚಾರ ವಿನಿಮಯಗಳಿಗೆ ಅವಕಾಶ ಕಲ್ಪಿಸಲಿದೆ. ಚೀನಾಕ್ಕೆ ಭೇಟಿ ನೀಡಿದ ಭಾರತದ ರಕ್ಷಣಾ ಸಚಿವ ಪ್ರಣವ್ ಮುಖರ್ಜಿ ಮತ್ತು ಚೀನಿ ರಕ್ಷಣಾ ಸಚಿವ ಜನರಲ್ ಕಾವೊ ಗಾಂಗ್ ಚುವಾನ್ ಅವರು ಇಲ್ಲಿ ಕೇಂದ್ರೀಯ ಸೇನಾ ಕಮೀಷನ್ ಮುಖ್ಯ ಕಚೇರಿಯಲ್ಲಿ 2 ಗಂಟೆಗಳ ಕಾಲ ನಡೆದ ಮಾತುಕತೆ ಬಳಿಕ ಈ ಒಪ್ಪಂದಕ್ಕೆ ಸಹಿ ಹಾಕಿದರು.

2006: ದಕ್ಷಿಣ ಬಾಂಗ್ಲಾದೇಶದಲ್ಲಿ ಕಳೆದ ವರ್ಷ ಬಾಂಬ್ ದಾಳಿ ನಡೆಸಿ ಇಬ್ಬರು ನ್ಯಾಯಾಧೀಶರನ್ನು ಕೊಲೆಗೈದ ಪ್ರಕರಣದಲ್ಲಿ ವಹಿಸಿದ ಪಾತ್ರಕ್ಕಾಗಿ ನಿಷೇಧಿತ ಇಸ್ಲಾಮಿಕ್ ಉಗ್ರಗಾಮಿ ಸಂಘಟನೆ ಜುಮತುಲ್ ಮುಜಾಹಿದೀನ್ ಬಾಂಗ್ಲಾದೇಶ್ ಸಂಘಟನೆಯ ಉನ್ನತ ನಾಯಕರಾದ ಷೇಕ್ ಅಬ್ದುರ್ ರಹಮಾನ್ ಮತ್ತು ಸಿದ್ದುಕಿಲ್ ಇಸ್ಲಾಂ ಸೇರಿದಂತೆ ಏಳು ಮಂದಿ ಇಸ್ಲಾಮಿಕ್ ಉಗ್ರಗಾಮಿಗಳಿಗೆ ಜéಲಕಥಿ ಪಟ್ಟಣದ ನ್ಯಾಯಾಲಯವೊಂದು ಮರಣದಂಡನೆ ವಿಧಿಸಿತು. ದಕ್ಷಿಣ ಜéಲಕಥಿ ಪಟ್ಟಣದಲ್ಲಿ ನ್ಯಾಯಾಧೀಶ ರೇಝಾ ತಾರಿಖ್ ಅಹಮದ್ ಅವರು ತೀರ್ಪನ್ನು ಓದಿ ಹೇಳಿದರು. ಈ ಪಟ್ಟಣದಲ್ಲೇ ನವೆಂಬರ್ 14ರಂದು ಇಬ್ಬರು ನ್ಯಾಯಾಧೀಶರನ್ನು ಕೊಲೆಗೈಯಲಾಗಿತ್ತು.

1973: ಕಲಾವಿದೆ ರೂಪ ಸಿ. ಜನನ.

1972: ಖ್ಯಾತ ಚಿತ್ರನಟ ಹಾಗೂ ರಂಗನಟ ಪೃಥ್ವಿರಾಜ್ ಕಪೂರ್ ತಮ್ಮ 65ನೇ ವಯಸ್ಸಿನಲ್ಲಿ ಅಸುನೀಗಿದರು. ಇವರು ಚಿತ್ರನಟರಾದ ರಾಜ್ ಕಪೂರ್, ಶಮ್ಮಿ ಕಪೂರ್ ಮತ್ತು ಶಶಿ ಕಪೂರ್ ಅವರ ತಂದೆ. ರಾಜ್ಯಸಭೆಗೆ ಸದಸ್ಯರಾಗಿ ನಾಮಕರಣಗೊಂಡ ಚಿತ್ರರಂಗದ ಪ್ರಪ್ರಥಮ ವ್ಯಕ್ತಿ ಇವರು. 1972 ರಲ್ಲಿ ಇವರಿಗೆ ಮರಣೋತ್ತರವಾಗಿ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ನೀಡಲಾಯಿತು.

1968: ಕಲಾವಿದ ದೊಡ್ಡಮನಿ ಎಂ.ಜಿ. ಜನನ.

1953: ನ್ಯೂಜಿಲ್ಯಾಂಡಿನ ಎಡ್ಮಂಡ್ ಹಿಲರಿ ಮತ್ತು ಶೆರ್ಪಾ ತೇನ್ ಸಿಂಗ್ ನೋರ್ಗೆ ಪ್ರಪ್ರಥಮ ಬಾರಿಗೆ ಜಗತ್ತಿನ ಅತ್ಯುನ್ನತ ಶಿಖರ ಎವರೆಸ್ಟನ್ನು ಏರಿದರು.

1917: ಜಾನ್ ಎಫ್. ಕೆನಡಿ ಜನ್ಮದಿನ(1917-63). ಇವರು 1961-63ರ ಅವಧಿಯಲ್ಲಿ ಅಮೆರಿಕದ 35ನೇ ಅಧ್ಯಕ್ಷರಾಗಿದ್ದರು. ಡಲ್ಲಾಸ್ ನಲ್ಲಿ ಮೋಟಾರಿನಲ್ಲಿ ಹೋಗುತ್ತಿದ್ದಾಗ ಇವರನ್ನು ಗುಂಡಿಟ್ಟು ಕೊಲೆಗೈಯಲಾಯಿತು.

1906: ಮೈಸೂರು ಶೈಲಿಯ ಭರತನಾಟ್ಯದ ಪ್ರವರ್ತಕರಲ್ಲಿ ಒಬ್ಬರು ಎಂದೇ ಖ್ಯಾತರಾದ ಡಾ. ಕೆ. ವೆಂಕಟಲಕ್ಷ್ಮಮ್ಮ (19-5-1906ರಿಂದ 3-7-2002) ಅವರು ಕಡೂರಿನ ತಂಗಲಿ ತಾಂಡ್ಯದಲ್ಲಿ ಜನಿಸಿದರು.

1877: ಸಾಹಿತಿ ನವರತ್ನ ರಾಮರಾವ್ (29-5-1877ರಿಂದ 27-11-1960) ಅವರು ನವರತ್ನ ಬಾಲಕೃಷ್ಣರಾಯರ ಪುತ್ರನಾಗಿ ಬೆಂಗಳೂರು ಜಿಲ್ಲೆಯ ದೇವನಹಳ್ಳಿಯಲ್ಲಿ ಈ ದಿನ ಜನಿಸಿದರು. ಇವರ ದಕ್ಷ ಸೇವೆ, ಕನ್ನಡಕ್ಕೆ ನೀಡಿದ ಕೊಡುಗೆಗಾಗಿ ಮೈಸೂರಿನ ಮಹಾರಾಜರು `ರಾಜಸೇವಾಸಕ್ತ' ಬಿರುದು ನೀಡಿದ್ದರು.

1660: ಚಾರ್ಲ್ಸ್ ಸ್ಟುವರ್ಟ್ ತನ್ನ 30ನೇ ಹುಟ್ಟುಹಬ್ಬದಂದು ಎರಡನೆಯ ಚಾರ್ಲ್ಸ್ ದೊರೆಯಾಗುವ ಸಲುವಾಗಿ ಲಂಡನ್ನಿಗೆ ಮರುಪ್ರವೇಶ ಮಾಡಿದ. 1651ರಲ್ಲಿ ವೋರ್ಸ್ಟರ್ ಯುದ್ಧದ ಬಳಿಕ ಇಂಗ್ಲೆಂಡಿನಿಂದ ಪರಾರಿಯಾಗಿದ್ದ. ಹಾಗೆ ಪರಾರಿಯಾಗುವಾಗ ಬೊಸ್ಕೊಬೆಲ್ ನಲ್ಲಿ ಓಕ್ ಗಿಡವೊಂದನ್ನು ಅಡಗಿಸಿ ಇಟ್ಟಿದ್ದನಂತೆ. ಆತ ಮತ್ತೆ ದೊರೆಯಾದ ಸಂಭ್ರಮಕ್ಕಾಗಿ ಆತನಿಗೆ ನಿಷ್ಠರಾಗಿದ್ದ ಪ್ರಜೆಗಳು ಓಕ್ ಎಲೆಗಳನ್ನು ಧರಿಸಿ ಈ ದಿನವನ್ನು `ಓಕ್ ಆಪಲ್ ಡೇ' ಆಗಿ ಆಚರಿಸಿದರು.

(ಸಂಗ್ರಹ: ನೆತ್ರಕೆರೆ ಉದಯಶಂಕರ)

Wednesday, May 28, 2008

ಇಂದಿನ ಇತಿಹಾಸ History Today ಮೇ 28

ಇಂದಿನ ಇತಿಹಾಸ

ಮೇ 28

ಭಾರತದ ಕ್ರಾಂತಿಕಾರಿ ಸ್ವಾತಂತ್ರ್ಯ ಹೋರಾಟಗಾರ ವಿನಾಯಕ ದಾಮೋದರ ಸಾವರ್ಕರ್ (1883-1966) ಜನ್ಮದಿನ.

2007: ಎರಡನೇ ಮಹಾಯುದ್ಧ ಕಾಲದಲ್ಲಿ ಜಪಾನ್ ಸೈನಿಕ ಹಾರಿಸಿದ್ದ ಗುಂಡು ಹೊಕ್ಕು 64 ವರ್ಷಗಳಿಂದ ತಲೆನೋವಿನಿಂದ ನರಳುತ್ತಿದ್ದ ಚೀನೀ ಮಹಿಳೆಯ ತಲೆಯಿಂದ ಗುಂಡನ್ನು ವೈದ್ಯರು ಕೊನೆಗೂ ಹೊರತೆಗೆದರು. 1943ರಲ್ಲಿ ತನ್ನ ತಾತನನ್ನು ನೋಡಲು ಹೊಗ್ಲು ಪ್ರಾಂತ್ಯಕ್ಕೆ ತೆರಳಿದ ಸಂದರ್ಭದಲ್ಲಿ ಜಪಾನಿ ಸೇನಾಪಡೆಯವನೊಬ್ಬ ಹಾರಿಸಿದ ಗುಂಡು ಜಿನ್ ಗುಂಜಿಂಗ್ (77) ತಲೆಗೆ ಹೊಕ್ಕು ಆಕೆ ಪ್ರಜ್ಞೆ ಕಳೆದುಕೊಂಡಿದ್ದಳು. ಬಳಿಕ ಅಸಭ್ಯ ಮಾತುಗಳೊಂದಿಗೆ ನಿರಂತರ ತಲೆ ನೋವು ಅನುಭವಿಸುತ್ತಿದ್ದಳು. ಮಾನಸಿಕವಾಗಿ ಅಸ್ವಸ್ಥಗೊಂಡಿದ್ದಳು.

2007: ಭ್ರಷ್ಟಾಚಾರ ಆರೋಪ ಎದುರಿಸುತ್ತಿದ್ದ ಜಪಾನಿನ ಕೃಷಿ ಸಚಿವ ತೊಷಿಕಾತ್ಸು ಮಾತ್ಸುಕಾ (62) ಆತ್ಮಹತ್ಯೆ ಮಾಡಿಕೊಂಡರು. ನೇಣು ಹಾಕಿಕೊಳ್ಳಲು ಯತ್ನಿಸಿ ಮನೆಯಲ್ಲಿ ಪ್ರಜ್ಞಾಹೀನರಾಗಿ ಬಿದ್ದಿದ್ದ ಮಾತ್ಸುಕಾ ಅವರನ್ನು ಟೋಕಿಯೋದ ಕಿಯೋ ವಿವಿ ಆಸ್ಪತ್ರೆಗೆ ತಂದಾಗ ಪ್ರಾಣ ಹಾರಿಹೋಗಿತ್ತು.

2007: ಆದಾಯಕ್ಕೂ ಮೀರಿ ಆಸ್ತಿ ಹೊಂದಿದ ಆರೋಪ ಹೊತ್ತಿರುವ ಮಾಜಿ ಸಿಕ್ಕಿಂ ಮುಖ್ಯಮಂತ್ರಿ ಎನ್. ಬಿ. ಭಂಡಾರಿ ಅವರಿಗೆ ವಿಶೇಷ ಸಿಬಿಐ ನ್ಯಾಯಾಲಯವು ಒಂದು ತಿಂಗಳ ಕಾರಾಗೃಹ ಶಿಕ್ಷೆ ಮತ್ತು 5000 ರೂಪಾಯಿಗಳ ದಂಡ ವಿಧಿಸಿ ತೀರ್ಪು ನೀಡಿತು. ಸಿಕ್ಕಿಂ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಭಂಡಾರಿ ಅವರು ತಾವು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ತಮ್ಮ ಆದಾಯ ಮೀರಿ 15.22 ಲಕ್ಷ ರೂಪಾಯಿಗಳಷ್ಟು ಅಕ್ರಮ ಆಸ್ತಿ ಸಂಪಾದಿಸಿದ್ದನ್ನು ಸಿಬಿಐ ಪತ್ತೆ ಹಚ್ಚಿತ್ತು.

2007: ಶ್ರವಣಬೆಳಗೊಳದ ರಾಷ್ಟ್ರೀಯ ಪ್ರಾಕೃತ ಅಧ್ಯಯನ ಸಂಶೋಧನ ಸಂಸ್ಥೆಯ ನಿಯೋಜಿತ ನಿರ್ದೇಶಕ ಡಾ. ಪ್ರೇಮ ಸುಮನ್ ಜೈನ್ ಅವರು 35 ವರ್ಷಗಳಿಂದ ಪಾಲಿ, ಪ್ರಾಕೃತ ಭಾಷೆಯ ಶೈಕ್ಷಣಿಕ ಮತ್ತು ಸಂಶೋಧನ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆಗಾಗಿ ರಾಷ್ಟ್ರಪತಿ ಎ.ಪಿ.ಜೆ. ಅಬ್ದುಲ್ ಕಲಾಂ ಅವರಿಂದ ರಾಷ್ಟ್ರೀಯ ಗೌರವ ಪುರಸ್ಕಾರ ಪಡೆದರು.

2007: ಸ್ತನ ಕ್ಯಾನ್ಸರ್ ರೋಗಕ್ಕೆ ಕಾರಣವಾಗುವ ವಂಶವಾಹಿಗಳನ್ನು (ಜೀನ್ಸ್) ಪತ್ತೆ ಹಚ್ಚುವಲ್ಲಿ ತಾವು ಯಶಸ್ವಿಯಾಗಿರುವುದಾಗಿ ಕ್ಯಾನ್ಸರ್ ತಜ್ಞ ಕರೋಲ್ ಸಿಕೋರ ನೇತೃತ್ವದ ವಿಜ್ಞಾನಿಗಳ ತಂಡವೊಂದು ಲಂಡನ್ನಿನಲ್ಲಿ ಪ್ರಕಟಿಸಿತು. ಮಹಿಳೆಯರಲ್ಲಿ ಸ್ತನ ಕ್ಯಾನ್ಸರಿಗೆ ಕಾರಣವಾಗುವ ಕನಿಷ್ಠ ನಾಲ್ಕು ವಂಶವಾಹಿಗಳನ್ನು ತಾವು ಪತ್ತೆ ಹಚ್ಚಿರುವುದಾಗಿ ಈ ವಿಜ್ಞಾನಿಗಳು `ನೇಚರ್ ಅಂಡ್ ನೇಚರ್ ಜೆನೆಟಿಕ್ಸ್' ಪತ್ರಿಕೆಯ ಆನ್ ಲೈನ್ ಆವೃತ್ತಿಯಲ್ಲಿ ಪ್ರಕಟಿಸಿದರು. ವಂಶವಾಹಿ ವಿಜ್ಞಾನದಲ್ಲಿ ಇದೊಂದು ಮಹತ್ವದ ಮುನ್ನಡೆ.

2007: ಎಂಜಿನಿಯರಿಂಗ್ ಶಿಕ್ಷಣದ ಬಡ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ವಿಶ್ವೇಶ್ವರಯ್ಯ ತಾಂತ್ರಿಕ ವಶ್ವ ವಿದ್ಯಾಲಯವು (ವಿಟಿಯು) ತನ್ನ ವಾಪ್ತಿಗೆ ಒಳಪಟ್ಟ ಕಾಲೇಜುಗಳ ವಿದ್ಯಾರ್ಥಿಗಳಿಗೆ ಯಾವುದೇ ಭದ್ರತೆಯ ಆವಶ್ಯಕತೆ ಇಲ್ಲದೆ 4 ಲಕ್ಷ ರೂಪಾಯಿಗಳವರೆಗೆ ಸಾಲ ನೀಡಲು ನಿರ್ಧರಿಸಿತು. ವಿಟಿಯು ಕುಲಪತಿ ಡಾ. ಕೆ. ಬಾಲವೀರರೆಡ್ಡಿ ಈ ವಿಚಾರ ಪ್ರಕಟಿಸಿದರು.

2007: ಉಡುಪಿ ಜಿಲ್ಲೆಯ ಮೂಳೂರು ಪ್ರದೇಶದಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಮದುವೆಗೆ ಹೊರಟಿದ್ದ ವ್ಯಾನೊಂದು ಅಪಘಾತಕ್ಕೆ ಈಡಾದ ಪರಿಣಾಮವಾಗಿ 7 ಮಕ್ಕಳು, 9 ಮಹಿಳೆಯರು ಸೇರಿ ಒಟ್ಟು 17 ಜನ ಮೃತರಾದರು.

2007: ಸುಂದರಗಢ ಜಿಲ್ಲೆಯ ಖಂದಧರ್ ಬೆಟ್ಟಗಳಲ್ಲಿ ಸಮೀಕ್ಷೆ ಕಾಲದಲ್ಲಿ ಅವಯವ ರಹಿತ ಹಲ್ಲಿಗಳನ್ನು ಪತ್ತೆ ಹಚ್ಚಿದುದಾಗಿ ಒರಿಸ್ಸಾ ಪ್ರಾಣಿಶಾಸ್ತ್ರಜ್ಞರ ತಂಡ ಪ್ರಕಟಿಸಿತು.

2006: ಫಿಲಿಪ್ಪೀನ್ಸಿನ ರಾಜಧಾನಿ ಮನಿಲಾ ಸಮೀಪದ ಫೆಸಿಗ್ ನಗರದಲ್ಲಿ ಈದಿನ ಮುಕ್ತಾಯಗೊಂಡ ನಾಲ್ಕು ಸ್ಟಾರ್ ಫಿಲಿಪ್ಪೀನ್ಸ್ ಓಪನ್ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್ಪಿನ ಫೈನಲ್ಲಿನಲ್ಲಿ ಪ್ರಶಸ್ತಿ ಗೆದ್ದ ನೈನಾ ನೆಹ್ವಾಲ್ ರಾಷ್ಟ್ರದ ಬ್ಯಾಡ್ಮಿಂಟನ್ ರಂಗದ ದಾಖಲೆಯ ಪುಟದಲ್ಲಿ ತಮ್ಮ ಹೆಸರು ಸೇರ್ಪಡೆ ಮಾಡಿದರು.

1998: ಭಾರತದ ಅಣ್ವಸ್ತ್ರ ಪರೀಕ್ಷೆಗಳಿಗೆ ಪ್ರತಿಯಾಗಿ ಪಾಕಿಸ್ತಾನ ಐದು ಅಣ್ವಸ್ತ್ರಗಳನ್ನು ಸ್ಫೋಟಿಸಿತು. ಇದನ್ನು ಅನುಸರಿಸಿ ಅಮೆರಿಕ, ಜಪಾನ್ ಮತ್ತು ಇತರ ರಾಷ್ಟ್ರಗಳು ಪಾಕಿಸ್ತಾನದ ವಿರುದ್ಧ ಆರ್ಥಿಕ ದಿಗ್ಬಂಧನ ಹೇರಿದವು.

1997: ಮಾಜಿ ಕೇಂದ್ರ ಸಚಿವರಾದ ಅರ್ಜುನ್ ಸಿಂಗ್, ಎನ್.ಡಿ. ತಿವಾರಿ, ಆರ್.ಕೆ. ಧವನ್ ಮತ್ತು ಮಾಧವರಾವ್ ಸಿಂಧಿಯಾ ಅವರನ್ನು ವಿ.ಬಿ. ಗುಪ್ತ ನೇತೃತ್ವದ ವಿಶೇಷ ನ್ಯಾಯಾಲಯವು ಜೈನ್ ಹವಾಲಾ ಹಗರಣದಿಂದ ಮುಕ್ತಗೊಳಿಸಿತು.

1964: ಪ್ಯಾಲಸ್ತೈನ್ ಲಿಬರೇಶನ್ ಆರ್ಗನೈಸೇಷನ್ (ಪಿಎಲ್ಒ) ಸ್ಥಾಪನೆಗೊಂಡಿತು.

1961: ಮಾನವ ಹಕ್ಕುಗಳ ಉಲ್ಲಂಘನೆ ಕುರಿತು ಜನಾಭಿಪ್ರಾಯ ರೂಪಿಸಲು ಮತ್ತು ರಾಜಕೀಯ ಕೈದಿಗಳ ಬಿಡುಗಡೆಗೆ ಒತ್ತಾಯಿಸಲು ಬ್ರಿಟಿಷ್ ವಕೀಲ ಪೀಟರ್ ಬೆನೆನ್ಸನ್ ಲಂಡನ್ನಿನಲ್ಲಿ `ಅಮ್ನೆಸ್ಟಿ ಇಂಟರ್ ನ್ಯಾಷನಲ್' ಸಂಘಟನೆಯನ್ನು ಸ್ಥಾಪಿಸಿದರು. ಶಾಂತಿ, ನ್ಯಾಯ ಮತ್ತು ಜಗತ್ತಿನಲ್ಲಿ ಶಾಂತಿ ಸ್ಥಾಪನೆಗೆ ನೆಲೆಗಟ್ಟು ಒದಗಿಸಲು ಸಲ್ಲಿಸಿದ ಸೇವೆಗಾಗಿ ಈ ಸಂಘಟನೆಗೆ 1977ರ ನೊಬೆಲ್ ಪ್ರಶಸ್ತಿ ಲಭಿಸಿತು.

1930: ಕ್ರಾಂತಿಕಾರಿ ಸ್ವಾತಂತ್ರ್ಯ ಹೋರಾಟಗಾರ ಭಗವತಿ ಚರಣ ವೋಹ್ರಾ ನಿಧನರಾದರು.

1906: ಸಾಹಿತಿ, ಕಾದಂಬರಿಕಾರ, ನಾಟಕಕಾರ ಕೆ. ವೆಂಕಟರಾಮಪ್ಪ (28-5-1906 ರಿಂದ 2-9-1991) ಅವರು ಸುಬ್ಬಾಶಾಸ್ತ್ರಿ- ಸಾವಿತ್ರಮ್ಮ ದಂಪತಿಯ ಪುತ್ರನಾಗಿ ಈ ದಿನ ಜನಿಸಿದರು. ಕರ್ನಾಟಕ ಸಾಹಿತ್ಯ ಪರಿಷತ್ ವೆಂಕಟರಾಮಪ್ಪ ಅವರ ವಿದ್ವತ್ತನ್ನು ಗುರುತಿಸಿ 1986ರಲ್ಲಿ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ನೀಡಿ ಗೌರವಿಸಿತ್ತು.

1923: ತೆಲುಗು ಚಿತ್ರನಟ, ತೆಲುಗುದೇಶಂ ಪಕ್ಷದ ಸ್ಥಾಪಕ, ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಎನ್.ಟಿ. ರಾಮರಾವ್ (1923-96) ಜನ್ಮದಿನ.

1883: ಭಾರತದ ಕ್ರಾಂತಿಕಾರಿ ಸ್ವಾತಂತ್ರ್ಯ ಹೋರಾಟಗಾರ ವಿನಾಯಕ ದಾಮೋದರ ಸಾವರ್ಕರ್ (1883-1966) ಜನ್ಮದಿನ.

1865: `ಬ್ರೋಚೆವಾರೆವರುರಾ' ಕೃತಿ ರಚಿಸಿದ ಖ್ಯಾತ ಸಂಗೀತಗಾರ ಮೈಸೂರು ವಾಸುದೇವಾಚಾರ್ಯ (28-5-1865ರಿಂದ 17-5-1961) ಅವರು ಸುಬ್ರಹ್ಮಣ್ಯಾಚಾರ್ಯ- ಕೃಷ್ಣಾಬಾಯಿ ದಂಪತಿಯ ಮಗನಾಗಿ ಮೈಸೂರಿನಲ್ಲಿ ಜನಿಸಿದರು.

1759: ವಿಲಿಯಂ ಪಿಟ್ ಜನ್ಮದಿನ (1759-1806). ಈತ ಅತ್ಯಂತ ಕಿರಿಯ ಬ್ರಿಟಿಷ್ ಪ್ರಧಾನಿ. 1783ರಲ್ಲಿ ಪ್ರಧಾನಿಯಾದಾಗ ಈತನಿಗೆ 24 ವರ್ಷ ವಯಸ್ಸು. ಈತ ಪ್ರಧಾನಿ ಸ್ಥಾನಕ್ಕೆ ತಂದೆಯ ಉತ್ತರಾಧಿಕಾರಿಯಾಗಿ ಆಯ್ಕೆಯಾದ ಮೊತ್ತ ಮೊದಲ ವ್ಯಕ್ತಿ ಕೂಡಾ.

1738: ಜೋಸೆಫ್ ಗಿಲೋಟಿನ್ (1738-1814) ಹುಟ್ಟಿದ ದಿನ. ಫ್ರಾನ್ಸಿನ `ತಲೆ ಕಡಿಯುವ ಯಂತ್ರ'ಕ್ಕೆ ಈ ವ್ಯಕ್ತಿಯ ಹೆಸರನ್ನೇ ಇಡಲಾಯಿತು. ಇಂತಹ ಯಂತ್ರದ ಬಗ್ಗೆ ಬೋಧಿಸುತ್ತಿದ್ದ ಹಿನ್ನೆಲೆಯಲ್ಲಿ ಈತನ ಹೆಸರನ್ನು ಅದಕ್ಕೆ ನೀಡಲಾಯಿತು. ಆದರೆ ಈ ಯಂತ್ರ ಆತನ ಸಂಶೋಧನೆಯಲ್ಲ.

(ಸಂಗ್ರಹ: ನೆತ್ರಕೆರೆ ಉದಯಶಂಕರ)

Tuesday, May 27, 2008

ಗೋಮಾತೆಯ ಆಶೀರ್ವಾದ ಫಲಿಸಿತು..! Gou matha blessed Yeddyurappa!

Gou matha blessed Yeddyurappa!

Yes, after six months, blessings of Gou Matha clicked and Mr. B.S. Yeddyurappa, who identified himself as favorite of farmers and his party BJP won the legislative assembly elections in Karnataka. In Koti Neerajana Programme held at Bangalore in last November Sri Raghaveshwara Bharati Swamiji of Sri Ramachandrapur Mutt said that those who involve themselves in the task of Gou Samrakshne, will be definitely blessed by Gou Matha.

ಗೋಮಾತೆಯ ಆಶೀರ್ವಾದ ಫಲಿಸಿತು..!

ಬಿಜೆಪಿ ಧುರೀಣ ಬಿ.ಎಸ್. ಯಡಿಯೂರಪ್ಪ ಅವರಿಗೆ ಗೋಮಾತೆಯ ಸೇವೆಯಲ್ಲಿ ಕಾಯಾ, ವಾಚಾ, ಮನಸಾ ತೊಡಗಿಸಿಕೊಂಡದ್ದರ ಫಲ ಲಭಿಸಿದೆ. ಬಹುಶಃ ಇದೇ ಮೊದಲ ಬಾರಿಗೆ ರೈತ ಪರ ಹೋರಾಟಗಾರ ಎಂದು ಸ್ವತಃ ಗುರುತಿಸಿಕೊಂಡ ವ್ಯಕ್ತಿ ಕರ್ನಾಟಕದ 25ನೇ ಮುಖ್ಯಮಂತ್ರಿ ಆಗುತ್ತಿದ್ದಾರೆ. ಎಚ್.ಡಿ. ದೇವೇಗೌಡರು ಈಗ ಕಾಂಗ್ರೆಸ್ ಜೊತೆಗೆ ಕೈಜೋಡಿಸದೇ ಇರುವ ಮೂಲಕ 'ಪಾಪ ಪರಿಮಾರ್ಜನೆ' ಮಾಡಿಕೊಳ್ಳಬೇಕಾಗಿದೆ.

ನೆತ್ರಕೆರೆ ಉದಯಶಂಕರ

ಕರ್ನಾಟಕ ಕಡೆಗೂ ಇತಿಹಾಸ ನಿರ್ಮಿಸಿತು. ಉತ್ತರ ಭಾರತದಲ್ಲಷ್ಟೇ ಗಟ್ಟಿ ನೆಲೆ ಹೊಂದಿದ್ದ ಬಿಜೆಪಿಗೆ 224 ಸದಸ್ಯಬಲದ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ 110 ಸ್ಥಾನಗಳನ್ನು ಒದಗಿಸಿಕೊಡುವ ಮೂಲಕ ದಕ್ಷಿಣ ಭಾರತದಲ್ಲಿ ಅಧಿಕಾರದತ್ತ ಸಾಗಲು ಹೆಬ್ಬಾಗಿಲನ್ನು ತೆರೆಯಿತು.

ಆದರೆ ಮುಖ್ಯವಾದ ವಿಚಾರ ಇದಲ್ಲ. ಬಹುಶಃ ಕರ್ನಾಟಕದ ಇತಿಹಾಸದಲ್ಲೇ ಮೊತ್ತ ಮೊದಲ ಬಾರಿಗೆ ತನ್ನನ್ನು ರೈತ ಪರ ಹೋರಾಗಾರನೆಂದೇ ಗುರುತಿಸಿಕೊಂಡು ಬಂದ ವ್ಯಕ್ತಿಯೊಬ್ಬರನ್ನು ಮುಖ್ಯಮಂತ್ರಿ ಗದ್ದುಗೆಯೆಡೆಗೆ ಈ ಚುನಾವಣೆ ತಂದಿರುವುದು ಇದಕ್ಕಿಂತ ಮುಖ್ಯವಾದ ವಿಚಾರ.

ಬಿ.ಎಸ್. ಯಡಿಯೂರಪ್ಪ ಮೊದಲಿನಿಂದಲೇ ರೈತಪರ ಹೋರಾಟಗಳಲ್ಲಿ ಸಕ್ರಿಯವಾಗಿ ತೊಡಗಿಕೊಂಡಿದ್ದ ವ್ಯಕ್ತಿ. ವಿರೋಧ ಪಕ್ಷದ ನಾಯಕರಾಗಿದ್ದಾಗಲೂ ರೈತರಿಗೆ ತೊಂದರೆಯಾದ ಸುದ್ದಿ ರಾಜ್ಯದ ಯಾವುದೇ ಮೂಲೆಯಿಂದ ಬಂದರೂ ತತ್ ಕ್ಷಣ ಅಲ್ಲಿಗೆ ನುಗ್ಗಿ ಮಾಹಿತಿ ಸಂಗ್ರಹಿಸಿಕೊಂಡು ಸದನದಲ್ಲಿ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳುತ್ತಿದ್ದ ಹೋರಾಟಗಾರ.

ಬಿಜೆಪಿ- ಜನತಾದಳ ಸಮ್ಮಿಶ್ರ ಸರ್ಕಾರದಲ್ಲಿ ಹಣಕಾಸು ಸಚಿವರಾದಾಗ, ರೈತರ ಸಾಲಮನ್ನಾ ಯೋಜನೆ ರೂಪಿಸಿದ್ದಕ್ಕಿಂತಲೂ ಹೆಚ್ಚಾಗಿ ರಾಷ್ಟ್ರದಲ್ಲೇ ಮೊತ್ತ ಮೊದಲ ಬಾರಿಗೆ ರೈತರಿಗೆ ಶೇಕಡಾ 4ರ ಬಡ್ಡಿ ದರದಲ್ಲಿ ಸಾಲ ಒದಗಿಸುವ ಚಾರಿತ್ರಿಕ ನಿರ್ಣಯ ಕೈಗೊಂಡು ತಮ್ಮ ಮಾತುಗಳು ಹೋರಾಟ ಕೇವಲ ಬೊಗಳೆ ಅಲ್ಲ ಎಂಬುದಾಗಿ ತೋರಿಸಿಕೊಟ್ಟವರು ಈ ಯಡಿಯೂರಪ್ಪ.

ಅವರ ಬಗ್ಗೆ ಪ್ರಸ್ತಾಪಿಸಲೇ ಬೇಕಾದ ಇನ್ನೊಂದು ಮುಖ್ಯ ವಿಚಾರ: ಗೋವುಗಳ ಬಗೆಗಿನ ಅವರ ಪ್ರೀತಿ. ಅನಾದಿ ಕಾಲದಿಂದಲೇ ರೈತರಿಗೆ ಆಪ್ತವಾದವುಗಳೆಂದರೆ ಗೋವುಗಳು ಮತ್ತು ಎತ್ತುಗಳು. ಗೋವುಗಳು ರೈತರಿಗೆ ಹಾಲು, ಬೆಣ್ಣೆ, ತುಪ್ಪ ಮೊಸರು ಒದಗಿಸುತ್ತಿದ್ದುದು ಅಷ್ಟೇ ಅಲ್ಲ, ಅವರ ವ್ಯವಸಾಯಕ್ಕೆ ಬೇಕಾದ ಸಮೃದ್ಧ ಸಾವಯವ ಗೊಬ್ಬರವನ್ನು ತಮ್ಮ ಸೆಗಣಿ- ಮೂತ್ರಗಳ ಮೂಲಕ ಒದಗಿಸಿಕೊಡುತ್ತಿದ್ದಂತಹ ಪರೋಪಜೀವಿಗಳು.

ಇಂತಹ ಗೋವುಗಳು- ಎತ್ತುಗಳು ಇತ್ತೀಚಿನ ದಿನಗಳಲ್ಲಿ ಕಸಾಯಿಖಾನೆ ತಲುಪಿ ನಶಿಸುತ್ತಾ ಬರುತ್ತಿದ್ದುದನ್ನು ಗಮನಿಸಿದ ಹೊಸನಗರ ಶ್ರೀರಾಮಚಂದ್ರಾಪುರ ಮಠದ ಶೀ ರಾಘವೇಶ್ವರ ಭಾರತೀ ಸ್ವಾಮೀಜಿ ಅವರು ಭಾರತೀಯ ಗೋತಳಿಯ ಸಂರಕ್ಷಣೆಗಾಗಿ ಆಂದೋಲನವನ್ನೇ ಸಂಘಟಿಸಿದ್ದು ಎಲ್ಲರಿಗೂ ಗೊತ್ತು.

ಮುಖ್ಯಮಂತ್ರಿ ಸ್ಥಾನದ ಅಭ್ಯರ್ಥಿಯಾಗಿ ಚುನಾವಣೆಗೆ ಮೊದಲೇ ಬಿಂಬಿತರಾದ ಯಡಿಯೂರಪ್ಪ ಅವರು ಈ ಚಳವಳಿಗೆ ಆಸರೆಯಾಗಿ ನಿಂತ ವ್ಯಕ್ತಿ ಎಂಬುದು ಇಲ್ಲಿ ಗಮನಿಸಬೇಕಾದ ಅಂಶ. ಕರ್ನಾಟಕದ ಸರ್ಕಾರಗಳ ಇತಿಹಾಸದಲ್ಲೇ ಮೊದಲ ಬಾರಿಗೆ ಅವರು ಗೋ ಸಂರಕ್ಷಣೆಯ ಕಾರ್ಯಕ್ಕೆ ಮುಂಗಡಪತ್ರದಲ್ಲೇ ನಿಧಿ ಒದಗಿಸಿದರು.

ಶ್ರೀಗಳು ಗೋ ಸಂರಕ್ಷಣೆಯ ಸಂಬಂಧ ಜಾಗೃತಿ ಮೂಡಿಸುವ ಸಲುವಾಗಿ ಗೋ ರಥಯಾತ್ರೆ ಸಂಘಟಿಸಿದಾಗ ಸ್ವತಃ ಅಲ್ಲಿಗೆ ಆಗಮಿಸಿ ಬೆಂಬಲವಿತ್ತ ಏಕೈಕ ರಾಜಕಾರಣಿ, ಅಷ್ಟೇ ಏಕೆ ಹೊಸನಗರದಲ್ಲಿ ವಿಶ್ವ ಗೋ ಸಮ್ಮೇಳನವನ್ನು ಸಂಘಟಿಸಿದಾಗ, ಹತ್ತಾರು ಮಂದಿಯ ಕೆಂಗಣ್ಣು- ಟೀಕೆಗಳ ವಾಕ್ಬಾಣಕ್ಕೆ ಜಗ್ಗದೆ ಈ ಸಮ್ಮೇಳನಕ್ಕೂ ಹಣಕಾಸಿನ ನೆರವು ಒದಗಿಸಿದ ವ್ಯಕ್ತಿ ಇದೇ ಯಡಿಯೂರಪ್ಪ.

ಬೆಂಗಳೂರಿನ ಅರಮನೆ ಮೈದಾನದಲ್ಲಿ ಆರು ತಿಂಗಳ ಹಿಂದೆ ಗೋವಿಗೆ ಕೋಟಿ ಆರತಿ ಬೆಳಗುವ 'ಕೋಟಿ ನೀರಾಜನ' ಕಾರ್ಯಕ್ರಮ ನಡೆದಾಗ ಈ ವಿಚಾರಗಳನ್ನೆಲ್ಲ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ ಅವರೇ ಸ್ವತಃ ಲಕ್ಷಾಂತರ ಮಂದಿಯ ಎದುರು ಬಹಿರಂಗ ಪಡಿಸಿದ್ದರು.

ಆ ಹೊತ್ತಿನಲ್ಲೂ ಯಡಿಯೂರಪ್ಪ ಸಮಾರಂಭದಲ್ಲಿ ಹಾಜರಿದ್ದರು. ಆ ವೇಳೆಗೆ ಅವರು ಮುಖ್ಯಮಂತ್ರಿಯಾಗಿದ್ದರು. ಮರುದಿನ ಸದನದಲ್ಲಿ ವಿಶ್ವಾಸಮತ ಪಡೆಯಬೇಕಿತ್ತು. ಅವರು ವಿಶ್ವಾಸ ಮತ್ತ ಗೆಲ್ಲುವ ಬಗ್ಗೆ ಭಾರೀ ಆನುಮಾನಗಳಿದ್ದ ಹೊತ್ತು ಅದಾಗಿತ್ತು. ಅಂತಹ ಹೊತ್ತಿನಲ್ಲೂ ಗೋ ಸಂರಕ್ಷಣೆಯ ಪ್ರತಿಜ್ಞೆ ಸ್ವೀಕಾರ ಸಮಾರಂಭದಲ್ಲಿ ಅವರು ಹಾಜರಿದ್ದರು!

ಗೋವುಗಳ ಬಗೆಗಿನ ಪ್ರೀತಿಯ ಬಗ್ಗೆ ಮಾತನಾಡಿದ ಶ್ರೀಗಳು ಆ ದಿನ ಹೇಳಿದ್ದರು: 'ಗೋಮಾತೆಯ ಸಂರಕ್ಷಣೆಗಾಗಿ ದುಡಿಯುವವರನ್ನು ಗೋಮಾತೆ ಕೈಬಿಡುವುದಿಲ್ಲ. ರಕ್ಷಿಸುತ್ತಾಳೆ' ಎಂದು!

ನಿಜ. ಮರುದಿನ ನಡೆದ ವಿಶ್ವಾತ ಮತ ಯಾಚನೆಯಲ್ಲಿ ಯಡಿಯೂರಪ್ಪ ಗೆಲ್ಲಲಿಲ್ಲ, ಆದರೆ ಗೋಮಾತೆಯ ಆಶೀರ್ವಾದ ಅವರ ಕೈಬಿಡಲಿಲ್ಲ. ಆರು ತಿಂಗಳುಗಳ ಬಳಿಕ ನಡೆದ ಮಹಾಚುನಾವಣೆಯಲ್ಲಿ ಬಿಜೆಪಿ ವಿಜಯಗಳಿಸಿದೆ. ಯಡಿಯೂರಪ್ಪ ಅವರು ಮುಂದಿನ ಪೂರ್ತಿ ಅವಧಿಗೆ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸುವ ಅವಕಾಶ ಒದಗಿ ಬಂದಿದೆ.

ಹಾಗೆ ನೋಡುವುದಿದ್ದರೆ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರೂ ಮುಖ್ಯಮಂತ್ರಿಯಾದಾಗ ಶ್ರೀಗಳ ಸಮ್ಮುಖದಲ್ಲಿ ಗೋವುಗಳನ್ನು ತಮ್ಮ ಮನೆ ಒಳಕ್ಕೆ ಕರೆಸಿಕೊಳ್ಳುವ ಮೂಲಕವೇ 'ಕೃಷ್ಣಾ' ಪ್ರವೇಶಿಸಿದ್ದರು.

ಆದರೆ ವಚನಗಳು ಕೇವಲ ವಚನಗಳಾಗಿ ಉಳಿಯಬಾರದು, ಕೃತಿಯಲ್ಲಿ ಬಿಂಬಿತವಾಗಬೇಕು. ಯಡಿಯೂರಪ್ಪ ಜೊತೆಗೆ ಅಧಿಕಾರ ಹಂಚಿಕೆಯ 'ಸಜ್ಜನ' ಒಪ್ಪಂದ ಮಾಡಿಕೊಂಡು ಮುಖ್ಯಮಂತ್ರಿಯಾದ ಕುಮಾರಸ್ವಾಮಿ ಮಾತು ತಪ್ಪಿದರು. ಒಪ್ಪಂದದಂತೆ ಅಧಿಕಾರ ಬಿಟ್ಟುಕೊಡಲು ಇನ್ನಿಲ್ಲದ ತಕರಾರು ತೆಗೆದರು. 'ಮಣ್ಣನ ಮಗ' ದೇವೇಗೌಡರು ಬಿಜೆಪಿ ವಿರುದ್ಧ ಇನ್ನಿಲ್ಲದ ಫಿತೂರಿ ಹೂಡಿದರು..!

ಇವೆಲ್ಲದರ ಪರಿಣಾಮವಾಗಿ ಒಪ್ಪಂದದಂತೆ ಮುಖ್ಯಮಂತ್ರಿ ಆಗಿ ಮುಂದುವರೆಯಬೇಕಾಗಿದ್ದ ಯಡಿಯೂರಪ್ಪ ಅಧಿಕಾರದಲ್ಲಿ ಮುಂದುವರೆಯಲಾಗದೆ ಬೀದಿ ಬೀದಿ ಸುತ್ತುವಂತಾಯಿತು.

ರಾಜಕೀಯದ ಹಾವು ಏಣಿಯಾಟದಲ್ಲಿ ತಾವು ಮಾತ್ರವೇ ಏಣಿಯನ್ನು ಬಳಸಿಕೊಂಡು, ಒಂದೆಡೆಯಿಂದ ಕಾಂಗ್ರೆಸ್, ಮತ್ತೊಂದೆಡೆಯಿಂದ ಬಿಜೆಪಿಯನ್ನು ಹಾವಿನ ಬಾಯಿಗೆ ಬೀಳಿಸಿದ ಜನತಾದಳ (ಎಸ್) ಧುರೀಣ ಎಚ್.ಡಿ. ದೇವೇಗೌಡ ಮತ್ತು ಮಗ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಮತದಾರರು ಇದೀಗ ತಕ್ಕ ಉತ್ತರ ಕೊಟ್ಟಿದ್ದಾರೆ.

ವಚನಭಂಗದ ಲೋಪ ಎಸಗಿ, ಅವಧಿಗೆ ಮುನ್ನವೇ ರಾಜ್ಯವನ್ನು 'ಚುನಾವಣಾ ಸಮರಾಂಗಣ'ವನ್ನಾಗಿ ಪರಿವರ್ತಿಸಿದ್ದಕ್ಕಾಗಿ ಜನತಾದಳ ಮತ್ತು ಕಾಂಗ್ರೆಸ್ ಎರಡೂ ಪಕ್ಷಗಳಿಗೆ ಜನ ಮಣ್ಣು ಮುಕ್ಕಿಸಿದ್ದಾರೆ.

80 ಸ್ಥಾನಗಳನ್ನು ಗೆದ್ದುಕೊಂಡು ತನ್ನ ಪರಿಸ್ಥಿತಿಯನ್ನು ಸ್ವಲ್ಪ ಮಟ್ಟಿಗೆ ಸುಧಾರಿಸಿಕೊಳ್ಳಲು ಕಾಂಗ್ರೆಸ್ಸಿಗೆ ಸಾಧ್ಯವಾದರೂ, ಅದಕ್ಕಾಗಿ ಅದು ತೆತ್ತ ಬೆಲೆ? ದಳದ ಜೊತೆ ಸೇರಿ ಮುಖ್ಯಮಂತ್ರಿ ಹುದ್ದೆಯ ಖುಷಿ ಅನುಭವಿಸಿದ 'ಅಜಾತಶತ್ರು', ಧರ್ಮಸಿಂಗ್, ಎರಡೂ ಸರ್ಕಾರಗಳಲ್ಲಿ ಅಧಿಕಾರದ ಖುಷಿ ಅನುಭವಿಸಿ ನಂತರ ಕಾಂಗ್ರೆಸ್ಸಿಗೆ ಓಡಿದ ಎಂ.ಪಿ. ಪ್ರಕಾಶ್, ಸಜ್ಜನ ಧುರೀಣರೆಂದೇ ಹೆಸರಾಗಿದ್ದ ಎಚ್.ಕೆ. ಪಾಟೀಲ, ಆರ್.ವಿ. ದೇಶಪಾಂಡೆ, ಚಿತ್ರ ನಟ ಅಂಬರೀಷರಂತಹ ಅತಿರಥ ಮಹಾರಥರೆಲ್ಲ ದೂಳಿಪಟವಾದರು!

ಜನತಾದಳದ ಅಧ್ಯಕ್ಷರೇ ನೆಲಕಚ್ಚಿದರೆ ಅದರ ಒಟ್ಟು ಸ್ಥಾನಗಳು ಕಳೆದ ಸಲಕ್ಕಿಂತ ಕೆಳಕ್ಕೆ ಕುಸಿದು 28ರ ಅಂಚಿಗೆ ಬಂದು ನಿಂತವು.

ಕಾಂಗ್ರೆಸ್ಸು, ಜನತಾದಳಗಳ ಒಳಬೆಂಬಲದೊಂದಿಗೆ ಯಡಿಯೂರಪ್ಪನವರಿಗೇ ಸೆಡ್ಡು ಹೊಡೆದು ತೊಡೆ ತಟ್ಟಿದ ಸಮಾಜವಾದಿ ಪಕ್ಷದ ಎಸ್. ಬಂಗಾರಪ್ಪ ಶಿಕಾರಿಪುರ, ಸೊರಬ ಎರಡೂ ಕಡೆ ಸೋತು ಸುಣ್ಣವಾದರು. ಅವರ ಪುತ್ರರಾದ ಕುಮಾರ ಬಂಗಾರಪ್ಪ, ಮಧು ಬಂಗಾರಪ್ಪ ಅವರನ್ನೂ ಜನ ಮೂಲೆಗೆ ತಳ್ಳಿದರು.

ಸಮಾಜವಾದಿ ಪಕ್ಷ, ಬಹುಜನ ಸಮಾಜ ಪಕ್ಷ, ಸುವರ್ಣಯುಗ, ಸಿಪಿಐ, ಸಿಪಿಎಂ, ಸಂಯುಕ್ತ ಜನತಾದಳ, ವಾಟಾಳ್ ನಾಗರಾಜರ ಕನ್ನಡ ಪಕ್ಷ, ಚಂದ್ರಶೇಖರ ಪಾಟೀಲರ ಪಕ್ಷ ಸೇರಿದಂತೆ ಇತರೆಲ್ಲ ಪಕ್ಷಗಳೂ ಖಾತೆ ತೆರೆಯಲೂ ವಿಫಲವಾದವು.

ನಿಜ, ಗೆದ್ದ ಖುಷಿಯ ಜೊತೆಗೇ ಬಿಜೆಪಿಗೆ ಸರಳ ಬಹುಮತಕ್ಕೆ ಮೂರು ಮತಗಳ ಕೊರತೆಯ ಆತಂಕ ಉಂಟಾದರೂ
ಆರು ಮಂದಿ ಪಕ್ಷೇತರರ ಬೆಂಬಲದೊಂದಿಗೆ ಆ ಆತಂಕದ ಕಾರ್ಮೋಡ ಕರಗಿದೆ.

ಇದರ ನಡುವೆಯೂ ಕಾಂಗ್ರೆಸ್- ಮತ್ತು ಜನತಾದಳ ಒಟ್ಟಾಗಿ ಪಕ್ಷೇತರರನ್ನು ಮುಂದಿಟ್ಟುಕೊಂಡು ಬಿಜೆಪಿಗೆ ಅಡ್ಡಗಾಲಾಗಲು ಯತ್ನ ನಡೆದ ವರದಿಗಳಿವೆ. ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅದಕ್ಕೆ ಒಪ್ಪದ ಕಾರಣ ಈ ಯತ್ನ ಮೂಲೆ ಪಾಲಾದ ವರದಿಯೂ ಬಂದಿದೆ.

ಮೇ 30ರ ಶುಕ್ರವಾರ ಯಡಿಯೂರಪ್ಪ ಅವರು ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಅಧಿಕಾರ ಸೂತ್ರ ಹಿಡಿಯಲು ಸಜ್ಜಾಗಿದ್ದಾರೆ.
ಇಂತಹ ಹೊತ್ತಿನಲ್ಲಿ ಮಣ್ಣಿನ ಮಗನೆಂದುಕೊಳ್ಳುವ ಎಚ್.ಡಿ. ದೇವೇಗೌಡ ಮತ್ತು ಅವರ ಪುತ್ರ ಕುಮಾರ ಸ್ವಾಮಿ ಅವರಿಗೆ 'ವಚನದ್ರೋಹ'ದಿಂದ ಅಂಟಿಕೊಂಡ 'ಪಾಪ ಪರಿಮಾರ್ಜನೆ'ಗೆ ಒಂದು ಸರಳ ದಾರಿ ಇದೆ.

ಇದಕ್ಕಾಗಿ ಅವರು ಬಿಜೆಪಿ ಜೊತೆಗೆ ಕೈಜೋಡಿಸ ಬೇಕಾದ ಅಗತ್ಯ ಏನಿಲ್ಲ, ಆದರೆ ಕಾಂಗ್ರೆಸ್ಸಿನ ಜೊತೆಗೆ ಕೈಜೋಡಿಸಿ ಮತ್ತೆ ಹೊಸ 'ಷಡ್ಯಂತ್ರ' ಹೆಣೆಯದಿದ್ದರೆ ಸಾಕು, ಅವರ ಪಾಪ ಕರಗಿ ಹೋಗಬಹುದು. ಕರ್ನಾಟಕದ ಮತದಾರರ ಅಪೇಕ್ಷೆಯಂತೆ ಬಿಜೆಪಿಗೆ ಸರ್ಕಾರವನ್ನು ಸುಸೂತ್ರವಾಗಿ ನಡೆಸಲು ಸಾಧ್ಯವಾಗಬಹುದು. ಏಕೆಂದರೆ ಪಿ.ವಿ. ನರಸಿಂಹರಾವ್ ಅವರು ಪ್ರಧಾನಿ ಆದಾಗಲೂ ಅವರಿಗೆ ಬಹುಮತ ಇರಲಿಲ್ಲ. ಆದರೂ ಅವರ ಸರ್ಕಾರ ಐದು ವರ್ಷ ಸುಸೂತ್ರವಾಗಿ ಸಾಗಿತ್ತಲ್ಲ? ಹಾಗೆಯೇ.

ಅಧಿಕಾರಕ್ಕೆ ಬಂದೊಡನೆಯೇ ಮತ ನೀಡಿದ ಜನರನ್ನು ಮರೆಯುವವರು ಬಹಳ ಮಂದಿ. ಯಡಿಯೂರಪ್ಪ ಹಾಗೂ ಅವರ ಪಕ್ಷವಾದ ಬಿಜೆಪಿ ತಾವು ಅಂತಹ ವರ್ಗಕ್ಕೆ ಸೇರುವವರಲ್ಲ ಎಂಬುದನ್ನು ಸಾಬೀತು ಪಡಿಸಬೇಕಾದ ದೊಡ್ಡ ಹೊಣೆಗಾರಿಕೆ ಇದೆ. ರೈತರ ಆತ್ಮಹತ್ಯೆ ಇಂದೂ ಮುಂದುವರೆದಿದೆ, ಅವರ ಜೀವನ ಹಸನಾಗಬೇಕು. ರೈತರ ಜೀವನ ಹಸನಾಗಬೇಕು ಎಂದರೆ ಅವರ ಕೃಷಿ ವೆಚ್ಚ ತಗ್ಗಬೇಕು.

ಗೋವು ಆಧಾರಿತ ಸಾವಯವ ಕೃಷಿ, ದುಬಾರಿ ನೀರಾವರಿ ಯೋಜನೆಗಳ ಬದಲು ಮಳೆನೀರು ಕೊಯ್ಲು ಹಾಗೂ ಹಾಗೂ ಸರಳವಾಗಿ ನೀರಿಂಗಿಸಿ ಭೂಮಿಯನ್ನು ಸಮೃದ್ಧಗೊಳಿಸುವ ಯೋಜನೆಗಳಿಗೆ ಒತ್ತು ಸಿಗಬೇಕು. ರೈತರ ಉತ್ಪನ್ನಗಳಿಗೆ ಸೂಕ್ತ ಮಾರುಕಟ್ಟೆ, ಬೆಲೆ ಸಿಗಬೇಕು. ರೈತರಿಗೆ ಪಂಪ್ ಚಲಾಯಿಸಲು ವಿದ್ಯುತ್ ಮಾತ್ರವೇ ಅಲ್ಲ, ಸೀಮೆಎಣ್ಣೆ ಡೀಸೆಲ್ ಪಂಪ್ ಬಳಸುವ ರೈತರಿಗೆ ಸಾಕಷ್ಟು ಸೀಮೆ ಎಣ್ಣೆ, ಡೀಸೆಲ್ ಗ್ರಾಮಾಂತರ ಪ್ರದೇಶಗಳಲ್ಲಿ ಸಿಗುವಂತಾಗಬೇಕು.

ರೈತ ಯುವಕರಿಗೆ ಹಳ್ಳಿಗಳಲ್ಲೇ ಕೃಷಿ ಉತ್ಪನ್ನಗಳ ಸಂಸ್ಕರಣೆಗೆ ಬೇಕಾದ ಕಿರು ಕೈಗಾರಿಕಾ ಘಟಕಗಳ ಸ್ಥಾಪನೆಗೆ ಅವಕಾಶ ಪ್ರೋತ್ಸಾಹ ಲಭಿಸಬೇಕು. ತನ್ಮೂಲಕ ಕೃಷಿ ಉತ್ಪನ್ನಗಳ ಮೌಲ್ಯ ವರ್ಧನೆಯ ಅವಕಾಶಗಳು ಹೆಚ್ಚಬೇಕು. ಗೋವು ಸಂರಕ್ಷಣೆಯ ಕಾರ್ಯ, ಅವುಗಳಿಂದ ರೈತರಿಗೆ ಮಾತ್ರವೇ ಅಲ್ಲ, ಸಕಲರಿಗೂ ಲಭಿಸುವ ಅನುಕೂಲಗಳ ಬಗ್ಗೆ ಹೆಚ್ಚಿನ ಜಾಗೃತಿ ಮೂಡುವಂತಾಗಬೇಕು.

ಗೋಮಾತೆ ಆಶೀರ್ವದಿಸಿದರೆ ಭೂಮಿ ನಂದನವನವಾಗುತ್ತದೆ, ಬದುಕು ಸಮೃದ್ಧವಾಗುತ್ತದೆ, ಸಕಲರ ಆರೋಗ್ಯ ಸುಧಾರಿಸುತ್ತದೆ ಎಂಬ ಮಾತು ಸುಳ್ಳಲ್ಲ. ಇದೀಗ ಯಡಿಯೂರಪ್ಪ ಅವರಿಗೆ ಗೋಮಾತೆಯ ಆಶೀರ್ವಾದ ಲಭಿಸಿದೆ. ಅವರಿಂದ ಈ ಮಾತು ದಿಟ ಎಂಬುದು ಸಾಬೀತಾಗಲಿ ಎಂದು ಹಾರೈಸೋಣವೇ?

ಇಂದಿನ ಇತಿಹಾಸ History Today ಮೇ 27

ಇಂದಿನ ಇತಿಹಾಸ

ಮೇ 27

ಸ್ಯಾನ್ ಫ್ರಾನ್ಸಿಸ್ಕೊ ಮತ್ತು ಕ್ಯಾಲಿಫೋರ್ನಿಯಾದ ಮರೀನ್ ಕೌಂಟಿಯನ್ನು ಸಂಪರ್ಕಿಸಲು ಹೊಸದಾಗಿ ನಿರ್ಮಿಸಲಾದ ಗೋಲ್ಡನ್ ಗೇಟ್ ಬ್ರಿಜ್ಜನ್ನು ಸಾರ್ವಜನಿಕರಿಗೆ ಸಂಚಾರಕ್ಕಾಗಿ ತೆರೆಯಲಾಯಿತು. ಮೊದಲ ದಿನವೇ 2 ಲಕ್ಷ ಮಂದಿ ಸೇತುವೆಯನ್ನು ದಾಟಿದರು. ಈ ಸೇತುವೆಯನ್ನು ಪೂರ್ಣಗೊಳಿಸಲು 4 ವರ್ಷ, 4 ತಿಂಗಳು, 22 ದಿನಗಳು ಬೇಕಾದವು.

2007: ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಮತ್ತು ಸಿಬ್ಬಂದಿಯನ್ನು ಹೊತ್ತ ಹೆಲಿಕಾಪ್ಟರ್ ಪ್ರತಿಕೂಲ ಹವಾಮಾನದ ಪರಿಣಾಮವಾಗಿ ಚಾಮರಾಜನಗರ ಜಿಲ್ಲೆಯ ಯಳಂದೂರು ಬಳಿಯ ಕೆರೆ ಅಂಗಳದಲ್ಲಿ ಇಳಿಯಿತು. ಆದರೆ ಮುಖ್ಯಮಂತ್ರಿ ಸೇರಿದಂತೆ ಎಲ್ಲ ಸಿಬ್ಬಂದಿ ಅಪಾಯದಿಂದ ಪಾರಾದರು.

2007: ಖ್ಯಾತ ಚಿತ್ರ ನಿರ್ದೇಶಕ ಮಣಿರತ್ನಮ್ ಅವರ ಸಹೋದರ ಚಿತ್ರ ನಿರ್ಮಾಪಕ ಜಿ. ಶ್ರೀನಿವಾಸನ್ ಅವರು ಮನಾಲಿಯ ಹಾಲನ್ನಿನಲ್ಲಿ ಟ್ರೆಕ್ಕಿಂಗ್ ನಿರತರಾಗಿದ್ದಾಗ 50 ಅಡಿ ಆಳದ ಕಮರಿಗೆ ಬಿದ್ದು ಅಸು ನೀಗಿದರು. ಶ್ರೀನಿವಾಸನ್ ಅವರು ಗುರು ಚಿತ್ರದ ನಿರ್ಮಾಪಕರಾಗ್ದಿದು ಪತ್ನಿ ಸಂಧ್ಯಾ ಲಕ್ಮ್ಮಣ್, ಪುತ್ರಿ ಶ್ರೇಯಾ ಸೇರಿದಂತೆ ಕುಟುಂಬ ಸದಸ್ಯರೊಂದಿಗೆ ಟ್ರೆಕ್ಕಿಂಗ್ ನಡೆಸುತ್ತಿದ್ದಾಗ ದುರಂತಕ್ಕೆ ತುತ್ತಾದರು.

2007: ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ 50ನೇ ಜನ್ಮದಿನೋತ್ಸವದ ಸಂದರ್ಭದಲ್ಲಿ ಮಹಾರಾಷ್ಟ್ರದ ಸುಮಾರು 50,000 ದಲಿತರು ಬೌದ್ಧ ಧರ್ಮವನ್ನು ಸ್ವೀಕರಿಸಿದರು. ಮಹಾಲಕ್ಷ್ಮಿ ರೇಸ್ ಕೋರ್ಸಿನಲ್ಲಿ ಈ ಕಾರ್ಯಕ್ರಮ ನಡೆಯಿತು.

2007: ದೇಶದ ಪ್ರಮುಖ ಕಂಪೆನಿ ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ ಅಂಬಾನಿ ಅವರು ಭಾರತದ ಏಕೈಕ ಒಂದು ಲಕ್ಷ ಕೋಟ್ಯಾಧಿಪತಿ ಎಂಬ ಹೆಗ್ಗಳಿಕೆಗೆ ಪಾತ್ರರಾದರು.

2006: ಮಲಯಾಳಂ ಚಿತ್ರರಂಗದ ಖ್ಯಾತ ನಟ ಒಡವಿಲ್ ಉನ್ನಿಕೃಷ್ಣನ್ (62) ನಿಧನರಾದರು.

2006: ಸುನಾಮಿ ಏಟಿನಿಂದ ಇನ್ನೂ ಚೇತರಿಸದ ಇಂಡೋನೇಷ್ಯಕ್ಕೆ ಈದಿನ ನಸುಕಿನಲ್ಲಿ ಇನ್ನೊಂದು ಆಘಾತ. ಭಾರಿ ಜನಸಾಂದ್ರತೆ ಇರುವ ಜಾವಾ ಪ್ರಾಂತ್ಯದಲ್ಲಿ ಶಕ್ತಿಶಾಲಿ ಭೂಕಂಪ ಸಂಭವಿಸಿ ಒಟ್ಟು 5000ಕ್ಕೂ ಹೆಚ್ಚು ಮಂದಿ ಮೃತರಾದರು. ಸಹಸ್ರಾರು ಮಂದಿ ಗಾಯಗೊಂಡರು. ರಿಕ್ಟರ್ ಮಾಪಕದಲ್ಲಿ ಭೂಕಂಪದ ತೀವ್ರತೆ 6.2ರಷ್ಟಿತ್ತು. ಆ ಬಳಿಕ ಭೂಮಿ ಸುಮಾರು 45 ಸಲ ಕಂಪಿಸಿತು.

1999: ಕರ್ನಾಟಕದ ಜೆ.ಎಚ್. ಪಟೇಲ್ ನೇತೃತ್ವದ ಸರ್ಕಾರ ರಾಜ್ಯದಲ್ಲಿ ಭೂ ದಾಖಲೆಗಳ ಗಣಕೀಕರಣ ಕಾರ್ಯಕ್ರಮ ಆರಂಭಿಸಿತು. ಕಂದಾಯ ಸಚಿವ ಸೋಮಶೇಖರ್ ಕಾಲದಲ್ಲಿ ಚಿತ್ರದುರ್ಗ ಹಾಗೂ ಗುಲ್ಬರ್ಗದಲ್ಲಿ ಪ್ರಾಯೋಗಿಕವಾಗಿ ಕೇಂದ್ರ ನೆರವಿನೊಂದಿಗೆ ಈ ಕಾರ್ಯಕ್ರಮ ಆರಂಭಗೊಂಡಿತು. ಸರ್ಕಾರ ಅವಧಿಗೆ ಮುನ್ನ ಬಿದ್ದ ಕಾರಣ ಅದು ಮುಂದುವರೆಯಲಿಲ್ಲ. 2001ರಲ್ಲಿ ಎಸ್.ಎಂ. ಕೃಷ್ಣ ನೇತೃತ್ವದ ಸರ್ಕಾರ `ಭೂಮಿ' ಹೆಸರಿನಲ್ಲಿ ಈ ಕಾರ್ಯಕ್ರಮವನ್ನು ಮತ್ತೆ ಅನುಷ್ಠಾನಗೊಳಿಸಿತು. ಪಾರದರ್ಶಕತೆಗೆ ಅವಕಾಶ ಮಾಡಿಕೊಟ್ಟ ಈ ಕಾರ್ಯಕ್ರಮ 2006ರಲ್ಲಿವಿಶ್ವಸಂಸ್ಥೆಯ `ಸಾರ್ವಜನಿಕ ಸೇವಾ ಪ್ರಶಸ್ತಿ'ಗೆ ಪಾತ್ರವಾಯಿತು.

1994: ಅಲೆಗ್ಸಾಂಡರ್ ಸೋಲ್ಜೆನಿತ್ಸಿನ್ 20 ವರ್ಷಗಳ ವಿದೇಶವಾಸದ ನಂತರ ರಷ್ಯಕ್ಕೆ ಹಿಂತಿರುಗಿದರು.

1964: ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರೂ ನವದೆಹಲಿಯಲ್ಲಿ ತಮ್ಮ 74ನೇ ವಯಸ್ಸಿನಲ್ಲಿ ನಿಧನರಾದರು.

1937: ಸ್ಯಾನ್ ಫ್ರಾನ್ಸಿಸ್ಕೊ ಮತ್ತು ಕ್ಯಾಲಿಫೋರ್ನಿಯಾದ ಮರೀನ್ ಕೌಂಟಿಯನ್ನು ಸಂಪರ್ಕಿಸಲು ಹೊಸದಾಗಿ ನಿರ್ಮಿಸಲಾದ ಗೋಲ್ಡನ್ ಗೇಟ್ ಬ್ರಿಜ್ಜನ್ನು ಸಾರ್ವಜನಿಕರಿಗೆ ಸಂಚಾರಕ್ಕಾಗಿ ತೆರೆಯಲಾಯಿತು. ಮೊದಲ ದಿನವೇ 2 ಲಕ್ಷ ಮಂದಿ ಸೇತುವೆಯನ್ನು ದಾಟಿದರು. ಈ ಸೇತುವೆಯನ್ನು ಪೂರ್ಣಗೊಳಿಸಲು 4 ವರ್ಷ, 4 ತಿಂಗಳು, 22 ದಿನಗಳು ಬೇಕಾದವು.

1914: ಅಗ್ರಗಣ್ಯ ಪಿಟೀಲು ವಿದ್ವಾಂಸರಲ್ಲಿ ಒಬ್ಬರಾದ ಆರ್. ಆರ್. ಕೇಶವ ಮೂರ್ತಿ (27-5-1914ರಿಂದ 23-10-2006ರ ವರೆಗೆ) ಅವರು ರಾಮಸ್ವಾಮಯ್ಯ- ಸುಬ್ಬಮ್ಮ ದಂಪತಿಯ ಮಗನಾಗಿ ಸಂಗೀತ ಕಾಶಿ ಎನಿಸಿದ್ದ ರುದ್ರಪಟ್ಟಣದಲ್ಲಿ ಜನಿಸಿದರು.

1902: ಕಲಾವಿದ ಹಾರಾಡಿ ರಾಮ ಗಾಣಿಗ ಜನನ.

1897: ಸಾಹಿತ್ಯ ಮತ್ತು ರಂಗಭೂಮಿ ಎರಡರಲ್ಲೂ ವಿಶಿಷ್ಟ ಸೇವೆ ಸಲ್ಲಿಸಿದ ಬಿ. ಪುಟ್ಟಸ್ವಾಮಯ್ಯ (27-5-1897ರಿಂದ 25-1-1984) ಅವರು ಬಸಪ್ಪ - ಮಲ್ಲಮ್ಮ ದಂಪತಿಯ ಪುತ್ರನಾಗಿ ಬೆಂಗಳೂರಿನಲ್ಲಿ ಜನಿಸಿದರು. ಹಲವಾರು ಪತ್ರಿಕೆಗಳ ಸಂಪಾದಕರಾಗಿಯೂ ಸೇವೆ ಸಲ್ಲಿಸಿದ ಇವರು ಕಥೆ, ಕಾದಂಬರಿ ನಾಟಕಗಳನ್ನು ಬರೆದಿದ್ದು, ಇವರ ಜನಪ್ರಿಯ `ಮಲ್ಲಮ್ಮನ ಪವಾಡ' ಕಾದಂಬರಿ ಚಲನಚಿತ್ರವಾಗಿತ್ತು.

1703: ತ್ಸಾರ್ ದೊರೆ ಪೀಟರ್ ದಿ ಗ್ರೇಟ್ ರಷ್ಯದ ನೂತನ ರಾಜಧಾನಿ ಸೇಂಟ್ ಪೀಟರ್ಸ್ ಬರ್ಗನ್ನು ನಿರ್ಮಿಸಿದ. 1914ರಲ್ಲಿ ಅದನ್ನು ಪೆಟ್ರೋಗ್ರಾಡ್ ಎಂದು ಹೆಸರಿಸಲಾಯಿತು. 1924ರಲ್ಲಿ ಅದಕ್ಕೆ `ಲೆನಿನ್ ಗ್ರಾಡ್' ಎಂದು ಸೋವಿಯತ್ ನಾಯಕ ವ್ಲಾಡಿಮೀರ್ ಲೆನಿನ್ ಹೆಸರನ್ನು ಇಡಲಾಯಿತು. 1991ರಲ್ಲಿ ಮತ್ತೆ ಅದಕ್ಕೆ ಮೂಲ ಹೆಸರನ್ನೇ (ಸೇಂಟ್ ಪೀಟರ್ಸ್ ಬರ್ಗ್) ಇಡಲಾಯಿತು.

1679: ಇಂಗ್ಲೆಂಡಿನ ಸಂಸತ್ತು ಸಾರ್ವಜನಿಕರಿಗೆ ಅನಗತ್ಯ ಬಂಧನದಿಂದ ರಕ್ಷಣೆ ಒದಗಿಸುವ ಸಲುವಾಗಿ ಹೇಬಿಯಸ್ ಕಾರ್ಪಸ್ ಕಾನೂನನ್ನು ಅಂಗೀಕರಿಸಿತು. ಈ ಕಾನೂನಿನ ಮುಖ್ಯಾಂಶಗಳನ್ನು ನಂತರ ಅಮೆರಿಕದ ಸಂವಿಧಾನದಲ್ಲಿ ಸೇರ್ಪಡೆ ಮಾಡಲಾಯಿತು.

(ಸಂಗ್ರಹ: ನೆತ್ರಕೆರೆ ಉದಯಶಂಕರ)

Monday, May 26, 2008

ಇಂದಿನ ಇತಿಹಾಸ History Today ಮೇ 26

ಇಂದಿನ ಇತಿಹಾಸ

ಮೇ 26

ಅಮೆರಿಕದ ಮಹಿಳಾ ಗಗನಯಾನಿ ಸ್ಯ್ಲಾಲಿ ರೈಡ್ ಜನ್ಮದಿನ. ಈಕೆ 1983ರಲ್ಲಿ ಬಾಹ್ಯಾಕಾಶ ಷಟ್ಲ್ ನೌಕೆ ಚಾಲೆಂಜರ್ ಮೂಲಕ ಭೂಮಿಗೆ ಪ್ರದಕ್ಷಿಣೆ ಹಾಕಿದ ಮೊತ್ತ ಮೊದಲ ಮಹಿಳೆ.


2007: ಕೇಂದ್ರದ ಮಾಜಿ ಸಚಿವ, ರಾಷ್ಟ್ರೀಯ ನ್ಯಾಯಮಂಡಳಿಯ ಅಧ್ಯಕ್ಷ ಚಂದ್ರಜಿತ್ ಯಾದವ್ ನವದೆಹಲಿಯಲ್ಲಿ ನಿಧನರಾದರು. ಅವರು ಇಂದಿರಾಗಾಂಧಿ ಸಂಪುಟದಲ್ಲಿ ಉಕ್ಕು ಮತ್ತು ಗಣಿ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು.

2007: ರಾಷ್ಟ್ರದ ಭದ್ರತಾ ಸಮಸ್ಯೆಗಳನ್ನು ಸಮರ್ಥವಾಗಿ ನಿಭಾಯಿಸುವ ಸಲುವಾಗಿ ಕೇಂದ್ರ ಸರ್ಕಾರವು ವಿವಿಧ್ದೋದೇಶ ರಾಷ್ಟ್ರೀಯ ಗುರುತು ಚೀಟಿ ಯೋಜನೆಗೆ ಚಾಲನೆ ನೀಡಿತು. ರಾಜಧಾನಿಯ ನರೇಲಾದಲ್ಲಿ ಭಾರತದ ರಿಜಿಸ್ಟ್ರಾರ್ ಜನರಲ್ ದೇವೇಂದರ್ ಕುಮಾರ್ ಸಿಕ್ರಿ ಅವರು ವಾಯವ್ಯ ದೆಹಲಿಯ ನರೇಲಾದ ಮಹಿಳೆಯೊಬ್ಬರಿಗೆ ಮೊತ್ತ ಮೊದಲ ರಾಷ್ಟ್ರೀಯ ಗುರುತು ಚೀಟಿ ವಿತರಿಸಿದರು.

2007: ಪಕ್ಷದ ನಿಯಮ ಉಲ್ಲಂಘಿಸಿ ಪರಸ್ಪರ ಆರೋಪ- ಪ್ರತ್ಯಾರೋಪದಲ್ಲಿ ತೊಡಗಿದ್ದ ಕೇರಳದ ಮುಖ್ಯಮಂತ್ರಿ ವಿ.ಎಸ್. ಅಚ್ಯುತಾನಂದನ್ ಮತ್ತು ಸಿಪಿ ಎಂ ರಾಜ್ಯ ಕಾರ್ಯದರ್ಶಿ ಪಿನರಾಯಿ ವಿಜಯನ್ ಅವರನ್ನು ಸಿಪಿಎಂನ ಉನ್ನತ ನೀತಿ ನಿರೂಪಕ ಸಮಿತಿಯಾದ ಪಾಲಿಟ್ ಬ್ಯೂರೋದಿಂದ ಅಮಾನತುಗೊಳಿಸಲಾಯಿತು.

2007: ಭಾರತೀಯ ಕ್ರಿಕೆಟ್ ತಂಡದ ಅಗ್ರಶ್ರೇಯಾಂಕದ ನಾಲ್ವರು ಆಟಗಾರರು ಢಾಕಾದ ಮೀರ್ ಪುರ ಬೆಂಗಾಲ್ ಜೈತಿಯಾ ಕ್ರೀಡಾಂಗಣದಲ್ಲಿ ಮೊತ್ತ ಮೊದಲ ಬಾರಿಗೆ ಶತಕ ಗಳಿಸುವುದರೊಂದಿಗೆ ವಿಶ್ವದಾಖಲೆ ನಿರ್ಮಿಸಿದರು. ವಾಸಿಂ ಜಾಫರ್ (ಗಾಯಗೊಂಡು ನಿವೃತ್ತಿ 138), ದಿನೇಶ್ ಕಾರ್ತಿಕ್ (129), ರಾಹುಲ್ ದ್ರಾವಿಡ್ (129) ಹಾಗೂ ಸಚಿನ್ ತೆಂಡೂಲ್ಕರ್ (ಔಟಾಗದೇ 122) ಅವರು ಇತಿಹಾಸ ನಿರ್ಮಿಸಿದ ಆಟಗಾರರು.

2007: ಜರ್ಮನಿಯಿಂದ ಅಟ್ಲಾಂಟಾಕ್ಕೆ ಹೊರಟಿದ್ದ ಡೆಲ್ಟಾ ಏರ್ ಲೈನ್ಸ್ ವಿಮಾನದಲ್ಲಿ ಡಾ. ರಾಬರ್ಟ್ ವಿನ್ಸೆಂಟ್ ಮತ್ತು ಡಾ. ಡಿಯೇಟರ್ ಕೆ. ಗುಣ್ ಕಲ್ ಅವರು ಹಾರುತ್ತಿದ್ದ ವಿಮಾನದಲ್ಲೇ ಮಹಿಳೆಯೊಬ್ಬರಿಗೆ ಹೆರಿಗೆ ನೋವು ಕಾಣಿಸಿಕೊಂಡಾಗ ಸೂಕ್ತ ವೈದ್ಯೋಪಚಾರ ಮಾಡಿ ಹೆರಿಗೆ ಮಾಡಿಸಿದರು. ಹುಟ್ಟಿದ ಗಂಡು ಮಗು ಉಸಿರಾಡದೇ ಇದ್ದಾಗ ಬಾಯಿಯ ಮೂಲಕ ಉಸಿರೆಳೆದು ಕೃತಕ ಉಸಿರಾಟ ನಡೆಸಿ ಮಗುವನ್ನು ಬದುಕಿಸಿದರು.

2006: ರಷ್ಯದ ಸೆವೆರ್ ಸ್ಟಾಲ್ ಉಕ್ಕು ಕಂಪೆನಿಯನ್ನು ಖರೀದಿಸಲು ಆರ್ಸೆಲರ್ ಸಂಸ್ಥೆ ನಿರ್ಧರಿಸಿತು. ಇದರಿಂದ ಆರ್ಸೆಲರ್ ಸಂಸ್ಥೆಯನ್ನು ಖರೀದಿಸುವ ಮಿತ್ತಲ್ ಉಕ್ಕು ಸಂಸ್ಥೆಯ ಯತ್ನಕ್ಕೆ ಅಡ್ಡಗಾಲು ಬಿದ್ದಂತಾಯಿತು.

2006: ಮಾವೋವಾದಿ ಹಿಂಸಾಚಾರವನ್ನು ಕೊನೆಗಾಣಿಸಲು ಮುಂದಡಿ ಇಟ್ಟಿರುವ ನೇಪಾಳ ಸರ್ಕಾರವು ಶಾಂತಿ ಮಾತುಕತೆ ಆರಂಭಿಸುವ ದ್ಯೋತಕವಾಗಿ 467 ಮಾವೋವಾದಿ ಉಗ್ರಗಾಮಿಗಳನ್ನು ಬಿಡುಗಡೆ ಮಾಡಿತು.

2002: `ಒಡಿಸ್ಸಿ' ಹೆಸರಿನ ನೌಕೆಯು ಮಂಗಳ ಗ್ರಹದಲ್ಲಿ ಹೆಪ್ಪುಗಟ್ಟಿದ ನೀರಿನ ನಿಕ್ಷೇಪವನ್ನು ಪತ್ತೆ ಮಾಡಿತು.

1999: ಬಟಾಲಿಕ್ ನಿಂದ ಲಡಾಖ್ ನ ಡ್ರಾಸ್ ವರೆಗಿನ ಗಡಿ ನಿಯಂತ್ರಣ ರೇಖೆಯನ್ನು ಅತಿಕ್ರಮಿಸಿದ್ದ ಪಾಕಿಸ್ತಾನಿ ಬೆಂಬಲಿತ ಉಗ್ರಗಾಮಿಗಳ ವಿರುದ್ಧ ಭಾರತ `ಆಪರೇಷನ್ ವಿಜಯ್' ಆರಂಭಿಸಿತು. ಅತಿಕ್ರಮಿಗಳನ್ನು ತೆರವುಗೊಳಿಸುವ ಈ ಕಾರ್ಯಾಚರಣೆ ಯಶಸ್ವಿಯಾಯಿತು ಎಂದು ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಜುಲೈ 14ರಂದು ಘೋಷಿಸಿದರು.

1976: ಕಲಾವಿದ ವೇಣುಗೋಪಾಲ್ ವಿ.ಜಿ. ಜನನ.

1972: ಯುದ್ಧ ಕ್ಷಿಪಣಿಗಳನ್ನು ನಿಯಂತ್ರಿಸುವ `ಆಯಕಟ್ಟಿನ ಶಸ್ತ್ರಾಸ್ತ್ರ ಮಿತಿ ಒಪ್ಪಂದಕ್ಕೆ (ಸಾಲ್ಟ್ 1) ಅಮೆರಿಕ ಮತ್ತು ಯುಎಸ್ಸೆಸ್ಸಾರ್ ಸಹಿ ಹಾಕಿದವು.

1966: ಬ್ರಿಟಿಷ್ ಗಯಾನಾಕ್ಕೆ ಸ್ವಾತಂತ್ರ್ಯ ಸಿಕ್ಕಿತು. ಅದು ಈ ದಿನದಿಂದ `ಗಯಾನಾ' ಅಷ್ಟೆ.

1951: ಅಮೆರಿಕದ ಮಹಿಳಾ ಗಗನಯಾನಿ ಸ್ಯ್ಲಾಲಿ ರೈಡ್ ಜನ್ಮದಿನ. ಈಕೆ 1983ರಲ್ಲಿ ಬಾಹ್ಯಾಕಾಶ ಷಟ್ಲ್ ನೌಕೆ ಚಾಲೆಂಜರ್ ಮೂಲಕ ಭೂಮಿಗೆ ಪ್ರದಕ್ಷಿಣೆ ಹಾಕಿದ ಮೊತ್ತ ಮೊದಲ ಮಹಿಳೆ.

1948: ಜಾನಪದ ಕಲಾವಿದರ ಕುಟುಂಬದಿಂದ ಬಂದ ಕಲಾವಿದ ಗುರುರಾಜ ಹೊಸಕೋಟೆ ಅವರು ರುದ್ರಪ್ಪ ಹೊಸಕೋಟೆ ಹಾಗೂ ಹಾಡುಗಾರ್ತಿ ಗೌರಮ್ಮ ದಂಪತಿಯ ಮಗನಾಗಿ ಬಾಗಲಕೋಟೆ ಜಿಲ್ಲೆಯಯ ಮುಧೋಳ ತಾಲ್ಲೂಕಿನ ಮಹಾಲಿಂಗಪುರದಲ್ಲಿ ಜನಿಸಿದರು.

1940: ಕಲಾವಿದ ಚನ್ನವೀರೇಶ ಸಂಪಗಿ ಜನನ.

1926: ಉಜ್ವಲ ರಾಷ್ಟ್ರಪ್ರೇಮಿ, ಚಿಂತಕ, ಬಹುಭಾಷಾ ಕೋವಿದ ಖ್ಯಾತ ಲೇಖಕ ಹೊ.ವೆ. ಶೇಷಾದ್ರಿ (26-5-1926ರಿಂದ 14-8-2005) ಅವರು ಹೊಂಗಸಂದ್ರದಲ್ಲಿ ವೆಂಕಟರಾಮಯ್ಯ- ಪಾರ್ವತಮ್ಮ ದಂಪತಿಯ ಪುತ್ರನಾಗಿ ಈ ದಿನ ಜನಿಸಿದರು. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಧಾನ ಕಾರ್ಯದರ್ಶಿ 9 ವರ್ಷ ಸೇವೆ ಸಲ್ಲಿಸಿದ ಇವರ ಲೇಖನಿಯಿಂದ ಬಂದ ಗ್ರಂಥಗಳು ಅಸಂಖ್ಯಾತ. ಇವರ ಲಲಿತ ಪ್ರಬಂಧಗಳ ಸಂಕಲನ ತೋರ್ ಬೆರಳುಗೆ 1982ರಲ್ಲಿ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ನೀಡಿ ಗೌರವಿಸಿತು.

(ಸಂಗ್ರಹ: ನೆತ್ರಕೆರೆ ಉದಯಶಂಕರ)

Sunday, May 25, 2008

Who will Rule Karnataka?

Who will rule

Karnataka?


BJP: Voter ruled!

Today, 25 May 2008, people of state delivered their judgement (on Karantaka State Assembly Elections for 224 seats.)

Earlier to their judgement, B.S. Yeddyurappa of BJP claimed 140 seats for his party, while Mallikarjuna Kharge of Congress claimed 105-115 seats for Congress. H.D. Devegowda of Janatadal (S) has declined to predict any seats for his party, Y.S.V. Datta of Jantadal (s) has claimed 70 -75 seats to his party. PGR Sindhia of Bahujan Samaj Party said that no party will get majority while BJP will emerge Single largest Party. S. Bangarappa of Samajwadi Party also claimed that no party will get majority.


But, what is the verdict

of Karnataka People?


PARYAYA presented the picture in nutshel for those who kept their eyes on PARYAYA since 8 am till 6.00 pm, minute by minute.

Battle of nerves which showed neck to neck fight between BJP and Congress from the begining ended with the victory of BJP. By 06:00 pm BJP stepped towards victory with winning 110 seats out of 224 seats of Karnataka Legislative Assembly. Though short of three seats for simple majority, it pushed Congress to second position. Janatadal (S) had to satisfy for 3rd position. BJP will hold its legislature party meeting tomorrow in Bangalore to officially elect its leader. Congress has accepted the defeat.

Final Result:
BJP: 110
Congress: 80
Janatadal (S): 28
Others: 6








BJP won first seat in Sullya (Dakshina Kannada) Angara of BJP won the seat, leading the party towards victory.

Leaders Won: B.S. Yeddyurappa , H.D. Kumaraswamy (JD-S), Basavaraja Bommai (BJP),Jaggesh (Congress)

Leaders Defeated: Madhu Bangarappa, Ambaresh, Shashikumar, Kumar Bangarappa.

ನಟರ ಸೋಲು:
ಅಂಬರೀಶ್, ಶಶಿಕುಮಾರ್, ಸಾಯಿಕುಮಾರ್, ಕುಮಾರ ಬಂಗಾರಪ್ಪ, ಮಧು ಬಂಗಾರಪ್ಪ ಸೋಲು


And now at last it is crystal clear that BJP is the choice of Karnataka People to run the next Government and it is the judgement delivered by Karnataka voters. With this victory BJP has opened doors of power in South India. PARYAYA congrats B.S. Yeddyurappa and other leaders for their succes.

ಇಂದಿನ ಇತಿಹಾಸ History Today ಮೇ 25

ಇಂದಿನ ಇತಿಹಾಸ

ಮೇ 25

ಭಾರತ ಕ್ರಿಕೆಟ್ ತಂಡದ ನಾಯಕ ರಾಹುಲ್ ದ್ರಾವಿಡ್ ಅವರು ಅತಿ ಹೆಚ್ಚು ಶತಕಗಳ ಜೊತೆಯಾಟ (65ನೇ ಪಂದ್ಯದಲ್ಲಿ) ನಿಭಾಯಿಸಿದ ಹೊಸ ದಾಖಲೆ ಸ್ಥಾಪಿಸಿದರು. ಬಾಂಗ್ಲಾದೇಶದ ಢಾಕಾದಲ್ಲಿ ಆರಂಭವಾದ ಎರಡನೇ ಟೆಸ್ಟ್ ಪಂದ್ಯದ ಮೊದಲ ದಿನ ವಾಸಿಂ ಜಾಫರ್ ಜೊತೆಗೆ 106 ರನ್ನುಗಳ ಜೊತೆಯಾಟ ನಿಭಾಯಿಸುವ ಮೂಲಕ ದ್ರಾವಿಡ್ ಈ ಗೌರವ ಪಡೆದರು.

2007: ಮುಂಬೈಯಲ್ಲಿ 1993ರಲ್ಲಿ ಸಂಭವಿಸಿದ ಸರಣಿ ಸ್ಫೋಟಕ್ಕೆ ಮುನ್ನ ಶಸ್ತ್ರಾಸ್ತ್ರ ಹಾಗೂ ಮದ್ದುಗುಂಡು ಸಾಗಿಸಿದ 8 ಮಂದಿಗೆ ವಿಶೇಷ ಟಾಡಾ ನ್ಯಾಯಾಲಯವು ಐದರಿಂದ ಹತ್ತು ವರ್ಷಗಳ ಕಠಿಣ ಸಜೆ ವಿಧಿಸಿತು.

2007: ಭಾರತ ಕ್ರಿಕೆಟ್ ತಂಡದ ನಾಯಕ ರಾಹುಲ್ ದ್ರಾವಿಡ್ ಅವರು ಅತಿ ಹೆಚ್ಚು ಶತಕಗಳ ಜೊತೆಯಾಟ (65ನೇ ಪಂದ್ಯದಲ್ಲಿ) ನಿಭಾಯಿಸಿದ ಹೊಸ ದಾಖಲೆ ಸ್ಥಾಪಿಸಿದರು. ಬಾಂಗ್ಲಾದೇಶದ ಢಾಕಾದಲ್ಲಿ ಆರಂಭವಾದ ಎರಡನೇ ಟೆಸ್ಟ್ ಪಂದ್ಯದ ಮೊದಲ ದಿನ ವಾಸಿಂ ಜಾಫರ್ ಜೊತೆಗೆ 106 ರನ್ನುಗಳ ಜೊತೆಯಾಟ ನಿಭಾಯಿಸುವ ಮೂಲಕ ದ್ರಾವಿಡ್ ಈ ಗೌರವ ಪಡೆದರು.
ಆಸ್ಟ್ರೇಲಿಯಾದ ಸ್ಟೀವ್ ವಾ ಅವರ ಹೆಸರಿನಲ್ಲಿ (64 ಪಂದ್ಯಗಳು) ಈ ದಾಖಲೆ ಇತ್ತು.

2007: ಹೈದರಾಬಾದಿನ ಮೆಕ್ಕಾ ಮಸೀದಿಯಲ್ಲಿ ವಾರದ ಹಿಂದೆ ಸಂಭವಿಸಿದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಜಲ್ಸಾ ಪಟ್ಟಣದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದರು.

2006: ಕನ್ನಡ ಭಾಷೆ 2300 ವರ್ಷಗಳಿಗೂ ಹೆಚ್ಚಿನ ಇತಿಹಾಸ ಹೊಂದಿದೆ ಎಂಬುದನ್ನು ವಿವರಿಸುವ ದಾಖಲೆಗಳನ್ನು ಒಳಗೊಂಡ ವರದಿಯನ್ನು ಕರ್ನಾಟಕ ಸರ್ಕಾರವು ಕೇಂದ್ರ ಸರ್ಕಾರಕ್ಕೆ ಸಲ್ಲಿಸಿತು. ಕನ್ನಡಕ್ಕೆ ಶಾಸ್ತ್ರೀಯ ಭಾಷೆ ಗೌರವ ನೀಡಬೇಕೆಂಬ ಮನವಿಗೆ ಪೂರಕವಾಗಿ ಸಂಶೋಧಕ ಸಾಹಿತಿ ಡಾ. ಎಂ. ಚಿದಾನಂದ ಮೂರ್ತಿ ನೇತೃತ್ವದ ಸಮಿತಿಯು ಸಿದ್ಧಪಡಿಸಿದ ಈ ವರದಿಯನ್ನು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರ ಸಂಸ್ಕೃತಿ ಸಚಿವೆ ಅಂಬಿಕಾ ಸೋನಿ ಅವರಿಗೆ ಸಲ್ಲಿಸಿದರು.

2001: ಕನೆಕ್ಟಿಕಟ್ಟಿನ ಸರ್ಜನ್ ಅರುವತ್ತನಾಲ್ಕು ವರ್ಷದ ಶೆರ್ಮನ್ ಬುಲ್ ಅವರು ಎವರೆಸ್ಟ್ ಶಿಖರವನ್ನು ಏರುವ ಮೂಲಕ ಜಗತ್ತಿನ ಅತ್ಯುನ್ನತ ಶಿಖರವನ್ನು ಏರಿದ ಅತ್ಯಂತ ಹಿರಿಯ ವ್ಯಕ್ತಿ ಎಂಬ ಹೆಗ್ಗಳಿಕೆ ಗಳಿಸಿಕೊಂಡರು.

1982: ಮರುಸೃಷ್ಟಿಯಾದ ವೆನಿಸ್ ಸಿಂಪ್ಲೊನ್ ಓರಿಯಂಟ್ ಎಕ್ಸ್ ಪ್ರೆಸ್ ಮೊತ್ತ ಮೊದಲ ಬಾರಿಗೆ ಲಂಡನ್ನಿಂದ ಪ್ರಯಾಣ ಹೊರಟಿತು. ಶಿಪ್ಪಿಂಗ್ ಉದ್ಯಮಿ ಜೇಮ್ಸ್ ಶೆರ್ ವುಡ್ ಅವರು ಹಳೆ ಓರಿಯಂಟ್ ಎಕ್ಸ್ ಪ್ರೆಸ್ಸಿನ ಬೋಗಿಗಳನ್ನು ಸೋದ್ ಬಿಯ ಹರಾಜಿನಲ್ಲಿ ಖರೀದಿಸಿ ತಂದು ಹೊಸ ವೆನಿಸ್ ಸಿಂಪ್ಲೋನ್ ಓರಿಯಂಟ್ ಎಕ್ಸ್ ಪ್ರೆಸ್ಸಿಗಾಗಿ ಬಳಸಿಕೊಂಡರು. ಈ ರೈಲುಗಾಡಿ ಲಂಡನ್ನಿನ ವಿಕ್ಟೋರಿಯಾ ಟರ್ಮಿನಸ್ ಮತ್ತು ವೆನಿಸ್ ಮಧ್ಯೆ ಓಡಾಡುತ್ತದೆ.

1950: ಖ್ಯಾತ ಸುಗಮ ಸಂಗೀತಗಾರ ಯಶವಂತ ಹಳಿಬಂಡಿ ಅವರು ಕರ್ನಾಟಕ ಜಾನಪದ ಹಾಡುಗಾರಿಕೆಯ ಮನೆತನದ ಹನುಮಂತಪ್ಪ- ಬಸವೇಶ್ವರಿ ದಂಪತಿಯ ಮಗನಾಗಿ ಉತ್ತರ ಕರ್ನಾಟಕದ ತೇರಗಾಂವದಲ್ಲಿ ಜನಿಸಿದರು.

1948: ಕಲಾವಿದ ಸುರೇಶ ವೆಂಕಟೇಶ ಕುಲಕರ್ಣಿ ಜನನ.

1940: ಆಕ್ಸಫರ್ಡ್ ವಿಶ್ವವಿದ್ಯಾಲಯದ ಪೆಥಾಲಜಿ ವಿಭಾಗದಲ್ಲಿ ಅರ್ನೆಸ್ಟ್ ಚೈನ್ ಮತ್ತು ನಾರ್ಮನ್ ಜಿ. ಹೀಟ್ಲೆ ಅವರು ಎಂಟು ಇಲಿಗಳಿಗೆ ಸ್ಟ್ರೆಪ್ಟೋಕೋಕ್ಸಿಯನ್ನು ನೀಡಿದರು. ಅವುಗಳಲ್ಲಿ ನಾಲ್ಕು ಇಲಿಗಳಿಗೆ ನಂತರ ಪೆನಿಸಿಲಿನ್ ನೀಡಲಾಯಿತು. ಮರುದಿನ ಮುಂಜಾನೆ ವೇಳೆಗೆ ಪೆನಿಸಿಲಿನ್ ನೀಡಲಾಗಿದ್ದ ಇಲಿಗಳು ಜೀವಂತವಾಗಿದ್ದರೆ, ಉಳಿದ ನಾಲ್ಕು ಇಲಿಗಳು ಸತ್ತು ಬಿದ್ದಿದ್ದವು. ಸೋಂಕಿಗೆ ಚಿಕಿತ್ಸೆ ನೀಡಲು ಪೆನಿಸಿಲಿನ್ ಬಳಸುವ ಸಾಧ್ಯತೆ ಈ ಮೂಲಕ ಮೊತ್ತ ಮೊದಲ ಬಾರಿಗೆ ಪತ್ತೆಯಾಯಿತು.

1935: ಕಲಾವಿದ ನೀಲಾರಾಮ್ ಗೋಪಾಲ್ ಜನನ.

1908: ಸಾಹಿತಿ ವಾಸಂತಿ ದೇವಿ (25-5-1908ರಿಂದ 1-4-1995) ಅವರು ಅಣ್ಣಾಜಿರಾವ್- ರಾಧಾಬಾಯಿ ದಂಪತಿಯ ಮಗಳಾಗಿ ಬರ್ಮಾ ದೇಶದ (ಈಗಿನ ಮ್ಯಾನ್ಮಾರ್) ಮಿಥಿಲದಲ್ಲಿ ಹುಟ್ಟಿದರು. ಚಿತ್ರರಂಗ, ಸಾಹಿತ್ಯ, ರಂಗಭೂಮಿ, ಚಿತ್ರಕಲೆಗಳಿಗೆ ಕಾಣಿಕೆ ನೀಡಿರುವ ವಾಸಂತಿ ದೇವಿ ಅವರ ಪ್ರಮುಖ ಕೃತಿಗಳಲ್ಲಿ ಒಂದು `ನನ್ನ ಮಗ ಗುರುದತ್ತ'.

1889: ಸಿಕೊರಸ್ಕಿ (1889-1972) ಜನ್ಮದಿನ. ರಷ್ಯ ಮೂಲದ ಈ ಅಮೆರಿಕನ್ ವಿಮಾನ ವಿನ್ಯಾಸಗಾರ ಹೆಲಿಕಾಪ್ಟರನ್ನು ಯಶಸ್ವಿಯಾಗಿ ಅಭಿವೃದ್ಧಿ ಪಡಿಸಿದ ವ್ಯಕ್ತಿ.

1886: ಭಾರತದ ಕ್ರಾಂತಿಕಾರಿ ಸ್ವಾತಂತ್ರ್ಯ ಹೋರಾಟಗಾರ ರಾಸ್ ಬಿಹಾರಿ ಬೋಸ್ (1886-1945) ಜನ್ಮದಿನ.

(ಸಂಗ್ರಹ: ನೆತ್ರಕೆರೆ ಉದಯಶಂಕರ)

Saturday, May 24, 2008

Mousse protection against tooth decay?

Mousse protection against

tooth decay?


According to press reports some scientists have claimed that they have produced ‘Tooth Mousse' which protects tooth from decay. They also maintain that this Tooth Mousse repairs damage by replacing the minerals lost through the decay process. If it really happens it could be a boon to the mankind as majority of them suffers from tooth problems!

Nethrakere Udaya Shankara

Do you know what mousse is?

According to Wikipedia explanation It is a form of creamy dessert typically made from egg and cream, usually in combination with other flavours such as chocolate or pureed fruit.

The egg whites are beaten before being incorporated into the other ingredients to produce a light fluffy yet extremely rich confection. It is then chilled to maintain its aeration. Once only a speciality of Spanish and Belgian restaurants, chocolate mousse entered into American and English home cuisine in the 1960s. Mousse-like desserts in Middle America commonly go under designations like "whip".

Depending on how it is prepared, it can range from light and fluffy to creamy and thick.

Due to usage of raw eggs, eating mousse may lead to food poisoning, caused by salomonella bacteria.
In the UK eggs marked with the Lion Mark have come from hens vaccinated against salmonella, although they may not have been pasteurised; but catering establishments generally use pasteurised eggs.

Most food service establishments in the U.S. use pasteurized eggs whenever raw eggs are called for, so food poisoning should not be a concern there except in home cooking.

All these facts about this eating stuff are not a new thing to many. But new thing is that we got news from Melbourne which says that scientists have developed a 'tooth mousse' that protects decay and repairs any existing damage.

So they assure you that you no longer need to control your craving for chocolates!.

According to a report from PTI a Team at Melbourne University has produced the new product which can penetrate ten times deeper into teeth than current fluoride treatments -- in fact, it repairs damage by replacing the minerals lost through the decay process...

Tooth decay or cavities are consequences of dental caries. If left untreated, the disease can lead to pain, tooth loss, infection, and in severe cases, death of the tooth.

According to lead researcher and the Head of Dental Science at the university, Professor Eric Reynolds, the Tooth Mousse Plus is a breakthrough in oral healthcare and it would benefit thousands of people worldwide.

Report says that "Laboratory tests and clinical trials have shown Tooth Mousse Plus not only provides the highest level of fluoride protection now available for teeth but that it can also repair existing decay damage.

"It's the result of a real team effort by molecular scientists, dentists and formulation chemists," Eric Reynolds said.

The Cooperative Research Centre for Oral Heath Science (CRC-OHS) at the University of Melbourne has also been awarded a prestigious prize for Excellence in Innovation, recognising the achievements of Tooth Mousse Plus, report said.

It is not specifically known that whether this Tooth Mousse is an eating stuff like Mousse or some other type of medicine. It is also not known that whether this Tooth Mousse is produced out of egg and cream. It is also not known whether it could be produced out of fruit?

In France they prepare an eating stuff called "froth" or ‘foam’ mousse which is a rich, airy dish that can be either sweet or savory. Hot or Cold dessert mousses are usually made with fruit purée or a flavoring such as chocolate. Their fluffiness is due to the addition of whipped cream or beaten egg whites and they're often fortified with gelatin..

If this mousse, could be produced from egg and cream in the form of eating stuff, definitely all non vegitarians will welcome it. But what about vegitarians? Most of the vegitarians could only be happy if such mousse is prepared out of fruits.

Whether the scientists who developed this Tooth Mousse will clarify on this and if they have not tried to produce it from fruits whether they will try to develop it out of fruits. If they succeed it would be a great service to the society, because most of the people in the world are sufferers of tooth pain!

ಇಂದಿನ ಇತಿಹಾಸ History Today ಮೇ 24

ಇಂದಿನ ಇತಿಹಾಸ

ಮೇ 24

ಒಂದು ನಿಮಿಷದಲ್ಲಿ ಮೇಕಪ್, ಹೇರ್ ಸ್ಟೈಲ್ ಇತ್ಯಾದಿ ಮಾಡಿ ಈಗಾಗಲೇ ಲಿಮ್ಕಾ ದಾಖಲೆ ಮಾಡಿರುವ `ಒನ್ ಮಿನಿಟ್ ಉಮಾ' ಎಂದೇ ಖ್ಯಾತಿ ಪಡೆದಿರುವ ಸೌಂದರ್ಯ ತಜ್ಞೆ ಉಮಾ ಜಯಕುಮಾರ್ ಅವರು ಈದಿನ ಬೆಂಗಳೂರು ಮಹಾಲಕ್ಷ್ಮಿಪುರಂ ಕ್ಲಬ್ಬಿನಲ್ಲಿ ಮಂಜುಗಡ್ಡೆಯ ಮೇಲೆ ನಿಂತು ಒಂದು ನಿಮಿಷದಲ್ಲಿ ಕೇಶ ವಿನ್ಯಾಸ, ಮೇಕಪ್, ಮದುಮಗಳ ಸಿಂಗಾರ ಇತ್ಯಾದಿ ಹತ್ತಕ್ಕೂ ಹೆಚ್ಚು ಕಾರ್ಯಗಳನ್ನು ಮಾಡಿ ತಮ್ಮ ದಾಖಲೆಯನ್ನು ತಾವೇ ಮುರಿದರು.

2007: ಭಾಷಾ ಮಾಧ್ಯಮದ ಉಲ್ಲಂಘನೆಯ ಆರೋಪದಿಂದ ಮಾನ್ಯತೆ ಕಳೆದುಕೊಂಡಿರುವ 2215 ಖಾಸಗಿ ಪ್ರಾಥಮಿಕ ಶಾಲೆಗಳು ಇನ್ನು ಮುಂದೆ ಕನ್ನಡ ಮಾಧ್ಯಮದಲ್ಲೇ ಬೋಧಿಸಬೇಕು ಎಂದು ಕರ್ನಾಟಕ ಹೈಕೋರ್ಟ್ ಮಧ್ಯಂತರ ಆದೇಶದಲ್ಲಿ ಆಜ್ಞಾಪಿಸಿತು. ನ್ಯಾಯಮೂರ್ತಿ ಎ.ಸಿ. ಕಬ್ಬಿಣ ಅವರು ಈ ಆದೇಶ ನೀಡಿದರು.

2007: ಒಂದು ನಿಮಿಷದಲ್ಲಿ ಮೇಕಪ್, ಹೇರ್ ಸ್ಟೈಲ್ ಇತ್ಯಾದಿ ಮಾಡಿ ಈಗಾಗಲೇ ಲಿಮ್ಕಾ ದಾಖಲೆ ಮಾಡಿರುವ `ಒನ್ ಮಿನಿಟ್ ಉಮಾ' ಎಂದೇ ಖ್ಯಾತಿ ಪಡೆದಿರುವ ಸೌಂದರ್ಯ ತಜ್ಞೆ ಉಮಾ ಜಯಕುಮಾರ್ ಅವರು ಈದಿನ ಬೆಂಗಳೂರು ಮಹಾಲಕ್ಷ್ಮಿಪುರಂ ಕ್ಲಬ್ಬಿನಲ್ಲಿ ಮಂಜುಗಡ್ಡೆಯ ಮೇಲೆ ನಿಂತು ಒಂದು ನಿಮಿಷದಲ್ಲಿ ಕೇಶ ವಿನ್ಯಾಸ, ಮೇಕಪ್, ಮದುಮಗಳ ಸಿಂಗಾರ ಇತ್ಯಾದಿ ಹತ್ತಕ್ಕೂ ಹೆಚ್ಚು ಕಾರ್ಯಗಳನ್ನು ಮಾಡಿ ತಮ್ಮ ದಾಖಲೆಯನ್ನು ತಾವೇ ಮುರಿದರು.

2007: ಈ ಹಿಂದೆ ಒಂದು ಕೈಯಲ್ಲಿ 21 ಮೊಟ್ಟೆಗಳನ್ನು ಹಿಡಿದು ದಾಖಲೆ ಮಾಡಿದ್ದ ಮೈಸೂರಿನ ಎಂ.ಎಲ್. ಶಿವಕುಮಾರ್ (44) ಅವರು ತಮ್ಮ ಬಲಗೈಯಲ್ಲಿ 120 ಸೆಕೆಂಡುಗಳಲ್ಲಿ 23 ಕೋಳಿ ಮೊಟ್ಟೆಗಳನ್ನು ಇಟ್ಟುಕೊಳ್ಳುವ ಮೂಲಕ ತಮ್ಮ ಹಿಂದಿನ ದಾಖಲೆ ಮುರಿದರು.

2007: ಜಾಗತಿಕ, ಆರ್ಥಿಕ ಮತ್ತು ರಾಜಕೀಯ ರಂಗದಲ್ಲಿ ಭಾರತ ನಿರ್ವಹಿಸುತ್ತಿರುವ ಪ್ರಮುಖ ಪಾತ್ರವನ್ನು ಗುರುತಿಸಿ ಇಲ್ಲಿಯ ನ್ಯೂ ಮೆಕ್ಸಿಕೊ ಟೆಕ್ ವಿಶ್ವ ವಿದ್ಯಾಲಯವು ಭಾರತದ ತಜ್ಞರ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಳ್ಳಲು ಚಿಂತಕರ ಚಾವಡಿಯೊಂದನ್ನು ಆರಂಭಿಸಿತು.

2007: ಶ್ರೀಲಂಕೆಯಲ್ಲಿ ಎಲ್ಟಿಟಿಇ ಬಂಡುಕೋರರು ಉತ್ತರ ಜಾಫ್ನಾ ದ್ವೀಪದ ಬಳಿಕ ಸಣ್ಣ ದ್ವೀಪವೊಂದರ ಆಯಕಟ್ಟಿನ ನೌಕಾ ನೆಲೆ ಮೇಲೆ ದಾಳಿ ನಡೆಸಿದ್ದಲ್ಲದೆ ಕೊಲಂಬೋ ಸಮೀಪ ಸೇನಾ ಬಸ್ಸನ್ನು ಸ್ಫೋಟಿಸಿದ ಪರಿಣಾಮವಾಗಿ 35 ಮಂದಿ ಹತರಾದರು.

2006: ಭಾರತೀಯ ಗಡಿ ರಕ್ಷಣಾ ಪಡೆಯ ಹಿರಿಯ ಅಧಿಕಾರಿ ಎಸ್.ಸಿ. ನೇಗಿ (56) ಅವರು ಪ್ರಪಂಚದ ಅತಿ ಎತ್ತರದ ಶಿಖರ ಮೌಂಟ್ ಎವರೆಸ್ಟ್ ಏರಿದ ಅತ್ಯಂತ ಹಿರಿಯ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾದರು.

2006: ರಾಜ್ಯಸಭೆಯ ಮಾಜಿ ಸದಸ್ಯೆ ಜಯಾ ಬಚ್ಚನ್ ಅವರು ಉತ್ತರ ಪ್ರದೇಶ ಚಲನಚಿತ್ರ ಮಂಡಳಿಯ (ಯುಪಿಎಫ್ಡಿಸಿ) ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿ, ರಾಜ್ಯಸಭಾ ಉಪಚುನಾವಣೆಯಲ್ಲಿ ಮತ್ತೆ ಸ್ಪರ್ಧಿಸಲು ಮಾರ್ಗ ಸುಗಮಗೊಳಿಸಿಕೊಂಡರು.

1968: ಕಲಾವಿದೆ ಶುಭ ಧನಂಜಯ ಜನನ.

1946: ಕಲಾವಿದೆ ಮರಿಗೆಮ್ಮ ಎಂ. ಜನನ.

1941: ಜರ್ಮನ್ ಸಮರನೌಕೆ ಬಿಸ್ಮಾರ್ಕ್ ಉತ್ತರ ಅಟ್ಲಾಂಟಿಕ್ ಸಾಗರದಲ್ಲಿ ಗ್ರೀನ್ ಲ್ಯಾಂಡ್ ಕರಾವಳಿ ಸಮೀಪ ಬ್ರಿಟಿಷರ ಎಚ್ ಎಂಎಸ್ `ಹುಡ್' ನೌಕೆಯನ್ನು ಮುಳುಗಿಸಿತು. ನೌಕೆಯಲ್ಲಿದ್ದ 1421 ಮಂದಿಯ ಪೈಕಿ ಕೇವಲ 3 ಮಂದಿಯನ್ನು ರಕ್ಷಿಸಲು ಸಾಧ್ಯವಾಯಿತು.

1927: ಹಿರಿಯ ಮೃದಂಗ ವಿದ್ವಾಂಸರಲ್ಲೊಬ್ಬರಾದ ಎಂ.ಎಸ್. ರಾಮಯ್ಯ ಅವರು ತಬಲ ವಿದ್ವಾಂಸ ಸುಬ್ಬಣ್ಣ ಪುತ್ರನಾಗಿ ಮೈಸೂರಿನಲ್ಲಿ ಜನಿಸಿದರು.

1922: ಕಲಾವಿದ ರಾಮನರಸಯ್ಯ ಜನನ.

1905: ಕಲಾವಿದ ಹರ್ತಿಕೋಟೆ ಸುಬ್ಬಣ್ಣ ಜನನ.

1875: ಸರ್ ಸೈಯದ್ ಅಹಮದ್ ಖಾನ್ ಮತ್ತು ಅವರ ಮಗ ಸೈಯದ್ ಮಹಮೂದ್ ಆಲಿಗಡದಲ್ಲಿ ಮಹಮ್ಮಡನ್ ಆಂಗ್ಲೋ - ಓರಿಯಂಟಲ್ ಸ್ಕೂಲ್ ಸ್ಥಾಪಿಸಿದರು. 1920ರಲ್ಲಿ ಅದು ಅಲಿಘಡ ಮುಸ್ಲಿಂ ವಿಶ್ವ ವಿದ್ಯಾಲಯವಾಯಿತು.

1844: ಸ್ಯಾಮ್ಯುಯೆಲ್ ಮೋರ್ಸ್, ಬಾಲ್ಟಿಮೋರಿನಿಂದ ವಾಷಿಂಗ್ಟನ್ನಿಗೆ ಟೆಲಿಗ್ರಾಫ್ ಸಂದೇಶವನ್ನು ಕಳುಹಿಸುವ ಮೂಲಕ ಅಮೆರಿಕದ ಮೊತ್ತ ಮೊದಲ ಟೆಲಿಗ್ರಾಫ್ ಲೈನ್ ಉದ್ಘಾಟಿಸಿದ.

1819: ರಾಣಿ ವಿಕ್ಟೋರಿಯಾ ಜನ್ಮದಿನ. ವಿಕ್ಟೋರಿಯಾ (1819-1901) ಇಂಗ್ಲೆಂಡಿನ ಅತ್ಯಂತ ದೀರ್ಘ ಅವಧಿಯ ರಾಣಿ ಎಂಬ ಖ್ಯಾತಿ ಪಡೆದ ವ್ಯಕ್ತಿ.

1686: ಡೇನಿಯಲ್ ಗ್ಯಾಬ್ರಿಯಲ್ ಫ್ಯಾರನ್ ಹೀಟ್ (1686-1736) ಜನ್ಮದಿನ. ಜರ್ಮನಿಯ ವೈದ್ಯನಾದ ಈತ ಆಲ್ಕೋಹಾಲ್ ಥರ್ಮಾಮೀಟರ್, ಮರ್ಕ್ಯುರಿ ಥರ್ಮಾಮೀಟರ್ ಮುಂತಾದ ಉಷ್ಣಮಾಪಕಗಳನ್ನು ಸಂಶೋಧಿಸಿದ. ಈತ ಸಂಶೋಧಿಸಿದ ಉಷ್ಣಮಾಪಕಕ್ಕೆ ಈತನ ಹೆಸರನ್ನೇ ಇಟ್ಟು ಗೌರವಿಸಲಾಯಿತು.

(ಸಂಗ್ರಹ: ನೆತ್ರಕೆರೆ ಉದಯಶಂಕರ)

Friday, May 23, 2008

ಇಂದಿನ ಇತಿಹಾಸ History Today ಮೇ 23

ಇಂದಿನ ಇತಿಹಾಸ

ಮೇ 23

ಬಚೇಂದ್ರಿಪಾಲ್ ಅವರು ಎವರೆಸ್ಟ್ ಶಿಖರವನ್ನು ಏರುವ ಮೂಲಕ ಜಗತ್ತಿನ ಅತ್ಯುನ್ನತ ಶಿಖರವನ್ನು ಏರಿದ ಪ್ರಥಮ ಭಾರತೀಯ ಮಹಿಳೆ ಎಂಬ ಕೀರ್ತಿಗೆ ಭಾಜನರಾದರು.

2007: ಎಂಭತ್ತೇಳರ ಹರೆಯದ ಅಜ್ಜ ಅಬ್ದುಲ್ ಅಜೀಜ್ ಹಾರಿ ಘರತಕ್ಕರ್ ಗೆ ಮುಂಬೈ ಸರಣಿ ಬಾಂಬ್ ಸ್ಫೋಟದ ಪ್ರಕರಣಗಳ ವಿಚಾರಣೆ ನಡೆಸಿರುವ ವಿಶೇಷ ಟಾಡಾ ನ್ಯಾಯಾಲಯವು 6 ವರ್ಷಗಳ ಕಠಿಣಶಿಕ್ಷೆ ಹಾಗೂ 50,000 ರೂಪಾಯಿಗಳ ದಂಡವನ್ನು ವಿಧಿಸಿತು.

2007: ಮೊಬೈಲ್ ಫೋನಿನಲ್ಲಿ ದೂರದರ್ಶನ ಕಾರ್ಯಕ್ರಮ ವೀಕ್ಷಣೆ ಸೌಲಭ್ಯವು ಈದಿನ ನವದೆಹಲಿಯಲ್ಲಿ ಚಾಲನೆಗೊಂಡಿತು. ಇದರೊಂದಿಗೆ ದೂರದರ್ಶನವು ತನ್ನ ಸಾಧನೆಗೆ ಮತೊಂದು ಗರಿ ಸೇರಿಸಿಕೊಂಡಿತು.

2007: ತಮಿಳುನಾಡಿನ ತಿರುಪುರದಲ್ಲಿ ನಿರ್ಮಾಣ ಹಂತದಲ್ಲಿದ್ದ ಕಾರ್ಖಾನೆಯೊಂದರ ಗೋಡೆಯು ಪಕ್ಕದ ಸಾರಾಯಿ ಅಂಗಡಿ ಮೇಲೆ ಕುಸಿದು ಬಿದ್ದು 27 ಜನ ಮೃತರಾಗಿ ಇತರ ಐವರು ಗಾಯಗೊಂಡರು.

2007: ಮಾಹಿತಿ ಹಕ್ಕು ಅಧಿನಿಯಮವನ್ನು ಕಟ್ಟು ನಿಟ್ಟಾಗಿ ಅನುಷ್ಠಾನಗೊಳಿಸುವ ಸಲುವಾಗಿ ಕರ್ನಾಟಕ ಶಿಕ್ಷಣ ಇಲಾಖೆಯು `ಇ- ಆಡಳಿತ ವಿಭಾಗ'ದ ವತಿಯಿಂದ `ಕೇಂದ್ರೀಕೃತ ಶಿಕ್ಷಣ ಇಲಾಖೆ'ಯ ಮಾಹಿತಿ ಕೇಂದ್ರವನ್ನು ಆರಂಭಿಸಿತು.

2007: ಪ್ರೊಬೆಬಿಲಿಟಿ ಸಿದ್ಧಾಂತದ ಮೇಲೆ ಸಂಶೋಧನೆ ನಡೆಸಿದ ಓಸ್ಲೋದ ಭಾರತೀಯ ಮೂಲದ ಅಧ್ಯಾಪಕ 67 ವರ್ಷದ ಶ್ರೀನಿವಾಸ ವರದನ್ ಅವರಿಗೆ ಒಂದು ದಶಲಕ್ಷ ಡಾಲರ್ ಮೊತ್ತದ ಬಹುಮಾನ ದೊರಕಿತು. ಈ ಬಹುಮಾನದ ಬಹುತೇಕ ಹಣವನ್ನು ಅವರು ಚೆನ್ನೈ ಬಳಿಯಲ್ಲಿರುವ ತಮ್ಮ ತವರೂರು ತಂಬರಂನಲ್ಲಿ ಶೈಕ್ಷಣಿಕ ಅಭಿವೃದ್ಧಿಗೆ ಬಳಸುವುದಾಗಿ ಪ್ರಕಟಿಸಿದರು. ವರದನ್ ಅವರು ಮುಂದೆ ನಡೆಯಬಹುದಾದ ಅಪಘಾತಗಳ ಸಂಖ್ಯೆಯನ್ನು ಅಂದಾಜು ಮಾಡಲು ಕಾರು ವಿಮಾ ಕಂಪೆನಿಗಳಿಗೆ ನೆರವಾಗುವುದರಿಂದ ಹಿಡಿದು, ನೂರು ವರ್ಷಗಳ ಕಾಲ ಸಮುದ್ರದ ಅಲೆಗಳ ಹೊಡೆತವನ್ನು ಸಹಿಸಿಕೊಳ್ಳುವ ತೈಲ ಘಟಕ ಸ್ಥಾಪನೆಯವರೆಗೆ ಬಳಸಲು ಸಾಧ್ಯವಾಗುವಂತೆ ಪ್ರೊಬೆಬಿಲಿಟಿ ಸಿದ್ಧಾಂತವನ್ನು ರೂಪಿಸಿದ್ದರು.

2006: ವೈದ್ಯ ವಿದ್ಯಾರ್ಥಿಗಳು ಮತ್ತು ಇತರ ವಿದ್ಯಾರ್ಥಿಗಳ ಮೀಸಲು ವಿರೋಧಿ ಮುಷ್ಕರವನ್ನು ನಿರ್ಲಕ್ಷಿಸಿ, 2007ರ ಜೂನ್ ತಿಂಗಳಿನಿಂದ ಉನ್ನತ ಕೇಂದ್ರೀಯ ಶಿಕ್ಷಣ ಸಂಸ್ಥೆಗಳಲ್ಲಿ ಇತರ ಹಿಂದುಳಿದ ವರ್ಗಗಳಿಗೆ (ಒಬಿಸಿ) ಶೇಕಡಾ 27ರಷ್ಟು ಮೀಸಲಾತಿ ಜಾರಿಗೊಳಿಸಲು ಕೇಂದ್ರದ ಯುಪಿಎ ಸರ್ಕಾರ ನಿರ್ಧರಿಸಿತು. ಸಾಮಾನ್ಯ ವರ್ಗಕ್ಕೆ ತೊಂದರೆಯಾಗದಂತೆ ಸೀಟುಗಳ ಸಂಖ್ಯೆಯನ್ನು ಹೆಚ್ಚಿಸಲೂ ಅದು ತೀರ್ಮಾನಿಸಿತು. ಯುಪಿಎ ಸಮನ್ವಯ ಸಮಿತಿ ಸಭೆಯಲ್ಲಿ ಎಡಪಕ್ಷಗಳು ಸರ್ಕಾರದ ಕ್ರಮವನ್ನು ಸಂಪೂರ್ಣವಾಗಿ ಬೆಂಬಲಿಸಿದ ಹಿನ್ನೆಲೆಯಲ್ಲಿ ಆಳುವ ಮೈತ್ರಿಕೂಟ ಈ ನಿರ್ಧಾರಕ್ಕೆ ಬಂದಿತು.

2006: ವಿಶ್ವದ ಅತಿ ಎತ್ತರದ ಎವರೆಸ್ಟ್ ಪರ್ವತ ಶಿಖರವನ್ನು ಏರಿದ ವಯೋವೃದ್ಧ 70 ವರ್ಷದ ಜಪಾನಿ ಪರ್ವತಾರೋಹಿ ಟಕೊವ್ ಅರಯಾಮ ಅವರಿಗೆ ಕಠ್ಮಂಡುವಿನಲ್ಲಿ ಟಿಬೆಟ್ ಸ್ವಾಯತ್ತ ಪ್ರಾಂತ್ಯದ ಚೀನಾ ಪರ್ವತಾರೋಹಣ ಸಂಘ ಈ ಸಂಬಂಧ ಪ್ರಮಾಣಪತ್ರ ನೀಡಿತು.

1999: `ಸ್ಟಾರ್ ವಾರ್ ಎಪಿಸೋಡ್ 1: ದಿ ಫ್ಯಾಂಟಮ್ ಮೆನೇಸ್' ಚಲನಚಿತ್ರವು ಐದು ದಿನಗಳಲ್ಲಿ 100 ಮಿಲಿಯನ್ ಡಾಲರುಗಳಿಗೂ ಹೆಚ್ಚು ಆದಾಯ ಗಳಿಸಿದ ಪ್ರಥಮ ಚಲನ ಚಿತ್ರವಾಯಿತು.

1984: ಬಚೇಂದ್ರಿಪಾಲ್ ಅವರು ಎವರೆಸ್ಟ್ ಶಿಖರವನ್ನು ಏರುವ ಮೂಲಕ ಜಗತ್ತಿನ ಅತ್ಯುನ್ನತ ಶಿಖರವನ್ನು ಏರಿದ ಪ್ರಥಮ ಭಾರತೀಯ ಮಹಿಳೆ ಎಂಬ ಕೀರ್ತಿಗೆ ಭಾಜನರಾದರು.

1952: ಸಿ.ಡಿ. ದೇಶಮುಖ್ ಅವರು ತಮ್ಮ ಆರು ಮುಂಗಡಪತ್ರಗಳ ಪೈಕಿ ಮೊದಲನೆಯ ಮುಂಗಡಪತ್ರವನ್ನು ಭಾರತದ ಸಂಸತ್ತಿನಲ್ಲಿ ಮಂಡಿಸಿದರು. ಇದು ಭಾರತದ ಸಂಸತಿನಲ್ಲಿ ಮಂಡನೆಯಾದ ಮೊತ್ತ ಮೊದಲನೆಯ ಮುಂಗಡಪತ್ರ.

1934: `ಬೋನಿ' ಮತ್ತು `ಗ್ಲೈಡ್' ಎಂದೇ ಪರಿಚಿತರಾಗಿದ್ದ ಅಮೆರಿಕದ ಕುಖ್ಯಾತ ಅಪರಾಧಿಗಳಾದ ಬೋನಿ ಪಾರ್ಕರ್ ಮತ್ತು ಗ್ಲೈಡ್ ಬ್ಯಾರೋ ಲೌಸಿಯಾನಾ ಸಮೀಪದ ಗಿಬ್ ಲ್ಯಾಂಡಿನಲ್ಲಿ ನಡೆದ ಘರ್ಷಣೆಯೊಂದರಲ್ಲಿ ಮೃತರಾದರು.

1926: ಮೃದಂಗ ಹಾಗೂ ಘಟಂ ವಾದನದಲ್ಲಿ ಖ್ಯಾತರಾಗಿರುವ ಕೆ.ಎನ್. ಕೃಷ್ಣಮೂರ್ತಿ ಅವರು ಕೆ.ಕೆ. ನಾರಾಯಣನ್ ಅಯ್ಯರ್- ಪಾರ್ವತಿ ಅಮ್ಮಾಳ್ ದಂಪತಿಯ ಮಗನಾಗಿ ಪಾಲ್ಘಾಟಿನ ಕೊಯಲ್ ಮನ್ನಂ ಗ್ರಾಮದಲ್ಲಿ ಜನಿಸಿದರು.

1734: ಫ್ರಾಂಜ್ ಆಂಟನ್ ಮೆಸ್ಮರ್ (1734-1815) ಜನ್ಮದಿನ. ಈಗ `ಹಿಪ್ನಾಟಿಸಂ' ಹೆಸರಿನಲ್ಲಿ ಜನಪ್ರಿಯವಾಗಿರುವ ಸಮ್ಮೋಹಿನಿಯನ್ನು `ಮೆಸ್ಮರಿಸಂ' ಹೆಸರಿನಲ್ಲಿ ಖ್ಯಾತಿಗೆ ತಂದಿದ್ದ ಜರ್ಮನಿಯ ವೈದ್ಯನೀತ.

(ಸಂಗ್ರಹ: ನೆತ್ರಕೆರೆ ಉದಯಶಂಕರ)

Thursday, May 22, 2008

Mobile failed to work from day one! / ಖರೀದಿ ದಿನದಿಂದಲೇ ಕೈಕೊಟ್ಟ ಮೊಬೈಲ್..!

Mobile failed to work from day one!

Mr. Krishna Murthy, resident of Chamarajpet, Bangalore has purchased a Mobile handset Sony Erickson 200. But it developed some problems from day one. He complained to the sellers but they didn't showed any interest to repair it or to replace it. What Mr. Krishna Murthy did? How he got justice? Nethrakere Udaya Shankara narrates the story of consumer vigilance.

ಖರೀದಿ ದಿನದಿಂದಲೇ ಕೈಕೊಟ್ಟ ಮೊಬೈಲ್..!

ಪ್ರತಿವಾದಿಯು ಮೊಬೈಲನ್ನು ತತ್ ಕ್ಷಣ ದುರಸ್ತಿ ಮಾಡಿಕೊಡುವ ಬದಲು 23 ದಿನಗಳಿಗೂ ಹೆಚ್ಚು ಕಾಲ ಕಂಬ, ಕಂಬ ಸುತ್ತುವಂತೆ ಮಾಡಿದರು.

ನೆತ್ರಕೆರೆ ಉದಯಶಂಕರ

ಇದು ಮೊಬೈಲ್ ಯುಗ. ಎಲ್ಲಿ ನೋಡಿದರಲ್ಲಿ ಮೊಬೈಲ್. ಕಷ್ಟಪಟ್ಟು ದುಡಿದ ಹಣವನ್ನು ಈ ಮೊಬೈಲಿಗಾಗಿ ಹಾಕಿದ ಬಳಿಕ ಅದು ಕೈಕೊಟ್ಟರೆ? ಯಾರೊಂದಿಗೂ ಮಾತನಾಡಲಾಗದ ಕಷ್ಟ. ಜೊತೆಗೆ ಹಣವೂ ಹೋಯಿತಲ್ಲ ಎಂಬ ಚಿಂತೆ..!

ಆದರೆ ಗ್ರಾಹಕರು ಎದೆಗುಂದಬೇಕಾಗಿಲ್ಲ. ಗ್ರಾಹಕ ಸಂರಕ್ಷಣಾ ಕಾಯ್ದೆ ನಿಮ್ಮ ನೆರವಿಗೆ ಬರುತ್ತದೆ.

ಬೆಂಗಳೂರು ನಗರ ಜಿಲ್ಲಾ ಗ್ರಾಹಕ ಸಂರಕ್ಷಣಾ ನ್ಯಾಯಾಲಯವು ತನ್ನ ಮುಂದೆ ಬಂದ ಇಂತಹ ಪ್ರಕರಣವೊಂದರಲ್ಲಿ ಅರ್ಜಿದಾರನಿಗೆ ನ್ಯಾಯ ಒದಗಿಸಿದೆ.

ಈ ಪ್ರಕರಣದ ಅರ್ಜಿದಾರರು: ಬೆಂಗಳೂರು ಚಾಮರಾಜಪೇಟೆಯ ನಿವಾಸಿ ಕೃಷ್ಣಮೂರ್ತಿ. ಪ್ರತಿವಾದಿಗಳು: (1) ಬೆಂಗಳೂರು ಚಾಮರಾಜ ಪೇಟೆಯ ವಿ. ಮೊಬೈಲ್ಸ್ ಮತ್ತು (2) ಸೋನಿ ಎರಿಕ್ಸನ್ ಕೋರಮಂಗಲ, ಬೆಂಗಳೂರು.

ಅರ್ಜಿದಾರ ಕೃಷ್ಣಮೂರ್ತಿ ದೂರಿನ ಪ್ರಕಾರ ಅವರು 4-9-2007ರಂದು ಎರಡನೇ ಪ್ರತಿವಾದಿ ಸೋನಿ ಎರಿಕ್ಸನ್ ಅವರಿಂದ 3750 ರೂಪಾಯಿ ಬೆಲೆ ಹಾಗೂ 150 ರೂಪಾಯಿ ತೆರಿಗೆ ಪಾವತಿ ಮಾಡಿ ಸೋನಿ ಎರಿಕ್ಸನ್ ಕೆ-200 ಮೊಬೈಲ್ ಹ್ಯಾಂಡ್ ಸೆಟ್ ಖರೀದಿಸಿದರು. ಅದಕ್ಕೆ ಒಂದು ವರ್ಷದ ವಾರಂಟಿ ನೀಡಲಾಗಿತ್ತು.

ಖರೀದಿಸಿದ ಮೊದಲ ದಿನದಿಂದಲೇ ಈ ಮೊಬೈಲ್ ಹ್ಯಾಂಡ್ ಸೆಟ್ ದೋಷಪೂರಿತವಾಗಿ ಇದ್ದುದನ್ನು ಅರ್ಜಿದಾರರು ಗಮನಿಸಿದರು.

ಅರ್ಜಿದಾರರು ತತ್ ಕ್ಷಣವೇ ಪ್ರತಿವಾದಿಯನ್ನು ಸಂಪರ್ಕಿಸಿ ಮೊಬೈಲನ್ನು ದುರಸ್ತಿ ಮಾಡಿಕೊಡುವಂತೆ ಅಥವಾ ಬದಲಾಯಿಸಿ ಬೇರೆ ಹ್ಯಾಂಡ್ ಸೆಟ್ ಕೊಡುವಂತೆ ಮನವಿ ಮಾಡಿದರು. ಆದರೆ ಪ್ರತಿವಾದಿಯು ಮೊಬೈಲನ್ನು ತತ್ ಕ್ಷಣ ದುರಸ್ತಿ ಮಾಡಿಕೊಡುವ ಬದಲು 23 ದಿನಗಳಿಗೂ ಹೆಚ್ಚು ಕಾಲ ಕಂಬ, ಕಂಬ ಸುತ್ತುವಂತೆ ಮಾಡಿದರು.

ಕೊನೆಗೆ 2007ರ ಸೆಪ್ಟೆಂಬರ್ 27ರಂದು ಪ್ರತಿವಾದಿಯು ದುರಸ್ತಿಗಾಗಿ ಅದನ್ನು ಅಂಗೀಕರಿಸಿದರು. ಆದರೆ ಅದರಲ್ಲಿನ ದೋಷ ಪತ್ತೆ ಹಚ್ಚುವಲ್ಲಿ ವಿಫಲರಾದರು. ತನ್ನದಲ್ಲದ ತಪ್ಪಿಗಾಗಿ ಅರ್ಜಿದಾರರು ಹಣ ನಷ್ಟದ ಜೊತೆಗೆ ಮಾನಸಿಕ ಹಿಂಸೆ ಅನುಭವಿಸಿದರು.

ತಾವು ಕಷ್ಟಪಟ್ಟು ಸಂಪಾದಿಸಿದ ಹಣವನ್ನು ಮೊಬೈಲಿಗಾಗಿ ಸುರಿದರೂ ಅದರ ಲಾಭ ಅವರಿಗೆ ಲಭಿಸಲಿಲ್ಲ.

ಇದು ಪ್ರತಿವಾದಿಯ ಪಾಲಿನ ಸೇವಾಲೋಪ ಎಂಬುದಾಗಿ ಭಾವಿಸಿದ ಅರ್ಜಿದಾರರು ತಮಗೆ ನ್ಯಾಯ ಒದಗಿಸುವಂತೆ ಕೋರಿ ಗ್ರಾಹಕ ನ್ಯಾಯಾಲಯದ ಮೆಟ್ಟಲೇರಿದರು.

ಅಧ್ಯಕ್ಷ ಎ.ಎಂ. ಬೆನ್ನೂರು, ಸದಸ್ಯರಾದ ಸೈಯದ್ ಉಸ್ಮಾನ್ ರಜ್ವಿ ಮತ್ತು ಯಶೋದಮ್ಮ ಅವರನ್ನು ಒಳಗೊಂಡ ಪೀಠವು ಅರ್ಜಿಯನ್ನು ದಾಖಲಿಸಿ ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಿತು.

ಮೊದಲ ಪ್ರತಿವಾದಿ ವಿ. ಮೊಬೈಲ್ಸ್ ಗೈರು ಹಾಜರಾದರೆ, ಎರಡನೇ ಪ್ರತಿವಾದಿ ಸೋನಿ ಎರಿಕ್ಸನ್ ಸಂಸ್ಥೆಯು, ಅರ್ಜಿದಾರರು ಮಾಡಿದ ಎಲ್ಲ ಆರೋಪಗಳನ್ನೂ ಅಲ್ಲಗಳೆದು ಪ್ರಮಾಣ ಪತ್ರ ಸಲ್ಲಿಸಿತು.

ಒಂದನೇ ಪ್ರತಿವಾದಿಯ ಗೈರು ಹಾಜರಿಯಲ್ಲೇ ವಿಚಾರಣೆ ಮುಂದುವರೆಸಿದ ನ್ಯಾಯಾಲಯ ಎರಡನೇ ಪ್ರತಿವಾದಿ ಪರ ವಕೀಲ ಸುಜಿತ್ ಸಿ. ಪಾಣಿ ಅವರ ಅಹವಾಲು ಅಲಿಸಿ, ಅರ್ಜಿದಾರರು ಮತ್ತು ಎರಡನೇ ಪ್ರತಿವಾದಿ ಸಲ್ಲಿಸಿದ ಪ್ರಮಾಣಪತ್ರ ಮತ್ತು ಇತರ ದಾಖಲೆಗಳನ್ನು ಪರಿಶೀಲಿಸಿತು.

ಅರ್ಜಿದಾರರು ತಾನು ಎರಡನೇ ಪ್ರತಿವಾದಿಯಿಂದ ಸೋನಿ ಎರಿಕ್ಸನ್ ಕೆ-200 ಮೊಬೈಲ್ ಖರೀದಿಸಿದ್ದುದಾಗಿ ನ್ಯಾಯಾಲಯಕ್ಕೆ ತಿಳಿಸಿದ್ದರು. ಆದರೆ ವಿಚಾರಣೆ, ದಾಖಲೆಗಳ ಪರಿಶೀಲನೆ ಕಾಲದಲ್ಲಿ ಅರ್ಜಿದಾರರು ಮೊಬೈಲ್ ಖರೀದಿಸಿದ್ದು ಮೊದಲನೇ ಪ್ರತಿವಾದಿಯಿಂದ ಹೊರತು ಎರಡನೇ ಪ್ರತಿವಾದಿಯಿಂದ ಅಲ್ಲ, ಆದರೆ ಮೊಬೈಲ್ ಸೆಟ್ ನಿರ್ಮಿತವಾದದ್ದು ಮಾತ್ರ ಎರಡನೇ ಪ್ರತಿವಾದಿಯಿಂದ ಎಂಬುದನ್ನು ನ್ಯಾಯಾಲಯ ಗಮನಿಸಿತು.

ವಾಸ್ತವವಾಗಿ ಅರ್ಜಿದಾರರು ಎರಡನೇ ಪ್ರತಿವಾದಿಯಿಂದ ನೇರವಾಗಿ ಮೊಬೈಲ್ ಖರೀದಿಸಲೂ ಇಲ್ಲ, ಅವರಿಂದ ಯಾವುದೇ ಸೇವೆಯನ್ನೂ ಪಡೆದಿಲ್ಲ ಎಂಬುದನ್ನು ಖಚಿತಪಡಿಸಿಕೊಂಡ ನ್ಯಾಯಾಲಯ, ಖರೀದಿಸಿದ್ದು, ಸೇವೆ ಪಡೆದದ್ದು ಒಂದನೇ ಪ್ರತಿವಾದಿಯಿಂದ ಎಂಬುದನ್ನು ಖಾತ್ರಿ ಮಾಡಿಕೊಂಡಿತು.

ಖರೀದಿಸಿದ ದಿನದಿಂದಲೇ ಮೊಬೈಲ್ ಹ್ಯಾಂಡ್ ಸೆಟ್ ಹಾಳಾಗಿದ್ದುದು, ದುರಸ್ತಿ ಅಥವಾ ಹ್ಯಾಂಡ್ ಸೆಟ್ ಬದಲಾವಣೆ ಕೋರಿದರೂ 23 ದಿನಗಳ ಕಾಲ ಮೊದಲ ಪ್ರತಿವಾದಿ ಅಡ್ಡಾಡಿಸಿದ್ದು, ಕೊನೆಗೆ 27-9-2007ರಂದು ದುರಸ್ತಿಗಾಗಿ ಹ್ಯಾಂಡ್ ಸೆಟ್ಟನ್ನು ಪಡೆದುಕೊಂಡದ್ದು, ದಾಖಲೆಗಳಿಂದ ಖಚಿತವಾಗುತ್ತದೆ ಎಂಬುದನ್ನು ನ್ಯಾಯಾಲಯ ಗಮನಕ್ಕೆ ತೆಗೆದುಕೊಂಡಿತು.

ದೋಷರಹಿತ ಮೊಬೈಲ್ ಸಲುವಾಗಿ ಹಣ ಹಾಕಿದ್ದರೂ ಅರ್ಜಿದಾರರಿಗೆ ಅದು ಉಪಯೋಗಕ್ಕೆ ಬಾರದೇ ಹೋದುದು, ದುರಸ್ತಿಗಾಗಿ ಪಡೆಯುವ ಮೂಲಕ ಅದು ದೋಷಯುಕ್ತವಾಗಿತ್ತು ಎಂಬುದನ್ನು ಒಂದನೇ ಪ್ರತಿವಾದಿ ಒಪ್ಪಿಕೊಂಡದ್ದನ್ನೂ ದಾಖಲೆಗಳು ಸ್ಪಷ್ಟ ಪಡಿಸುತ್ತವೆ ಎಂದು ನ್ಯಾಯಾಲಯ ತೀರ್ಮಾನಿಸಿತು.

ನ್ಯಾಯಾಲಯದಿಂದ ನೋಟಿಸ್ ಹೋದ ಬಳಿಕವೂ ಆಪಾದನೆಗಳಿಗೆ ಉತ್ತರಿಸದೆ ಮೌನವಾಗಿದ್ದುದು ಮತ್ತು ನ್ಯಾಯಾಲಯದ ಕಲಾಪಗಳಿಗೆ ಗೈರು ಹಾಜರಾಗುವ ಮೂಲಕ ಒಂದನೇ ಪ್ರತಿವಾದಿಯು ಅರ್ಜಿದಾರನ ಆರೋಪಗಳನ್ನು ಒಪ್ಪಿಕೊಂಡಿದ್ದಾರೆ ಎಂಬ ತೀರ್ಮಾನಕ್ಕೆ ನಾವು ಬರುವಂತೆ ಮಾಡುತ್ತದೆ ಎಂದು ನ್ಯಾಯಾಲಯ ಹೇಳಿತು.

ಈ ಹಿನ್ನೆಲೆಯಲ್ಲಿ ಅರ್ಜಿದಾರರು ಒಂದನೇ ಪ್ರತಿವಾದಿ ವಿರುದ್ಧದ ಸೇವಾಲೋಪದ ಆರೋಪ ಸಾಬೀತುಪಡಿಸುವಲ್ಲಿ ಸಫಲರಾಗಿದ್ದಾರೆ ಎಂದು ಅಭಿಪ್ರಾಯಪಟ್ಟ ನ್ಯಾಯಾಲಯ ಮೊಬೈಲ್ ಹ್ಯಾಂಡ್ ಸೆಟ್ಟನ್ನು ದುರಸ್ತಿಪಡಿಸಿ ಹಿಂತಿರುಗಿಸಬೇಕು, ದುರಸ್ತಿಯಾಗದ್ದಿದರೆ ಹೊಸ ಸೆಟ್ ನೀಡಬೇಕು, ಇಲ್ಲದೇ ಇದ್ದಲ್ಲಿ 3750 ರೂಪಾಯಿಗಳನ್ನು 500 ರೂಪಾಯಿ ಖಟ್ಲೆ ವೆಚ್ಚ ಸಹಿತವಾಗಿ ಮರುಪಾವತಿ ಮಾಡಬೇಕು ಎಂದು ಒಂದನೇ ಪ್ರತಿವಾದಿಗೆ ಆಜ್ಞಾಪಿಸಿತು.

ಎರಡನೇ ಪ್ರತಿವಾದಿ ಸಂಸ್ಥೆಯ ವಿರುದ್ಧದ ಆರೋಪವನ್ನು ತಳ್ಳಿಹಾಕಿದ ನ್ಯಾಯಾಲಯ ಅದರ ವಿರುದ್ಧದ ದೂರನ್ನು ವಜಾ ಮಾಡಿತು.

ಇಂದಿನ ಇತಿಹಾಸ History Today ಮೇ 22

ಇಂದಿನ ಇತಿಹಾಸ

ಮೇ 22

ಭಾರತದ (ಸಂವಿಧಾನದ 7ನೇ ಶೆಡ್ಯೂಲಿನಲ್ಲಿ ಸೇರ್ಪಡೆಯಾಗಿರುವ) ಯಾವುದೇ ಭಾಷೆಯ ಸೃಜನಾತ್ಮಕ ಸಾಹಿತ್ಯ ಕೃತಿಯನ್ನು ಗೌರವಿಸುವ ಸಲುವಾಗಿ ಜ್ಞಾನಪೀಠ ಪ್ರಶಸ್ತಿಯನ್ನು ಸ್ಥಾಪಿಸಲಾಯಿತು. 1965ರಲ್ಲಿ ಮೊದಲ ಪ್ರಶಸ್ತಿಯನ್ನು ಜಿ. ಶಂಕರ ಕುರುಪ್ ಅವರಿಗೆ ಮಲಯಾಳಂ ಕವನಗಳಿಗಾಗಿ ನೀಡಲಾಯಿತು.

2007: ತಮ್ಮ ನಿವಾಸದಲ್ಲಿ ಕೊಕೇನ್ ಹೊಂದಿದ್ದ ಆರೋಪದ ಮೇರೆಗೆ ಮಾಜಿ ಟೆಸ್ಟ್ ಕ್ರಿಕೆಟ್ ಆಟಗಾರ ಹಾಗೂ ವೀಕ್ಷಕ ವಿವರಣೆಗಾರ ಮಣಿಂದರ್ ಸಿಂಗ್ ಅವರನ್ನು ಬಂಧಿಸಲಾಯಿತು. ದೆಹಲಿಯ ಅವರ `ಪ್ರೀತ್ ವಿಹಾರ್' ನಿವಾಸದಿಂದ 1.5 ಗ್ರಾಂನಷ್ಟು ಕೊಕೇನ್ ವಶಪಡಿಸಿಕೊಳ್ಳಲಾಯಿತು. ಎಡಗೈ ಸ್ಪಿನ್ನರ್ ಮಣಿಂದರ್ 35 ಟೆಸ್ಟ್ ಹಾಗೂ 59 ಏಕದಿನ ಪಂದ್ಯಗಳಲ್ಲಿ ಭಾರತವನ್ನು ಪ್ರತಿನಿಧಿಸಿದ್ದರು.

2007: ಅವ್ಯವಹಾರಗಳಿಗಾಗಿ ತಮಗೆ ವಿಧಿಸಲಾಗಿರುವ ಸೆರೆವಾಸದ ವಿರುದ್ಧ ಮೇಲ್ಮನವಿ ಸಲ್ಲಿಸುವುದರ ಜೊತೆಗೆ ತಮ್ಮ ವಚನದಂತೆ 100 ಕೋಟಿ ಅಮೆರಿಕನ್ ಡಾಲರುಗಳನ್ನು ಧಾರ್ಮಿಕ ದತ್ತಿ ಸಂಸ್ಥೆಗಳಿಗೆ ದಾನ ನೀಡುವುದಾಗಿ ದಕ್ಷಿಣ ಕೊರಿಯಾದ ಪ್ರಮುಖ ಆಟೋಮೊಬೈಲ್ ಸಂಸ್ಥೆ ಹುಂಡೈ ಮೋಟಾರ್ಸ್ ಮುಖ್ಯಸ್ಥ ಚುಂಗ್ ಮೊಂಗ್ -ಕೂ ಪ್ರಕಟಿಸಿದರು.

2007: ಲಿಕ್ವಿಡ್ ಕ್ರಿಸ್ಟಲ್ ಡಿಸ್ ಪ್ಲೇ (ಎಲ್ಸಿಡಿ) ಜನಕ, ನೊಬೆಲ್ ಪ್ರಶಸ್ತಿ ಪುರಸ್ಕೃತ ಫ್ರಾನ್ಸಿನ ಪಿಯರೆ ಗಿಲಸ್ ಡೆ ಜನಸ್ (74) ಪ್ಯಾರಿಸ್ಸಿನಲ್ಲಿ ನಿಧನರಾದರು. 1991ರ ಭೌತಶಾಸ್ತ್ರ ನೊಬೆಲ್ ಪ್ರಶಸ್ತಿ ಪುರಸ್ಕೃತ ಡೆ ಜನಸ್ ಅವರು ಲಿಕ್ವಿಡ್ ಕ್ರಿಸ್ಟಲ್ ಮತ್ತು ಪಾಲಿಮಾರ್ಸ್ ಕ್ಷೇತ್ರಕ್ಕೆ ಮಹತ್ತರ ಕೊಡುಗೆ ನೀಡಿದವರು. ಎಲ್ಸಿಡಿ ತಂತ್ರಜ್ಞಾನ ಇಂದಿನ ಎಲೆಕ್ಟ್ರಾನಿಕ್ ಯುಗದಲ್ಲಿ ಪ್ರಮುಖ ಪಾತ್ರ ವಹಿಸಿದೆ. 1932ರಲ್ಲಿ ಜನಿಸಿದ ಡೆ ಜನಸ್ 1974ರಲ್ಲಿ ಪ್ರಕಟಿಸಿದ `ದಿ ಫಿಸಿಕ್ಸ್ ಆಫ್ ಲಿಕ್ವಿಡ್ ಕ್ರಿಸ್ಟಲ್ಸ್' ಈ ಕ್ಷೇತ್ರದ ಮಹತ್ವದ ಕೃತಿ ಎಂಬುದಾಗಿ ಹೆಸರು ಪಡೆದಿದೆ.

2007: ಹತ್ತು ಕೋಟಿ ರೂಪಾಯಿ ಮೌಲ್ಯದ ವಿದೇಶೀ ಕರೆನ್ಸಿ ಒಯ್ಯುವ ವೇಳೆ ಸಿಕ್ಕಿಬಿದ್ದ ನೈಜೀರಿಯಾ ರಾಜತಾಂತ್ರಿಕನನ್ನು ಆದಾಯ ತೆರಿಗೆ ಇಲಾಖೆ ಬಿಡುಗಡೆ ಮಾಡಿತು. ಆದರೆ ಹಣವನ್ನು ವಶಪಡಿಸಿಕೊಳ್ಳಲಾಯಿತು.

2006: ಬುಧಿಯಾಸಿಂಗ್ ಮ್ಯಾರಥಾನ್ ಓಟದಿಂದ ಪ್ರೇರಿತನಾದ ಒರಿಸ್ಸಾದ ಮತ್ತೊಬ್ಬ ಪೋರ, ಭುವನೇಶ್ವರದಿಂದ 15 ಕಿ.ಮೀ. ದೂರದ ಪಿಪ್ಲಿಯ 12 ವರ್ಷದ ಬಾಲಕ ದಿಲೀಪ ರಾಣಾ 45 ಕಿ.ಮೀ. ದೂರವನ್ನು ಐದೂವರೆ ತಾಸಿನಲ್ಲಿ ಕ್ರಮಿಸಿ ದಾಖಲೆ ನಿರ್ಮಿಸಿದ.

2006: ಕೇಂದ್ರೀಯ ಶಿಕ್ಷಣ ಸಂಸ್ಥೆಗಳಲ್ಲಿ ಮೀಸಲಾತಿ ಅನುಷ್ಠಾನಗೊಳಿಸುವುದನ್ನು ಪ್ರತಿಭಟಿಸಿ ರಾಷ್ಟ್ರೀಯ ಜ್ಞಾನ ಆಯೋಗದ ಇಬ್ಬರು ಪ್ರಮುಖ ಸದಸ್ಯರಾದ ಪ್ರತಾಪ್ ಭಾನು ಮೆಹ್ತಾ ಮತ್ತು ಆಂಡ್ರೆ ಬೆಟೀಲಿ ರಾಜೀನಾಮೆ ನೀಡಿದರು. ಬೆಂಗಳೂರಿನಲ್ಲಿ ಕೆಲ ದಿನಗಳ ಹಿಂದೆ ನಡೆದ ರಾಷ್ಟ್ರೀಯ ಜ್ಞಾನ ಆಯೋಗದ ಸಭೆಯಲ್ಲಿ ಮೀಸಲಾತಿ ಪ್ರಸ್ತಾವಗಳನ್ನು ವಿರೋಧಿಸಿದ ಆರು ಮಂದಿ ಸದಸ್ಯರಲ್ಲಿ ಮೆಹ್ತಾ ಮತ್ತು ಬೆಟೀಲಿ ಸೇರಿದ್ದು, ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ಆಯೋಗದ ಅಭಿಪ್ರಾಯಗಳನ್ನು ತೀವ್ರವಾಗಿ ಟೀಕಿಸಿದ್ದರು.

2006: ಪಾಕಿಸ್ತಾನಿ ಪ್ರಧಾನಿ ಶೌಕತ್ ಅಜೀಜ್ ಅವರ ಮೇಲೆ ವಿಫಲ ಆತ್ಮಹತ್ಯಾದಾಳಿ ನಡೆಸಿದ್ದಕ್ಕಾಗಿ ಪಾಕಿಸ್ತಾನದ ಭಯೋತ್ಪಾದನಾ ನಿಗ್ರಹ ನ್ಯಾಯಾಲಯವೊಂದು ನಾಲ್ಕು ಮಂದಿ ಉಗ್ರಗಾಮಿಗಳಿಗೆ ಮರಣದಂಡನೆ ಮತ್ತು ಇತರ ಮೂರು ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಿತು. ಸಾಕ್ಷ್ಯದ ಅಭಾವ ಕಾರಣ ಇನ್ನೊಬ್ಬ ಆರೋಪಿಯನ್ನು ಆರೋಪಮುಕ್ತ ಗೊಳಿಸಿತು. ರಾವಲ್ಪಿಂಡಿಯಲ್ಲಿನ ಭಯೋತ್ಪಾದನಾ ನಿಗ್ರಹ ನ್ಯಾಯಾಲಯದ ನ್ಯಾಯಾಧೀಶ ಸಫ್ದರ್ ಮಲಿಕ್ ಅವರು ಈ ತೀರ್ಪು ನೀಡಿದರು. 2004ರ ಜುಲೈ 30ರಂದು ಅಟೋಕ್ ಜಿಲ್ಲೆಯ ಫತೇ ಜಂಗ್ ಸಮೀಪದ ಜಾಫ್ರ್ ಮೋರ್ನಲ್ಲಿ ಶೌಕತ್ ಅಜೀಜ್ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದಾಗ ನಡೆದ ಈ ದಾಳಿಯಲ್ಲಿ 6 ಜನ ಸತ್ತು 48 ಮಂದಿ ಗಾಯಗೊಂಡಿದ್ದರು.

1989: ಭಾರತವು ಒರಿಸ್ಸಾದ ಚಂಡೀಪುರದಲ್ಲಿ `ಅಗ್ನಿ' ಕ್ಷಿಪಣಿಯನ್ನು ಹಾರಿಸಿತು. ಇದರೊಂದಿಗೆ ಭಾರತ ಜಗತ್ತಿನಲ್ಲಿ ಮಧ್ಯಂತರಗಾಮೀ ಯುದ್ಧ ಕ್ಷಿಪಣಿ ಸಾಮರ್ಥ್ಯ ಹೊಂದಿದ 6ನೇ ರಾಷ್ಟ್ರವಾಯಿತು.

1969: ಕಲಾವಿದ ಪ್ರಕಾಶ ಪಿ. ಶೆಟ್ಟಿ ಜನನ.

1967: ಕಲಾವಿದ ಸೋಮಶೇಖರ ಬಿಸಲ್ವಾಡಿ ಜನನ.

1961: ಭಾರತದ (ಸಂವಿಧಾನದ 7ನೇ ಶೆಡ್ಯೂಲಿನಲ್ಲಿ ಸೇರ್ಪಡೆಯಾಗಿರುವ) ಯಾವುದೇ ಭಾಷೆಯ ಸೃಜನಾತ್ಮಕ ಸಾಹಿತ್ಯ ಕೃತಿಯನ್ನು ಗೌರವಿಸುವ ಸಲುವಾಗಿ ಜ್ಞಾನಪೀಠ ಪ್ರಶಸ್ತಿಯನ್ನು ಸ್ಥಾಪಿಸಲಾಯಿತು. 1965ರಲ್ಲಿ ಮೊದಲ ಪ್ರಶಸ್ತಿಯನ್ನು ಜಿ. ಶಂಕರ ಕುರುಪ್ ಅವರಿಗೆ ಮಲಯಾಳಂ ಕವನಗಳಿಗಾಗಿ ನೀಡಲಾಯಿತು.

1961: ಕಲಾವಿದ ವಿಶ್ವನಾಥ ನಾಕೋಡ್ ಜನನ.

1960: `ಗಾಮಾ ಪೆಹಲ್ವಾನ್' ಎಂದೇ ಜನಪ್ರಿಯರಾಗಿದ್ದ ಭಾರತೀಯ ಕುಸ್ತಿಪಟು ಗುಲಾಂ ಮಹಮ್ಮದ್ ತಮ್ಮ 80ನೇ ವಯಸ್ಸಿನಲ್ಲಿ ಲಾಹೋರಿನಲ್ಲಿ ಮೃತರಾದರು. ಭಾರತೀಯ ಕುಸ್ತಿಯನ್ನು ಜನಪ್ರಿಯಗೊಳಿಸುವಲ್ಲಿ ಅವರು ಮಹತ್ವದ ಪಾತ್ರ ವಹಿಸಿದ್ದರು.

1949: ಕಲಾವಿದ ಎಸ್. ಕೆ. ರುದ್ರಮೂರ್ತಿ ಜನನ.

1940: ಭಾರತದ ಖ್ಯಾತ ಬೌಲರುಗಳಲ್ಲಿ ಒಬ್ಬರಾದ ಎರಪಲ್ಲಿ ಪ್ರಸನ್ನ ಹುಟ್ಟಿದ ದಿನ. 1970ರ ದಶಕದಲ್ಲಿ ಸ್ಪಿನ್ ಬೌಲರುಗಳಾದ ಬೇಡಿ, ಚಂದ್ರಶೇಖರ್ ಮತ್ತು ವೆಂಕಟರಾಘವನ್ ಜೊತೆಗೆ ಪ್ರಸನ್ನ ಕೂಡಾ ಮಿಂಚಿದ್ದರು.

1917: ಕಲಾವಿದ ಟಿ.ಎಸ್. ತಾತಾಚಾರ್ ಜನನ.

1916: ಕೀರ್ತನರತ್ನ, ಕೀರ್ತನ ಕೇಸರಿ ಇತ್ಯಾದಿ ಬಿರುದುಗಳಿಗೆ ಪಾತ್ರರಾಗಿದ್ದ ಖ್ಯಾತ ಕೀರ್ತನಕಾರ ಕೊಣನೂರು ಸೀತಾರಾಮ ಶಾಸ್ತ್ರಿ (22-5-1916ರಿಂದ 28-5-1970) ಅವರು ಶ್ರೀಕಂಠ ಶಾಸ್ತ್ರಿ ಅವರ ಮಗನಾಗಿ ಕೊಣನೂರಿನಲ್ಲಿ ಜನಿಸಿದರು.

1772: ಭಾರತದ ಧಾರ್ಮಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಸುಧಾರಕ ರಾಮಮೋಹನ್ ರಾಯ್ (1772-1833) ಜನ್ಮದಿನ. ಸಾಂಪ್ರದಾಯಿಕ ಹಿಂದೂ ಸಂಸ್ಕೃತಿಯನ್ನು ಪ್ರಶ್ನಿಸಿದ ಇವರನ್ನು `ಆಧುನಿಕ ಭಾರತದ ಪಿತಾಮಹ' ಎಂದು ಕರೆಯಲಾಗಿದೆ.

1545: ಕಾಲಿಂಜರಿನಲ್ಲಿ ಸಂಭವಿಸಿದ ಸ್ಫೋಟವೊಂದರಲ್ಲಿ ಆಫ್ಘನ್ ದೊರೆ ಶೇರ್ ಶಹ ಸೂರಿ ಅಸು ನೀಗಿದ.

(ಸಂಗ್ರಹ: ನೆತ್ರಕೆರೆ ಉದಯಶಂಕರ)

Wednesday, May 21, 2008

ಇಂದಿನ ಇತಿಹಾಸ History Today ಮೇ 21

ಇಂದಿನ ಇತಿಹಾಸ

ಮೇ 21

ಭಾರತದ ಮಾಜಿ ಪ್ರಧಾನಿ ರಾಜೀವ ಗಾಂಧಿ ಅವರನ್ನು ಎಲ್ಟಿಟಿಇ ಆತ್ಮಾಹುತಿ ದಳದ ವ್ಯಕ್ತಿಯೊಬ್ಬ ಚೆನ್ನೈ ಸಮೀಪದ ಶ್ರೀಪೆರಂಬದೂರಿನಲ್ಲಿ ಬಾಂಬ್ ಸ್ಫೋಟಿಸಿ ಹತ್ಯೆಗೈದ. ಲೋಕಸಭಾ ಚುನಾವಣಾ ಪ್ರಚಾರ ಕಾಲದಲ್ಲಿ ಈ ಘಟನೆ ನಡೆಯಿತು.

2007: ಕಲಾನಿಧಿ ಮಾರನ್ ಮಾಲೀಕತ್ವದ `ಸನ್ ಟಿವಿ ನೆಟ್ ವರ್ಕ್' ಪ್ರತಿಸ್ಪರ್ಧಿ `ರಾಜ್ ಟಿವಿ'ಯು `ಕಳೈಗನಾರ್ ಟಿವಿ' ಎಂಬ ಹೊಸ ಚಾನೆಲನ್ನು ಶೀಘ್ರವೇ ಆರಂಭಿಸುವುದಾಗಿ ಪ್ರಕಟಿಸಿತು.

2007: ಕಾರ್ಯನಿರತ ಪತ್ರಕರ್ತರು ಮತ್ತು ಸುದ್ದಿ ಸಂಸ್ಥೆಗಳ ನೌಕರರ ವೇತನ ಪರಿಷ್ಕರಣೆಗೆ ಕೇಂದ್ರ ಸರ್ಕಾರವು ಎರಡು ಪ್ರತ್ಯೇಕ ಹೊಸ ವೇತನ ಮಂಡಳಿಗಳನ್ನು ನ್ಯಾಯಮೂರ್ತಿ ಕೆ. ನಾರಾಯಣ ಕುರುಪ್ ಅಧ್ಯಕ್ಷತೆಯಲ್ಲಿ ರಚಿಸಿತು.

2007: ನಟ ಸಂಜಯದತ್ ನಿವಾಸದಿಂದ ಎಕೆ 47 ಬಂದೂಕು ಹಾಗೂ ಮದ್ದು ಗುಂಡುಗಳನ್ನು ಹೊರಗೆ ಸಾಗಿಸಿದ್ದ ಆರೋಪಿ ಮನ್ಸೂರ್ ಅಹಮದ್ ಎಂಬಾತನಿಗೆ ವಿಶೇಷ ಟಾಡಾ ನ್ಯಾಯಾಲಯವು 10 ವರ್ಷಗಳ ಕಠಿಣ ಶಿಕ್ಷೆ ಮತ್ತು 50,000 ರೂಪಾಯಿಗಳ ದಂಡ ವಿಧಿಸಿತು.

2007: ವಿದೇಶಕ್ಕೆ ಅಕ್ರಮವಾಗಿ ಭಾರಿ ಮೊತ್ತದ ಹಣವನ್ನು ಸಾಗಿಸುತ್ತಿದ್ದ ಆರೋಪದ ಮೇಲೆ ನೈಜೀರಿಯಾದ ರಾಜತಾಂತ್ರಿಕನೊಬ್ಬನನ್ನು ಆದಾಯ ತೆರಿಗೆ ಅಧಿಕಾರಿಗಳು ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಿ ಆತನಿಂದ 2.27 ದಶಲಕ್ಷ (22.7 ಕೋಟಿ) ಅಮೆರಿಕನ್ ಡಾಲರುಗಳನ್ನು (ಅಂದಾಜು 10 ಕೋಟಿ ರೂಪಾಯಿ) ವಶ ಪಡಿಸಿಕೊಂಡರು.

2006: ಯುರೋಪಿನಲ್ಲಿ ತನ್ನ ಪ್ರತಿಸ್ಪರ್ಧಿಯಾಗಿರುವ ಆರ್ಸೆಲರ್ ಸಂಸ್ಥೆಯನ್ನು ಸ್ವಾಧೀನಕ್ಕೆ ತೆಗೆದುಕೊಂಡು ವಿಶ್ವದಲ್ಲಿಯೇ ಅತಿ ದೊಡ್ಡದಾದ ಉಕ್ಕು ತಯಾರಿಕೆಯ ಪ್ರಶ್ನಾತೀತ ಸಂಸ್ಥೆಯಾಗುವ ನಿರ್ಧಾರವನ್ನು ಮಿತ್ತಲ್ ಸ್ಟೀಲ್ ಸಂಸ್ಥೆ ಪ್ರಕಟಿಸಿತು.

2006: ಭಾರತದ ತಾರಾಪುರ ಪರಮಾಣು ವಿದ್ಯುತ್ ಯೋಜನೆಯ ಎರಡನೆಯ ಅತಿದೊಡ್ಡ ರಿಯಾಕ್ಟರ್ ಘಟಕವು ಮಹಾರಾಷ್ಟ್ರದ ತಾರಾಪುರದಲ್ಲಿ ಈದಿನ ಬೆಳಗ್ಗೆ 10.44 ಗಂಟೆಗೆ ಕಾರ್ಯಾರಂಭ ಮಾಡಿತು. ತಾರಾಪುರ ಪರಮಾಣು ವಿದ್ಯುತ್ ಯೋಜನೆಯ ಆವರಣವು ಒಟ್ಟು 4 ಪರಮಾಣು ರಿಯಾಕ್ಟರ್ ಘಟಕಗಳನ್ನು ಹೊಂದಿದೆ.

1994: ಮನಿಲಾದಲ್ಲಿ `ಮಿಸ್ ಯುನಿವರ್ಸ್' (ಭುವನ ಸುಂದರಿ) ಕಿರೀಟ ಧರಿಸಿದ ಸುಶ್ಮಿತಾ ಸೇನ್ ಈ ಸಾಧನೆ ಮಾಡಿದ ಪ್ರಥಮ ಭಾರತೀಯರೆಂಬ ಹೆಗ್ಗಳಿಕೆಗೆ ಪಾತ್ರರಾದರು.

1991: ಭಾರತದ ಮಾಜಿ ಪ್ರಧಾನಿ ರಾಜೀವ ಗಾಂಧಿ ಅವರನ್ನು ಎಲ್ಟಿಟಿಇ ಆತ್ಮಾಹುತಿ ದಳದ ವ್ಯಕ್ತಿಯೊಬ್ಬ ಚೆನ್ನೈ ಸಮೀಪದ ಶ್ರೀಪೆರಂಬದೂರಿನಲ್ಲಿ ಬಾಂಬ್ ಸ್ಫೋಟಿಸಿ ಹತ್ಯೆಗೈದ. ಲೋಕಸಭಾ ಚುನಾವಣಾ ಪ್ರಚಾರ ಕಾಲದಲ್ಲಿ ಈ ಘಟನೆ ನಡೆಯಿತು.

1964: ಅತಿ ಕಿರಿಯ ವಯಸಿನಲ್ಲೇ ಸುಗಮ ಸಂಗೀತ ಕ್ಷೇತ್ರವನ್ನು ಶ್ರೀಮಂತಗೊಳಿಸಲು ಶ್ರಮಿಸಿದ ವಿಜಯ ಕುಮಾರ ಅತ್ರಿ (21-5-1964ರಿಂದ 30-5-2000) ಅವರು ಎನ್. ಗಣೇಶ್- ಬಿ.ಎನ್. ನಾಗರತ್ನಮ್ಮ ದಂಪತಿಯ ಮಗನಾಗಿ ಕನಕಪುರದದಲ್ಲಿ ಜನಿಸಿದರು. ರಾಮಕೃಷ್ಣಾಶ್ರಮದ ಕಾರ್ಯಕ್ರಮಗಳಿಂದ ಹಾಡುಗಾರಿಕೆ ಆರಂಭಿಸಿದ ಅವರು 300ಕ್ಕೂ ಹೆಚ್ಚು ಕ್ಯಾಸೆಟ್ಟುಗಳಲ್ಲಿ ಹಾಡಿದ್ದಾರೆ. ಹಲವಾರು ಪ್ರಶಸ್ತಿಗಳಿಗೆ ಪಾತ್ರರಾಗಿದ್ದಾರೆ. ಹೆಂಡತಿಯ ಊರಾದ ಶೃಂಗೇರಿಯ ಬಳಿ `ಉಳುಮೆ ಬೈಲು' ಜೈ ಶಂಕರ್ ಯುವಕ ಸಂಘದ ಕಾರ್ಯಕ್ರಮದಲ್ಲಿ ಹಾಡಿದ ಮರುದಿನ ತುಂಗಾನದಿಯಲ್ಲಿ ಆಕಸ್ಮಿಕಕ್ಕೆ ಒಳಗಾಗಿ ಕುಟುಂಬದ ಐವರು ಸದಸ್ಯರೊಂದಿಗೆ ಅಸು ನೀಗಿದ್ದು ಒಂದು ದೊಡ್ಡ ದುರಂತ.

1963: ಕಲಾವಿದ ಶೇಖನ ಗೌಡ ಕೆ.ಪಿ. ಜನನ.

1954: ಕಲಾವಿದ ಚಂದ್ರಕಾಂತ್ ಎಂ. ಜನನ.

1943: ಕಲಾವಿದ ವಿ.ಎಂ. ನಾಗರಾಜ್ ಜನನ.

1932: ಕಾದಂಬರಿಗಾರ್ತಿ ಸುನೀತಾ ಕೃಷ್ಣಸ್ವಾಮಿ (21-5-1932ರಿಂದ 14-8-2000) ಅವರು ಮೈಸೂರಿನಲ್ಲಿ ಸುಬ್ಬರಾವ್- ಪಾರ್ವತಮ್ಮ ದಂಪತಿಯ ಮಗಳಾಗಿ ಈದಿನ ಜನಿಸಿದರು.

1928: ಕಲಾವಿದ ಶ್ರೀನಿವಾಸಯ್ಯ ಕೆ.ಟಿ. ಜನನ.

1927: ಅಟ್ಲಾಂಟಿಕ್ ಸಾಗರದ ಮೇಲಿನಿಂದ ಮೂವತ್ತಮೂರುವರೆ ತಾಸುಗಳಲ್ಲಿ ಏಕವ್ಯಕ್ತಿ ವಿಮಾನ ಹಾರಾಟವನ್ನು ಪೂರ್ಣಗೊಳಿಸಿದ ಚಾರ್ಲ್ಸ್ ಎ ಲಿಂಡ್ ಬರ್ಗ್ ತಮ್ಮ `ಸ್ಪಿರಿಟ್ ಆಫ್ ಸೇಂಟ್ ಲೂಯಿ' ವಿಮಾನವನ್ನು ಲೆ ಬರ್ಗರ್ ವಿಮಾನನಿಲ್ದಾಣದಲ್ಲಿ ಇಳಿಸಿದರು.

1921: ಸೋವಿಯತ್ ಒಕ್ಕೂಟದ ವಿಜ್ಞಾನಿ ನೊಬೆಲ್ ಪ್ರಶಸ್ತಿ ಪುರಸ್ಕೃತ ಆಂದ್ರೇಯಿ ಸಖರೋವ್ (1921-89) ಜನ್ಮದಿನ. ಇವರು ಸೋವಿಯತ್ ಒಕ್ಕೂಟದ ಕಮ್ಯೂನಿಸ್ಟ್ ಸರ್ಕಾರದ ಜೊತೆಗಿನ ತಮ್ಮ ಭಿನ್ನಮತದಿಂದಾಗಿ ಜಾಗತಿಕ ಖ್ಯಾತಿ ಗಳಿಸಿದ್ದರು.

1960: ರಷ್ಯದ ಈಜುಗಾರ್ತಿ ವ್ಲಾಡಿಮೀರ್ ಸಾಲ್ನಿಕೋವ್ ಜನ್ಮದಿನ. ನಾಲ್ಕು ಒಲಿಂಪಿಕ್ಸ್ ಚಿನ್ನದ ಪದಕಗಳನ್ನು ಗೆದ್ದ ಈಕೆ 1500 ಮೀಟರ್ ಫ್ರೀಸ್ಟೈಲ್ ಈಜು ಸ್ಪರ್ಧೆಯಲ್ಲಿ 15 ನಿಮಿಷಗಳ ಒಳಗೆ ಕ್ರಮಿಸಿದ ಮೊದಲಿಗರೆನಿಸಿದರು.

1787: ಲಾರ್ಡ್ಸ್ಸ್ ಕ್ರಿಕೆಟ್ ಮೈದಾನದಲ್ಲಿ ಮೊತ್ತ ಮೊದಲ ಕ್ರಿಕೆಟ್ ಪಂದ್ಯ ನಡೆಯಿತು. ಈ ಪಂದ್ಯ ವೈಟ್ ಕಂಡ್ಯೂಟ್ ಕ್ಲಬ್ ಹಾಗೂ ಮಿಡ್ಲ್ ಸೆಕ್ಸ್ ಮಧ್ಯೆ ನಡೆಯಿತು.

(ಸಂಗ್ರಹ: ನೆತ್ರಕೆರೆ ಉದಯಶಂಕರ)

Advertisement